Homeಕರ್ನಾಟಕಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

- Advertisement -
- Advertisement -

ಅಮೆರಿಕದ ಕಾನ್ಸುಲೇಟ್ ಕಚೇರಿಯ ಶಾಖೆಯು ಇಂದಿನಿಂದ (ಜನವರಿ 17, 2025 ಶುಕ್ರವಾರ) ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಲಿದೆ.

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಮತ್ತು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗ್ಯಾರ್‌ಸೆಟ್‌ ಅವರು ನೂತನ ಕಚೇರಿಗೆ ಚಾಲನೆ ನೀಡಲಿದ್ದಾರೆ.

ನಗರದ ವಿಠ್ಠಲ್ ಮಲ್ಯ ರಸ್ತೆಯ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ವಿದೇಶಾಂಗ ವಾಣಿಜ್ಯ ವ್ಯವಹಾರಗಳ ಸೇವಾ ಕಚೇರಿ ಇದ್ದು, ಅದಕ್ಕೆ ಹೊಂದಿಕೊಂಡಂತೆಯೇ ನೂತನ ಕಾನ್ಸುಲೇಟ್ ಆರಂಭಿಸಲಾಗುತ್ತಿದೆ.

ಇದು ತಾತ್ಕಾಲಿಕ ಕಚೇರಿಯಾಗಿದ್ದು, ಮುಂದಿನ ದಿನಗಳಲ್ಲಿ ಹೊಸ ಕಚೇರಿಗೆ ಕಾನ್ಸುಲೇಟ್ ಸ್ಥಳಾಂತರಗೊಳ್ಳಲಿದೆ ಎಂದು ವರದಿಯಾಗಿದೆ.

ಬಹು ನಿರೀಕ್ಷಿತ ಕಾನ್ಸುಲೇಟ್ ಕಚೇರಿ ಆರಂಭಗೊಳ್ಳುತ್ತಿದ್ದಂತೆ ಅದರ ಕ್ರೆಡಿಟ್ ಪಡೆಯಲುಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿತ್ತಾಟ ಶುರುವಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಾನ್ಸುಲೇಟ್ ಕಚೇರಿ ಆರಂಭದ ಸಂಪೂರ್ಣ ಕ್ರೆಡಿಟ್ ಕೇಂದ್ರ ಸರ್ಕಾರಕ್ಕೆ ಕೊಟ್ಟರೆ, ಕರ್ನಾಟಕ ಸರ್ಕಾರದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಾವು ಮಾಡಿದ್ದು ಎನ್ನುತ್ತಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಕಾನ್ಸುಲೇಟ್ ಕಚೇರಿ ತೆರೆಯುವ ಕನಸು ನನಸಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಶ್ಲಾಘಿಸಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ, ಸೂರ್ಯ ಅವರು 2019 ರಿಂದ ಕಾನ್ಸುಲೇಟ್ ಪರವಾಗಿ ವಕಾಲತ್ತು ವಹಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮಾರ್ಚ್ 2023ರಲ್ಲಿ ಬೆಂಗಳೂರು ಭೇಟಿಯ ಸಮಯದಲ್ಲಿ ಸಚಿವ ಜೈಶಂಕರ್ ಅವರಿಗೆ ಬರೆದ ಪತ್ರ ಮತ್ತು ಚರ್ಚೆಗಳನ್ನು ಉಲ್ಲೇಖಿಸಿದ್ದಾರೆ.

ಸಚಿವ ಜೈಶಂಕರ್ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ‘ಮೈಸೂರು ಪಾಕ್’ ಕೊಟ್ಟು ಧನ್ಯವಾದ ಸಲ್ಲಿಸಿದ್ದಾರೆ. “ಪ್ರಧಾನ ಮಂತ್ರಿಗಳು ಮತ್ತು ನಿಮ್ಮಿಂದ ಇದು ಸಾಕಾರಾವಾಯಿತು” ಎಂದಿದ್ದಾರೆ.

ತೇಜಸ್ವಿ ಸೂರ್ಯ ಅವರಿಗೆ ತಿರುಗೇಟು ಕೊಟ್ಟಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ” ಬಿಜೆಪಿ ಅನಗತ್ಯ ಕ್ರೆಡಿಟ್ ಪಡೆದು ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ. ಹೂಡಿಕೆ ಮತ್ತು ವ್ಯಾಪಾರಕ್ಕೆ ಜಾಗತಿಕ ಕೇಂದ್ರವಾಗಿರುವ ಬೆಂಗಳೂರಿನ ಸ್ಥಾನಮಾನವು ರಾಜಕೀಯ ಪ್ರಭಾವವನ್ನು ಲೆಕ್ಕಿಸದೆ ಸ್ವಾಭಾವಿಕವಾಗಿಯೇ ಅಮೆರಿಕದ ದೂತಾವಾಸಕ್ಕೆ ಸೂಕ್ತ ಸ್ಥಳವಾಗಿದೆ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, “ಗುಜರಾತ್‌ನಲ್ಲಿ ಕಾನ್ಸುಲೇಟ್ ಕಚೇರಿ ಸ್ಥಾಪಿಸಲು ಆದ್ಯತೆ ನೀಡಬೇಕು ಎಂಬ ಸುಪ್ರೀಂ ನಾಯಕನ ಒತ್ತಡವು ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲು ಹೇಗೆ ವಿಳಂಬವಾಯಿತು ಎಂಬುದರ ಕುರಿತು ಬಿಜೆಪಿ ಸಂಸದರು ಮತ್ತು ಸಚಿವ ಜೈಶಂಕರ್ ಅವರು ಪ್ರಾಮಾಣಿಕವಾಗಿ ಮಾತನಾಡಬೇಕು” ಎಂದು ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ಮೋದಿಯವ ಹೆಸರನ್ನು ಉಲ್ಲೇಖಿಸದೆ ಟಾಂಗ್ ಕೊಟ್ಟಿದ್ದಾರೆ.

“ಕಾನ್ಸುಲೇಟ್ ಸ್ಥಾಪಿಸುವ ನಿರ್ಧಾರವು ಆರ್ಥಿಕ ಆದ್ಯತೆಗಳ ಆಧಾರದ ಮೇಲೆ ಸರ್ಕಾರಗಳ ನಡುವಿನ ಪರಸ್ಪರ ಒಪ್ಪಂದವಾಗಿದೆಯೇ ಹೊರತು, ಬಿಜೆಪಿ ಸಂಸದರು ಅಥವಾ ವಿದೇಶಾಂಗ ಸಚಿವರ ಆಶಯಗಳು ಅಥವಾ ವೈಯಕ್ತಿಕ ಆದ್ಯತೆಗಳ ಮೇಲೆ ಅಲ್ಲ” ಎಂದು ಪ್ರಿಯಾಂಕ್ ಖರ್ಗೆ ಒತ್ತಿ ಹೇಳಿದ್ದಾರೆ.

ಭಾರತದಲ್ಲಿನ ಅಮೆರಿಕದ ರಾಯಭಾರಿ ಎರಿಕ್ ಗ್ಯಾರ್‌ಸೆಟ್ ಅವರು ಡಿಸೆಂಬರ್ 2024ರಲ್ಲಿ ನವದೆಹಲಿಯಲ್ಲಿ ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ (ಯುಎಸ್ಐಬಿಸಿ) ಆಯೋಜಿಸಿದ್ದ ಅಧಿವೇಶನದಲ್ಲಿ 2025ರಲ್ಲಿ ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಲಾಗುವುದು ಎಂದು ಘೋಷಿಸಿದ್ದರು.

ಆ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್ ಖರ್ಗೆ ಅವರು “ಭರವಸೆ ನೀಡಿದಂತೆ ನಡೆದುಕೊಳ್ಳಲಾಗಿದೆ. ಕಳೆದ ಕೆಲವು ವರ್ಷಗಳಿಂದ ನಾನು ಅಮೆರಿಕದ ಪ್ರತಿನಿಧಿಗಳೊಂದಿಗೆ ಚರ್ಚೆಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯುವ ಅಗತ್ಯವನ್ನು ಒತ್ತಿ ಹೇಳುತ್ತಿದ್ದೇನೆ. ಈ ಪ್ರಯತ್ನಗಳು ಫಲಪ್ರದವಾಗುವುದನ್ನು ನೋಡಲು ಸಂತೋಷವಾಗುತ್ತಿದೆ” ಎಂದು ಹೇಳಿದ್ದರು.

ಕಾನ್ಸುಲೇಟ್ ಉದ್ಘಾಟನೆ ಮಹತ್ವದ್ದಾಗಿದ್ದರೂ, ಆರಂಭದಲ್ಲಿ ಇದು ಅಮೆರಿಕದ ನಾಗರಿಕರು ಮತ್ತು ವ್ಯವಹಾರಗಳಿಗೆ ಮಾತ್ರ ಸೇವೆ ಸಲ್ಲಿಸಲಿದೆ. ವೀಸಾ ಸಂಸ್ಕರಣಾ ಸೇವೆಗಳು ಆರಂಭವಾಗಲು ಹೆಚ್ಚುವರಿ ಸಮಯ ತೆಗೆದುಕೊಳ್ಳುತ್ತದೆ ಎಂದು ಖರ್ಗೆ ತಿಳಿಸಿದ್ದಾರೆ. ಬಿಜೆಪಿ ನಾಯಕರು ಅದರ ಸಿದ್ಧತೆ ಮತ್ತು ವ್ಯಾಪ್ತಿಯ ಬಗ್ಗೆ ಜನರ ದಾರಿ ತಪ್ಪಿಸುವುದನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಜನರು ಯುಎಸ್‌ ವೀಸಾ ಮತ್ತು ಇತರ ಸೇವೆಗಳನ್ನು ಪಡೆಯುವ ಸಲುವಾಗು ಮುಂಬೈ, ಹೈದರಾಬಾದ್ ಮತ್ತು ಚೆನ್ನೈಗೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ತೆರೆಯಲಾಗುತ್ತಿದೆ.

ಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ – ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...