Homeಕರ್ನಾಟಕಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಆರೋಪಿ ಬಿಜೆಪಿ ಕಾರ್ಪೊರೇಟರ್ ತಮ್ಮ!

ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಆರೋಪಿ ಬಿಜೆಪಿ ಕಾರ್ಪೊರೇಟರ್ ತಮ್ಮ!

ಆರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಇದು ವೈಯಕ್ತಿಕ ದ್ವೇಷದ ಕಾರಣಕ್ಕೆ ನಡೆದ ಕೊಲೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಕ್ಲುಲ್ಲಕ ವಿಷಯಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕೊನೆಗೆ ವೇಣುಗೋಪಾಲ್ ನಾಯಕ್‌ ಎಂಬ ಯುವಕನ ಕೊಲೆಯಾಗಿತ್ತು. ಈ ಕುರಿತು ಬಿಜೆಪಿ ಪಕ್ಷವು ಪ್ರತಿಭಟನೆ ನಡೆಸಿದ್ದಲ್ಲದೆ ಸತ್ಯಶೋಧನೆ ನಡೆಸಲು ಮುಂದಾಗಿತ್ತು. ಆದರೆ ಕೊಲೆಯಲ್ಲಿ ಬಿಜೆಪಿ ಕಾರ್ಪೊರೇಟರ್ ಒಬ್ಬರ ತಮ್ಮನೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಿಜೆಪಿ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಶಾಸಕರಾದ ಸಿ.ಎನ್ ಅಶ್ವಥ್ ನಾರಾಯಣ್, ಶ್ರೀವತ್ಸ ಸಂಸದರಾದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಎನ್.ಮಹೇಶ್, ಪ್ರೀತಂಗೌಡ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷೆ ಮಂಜುಳಾ ಸೋಮಶೇಖರ್ ನಿಯೋಗ ಇಂದು ಟಿ.ನರಸೀಪುರಕ್ಕೆ ಭೇಟಿ ಮಾಡಿದ್ದಾರೆ. ವೇಣುಗೋಪಾಲ್ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿಗೆ ಸಾಂತ್ವಾನ ಹೇಳಿದ್ದಾರೆ.

ಕೊಲೆ ಪ್ರಕರಣದ ಆರೋಪಿಗಳಾದ ಮಣಿಕಂಠ, ಸಂದೇಶ್, ಅನಿಲ್, ಶಂಕರ್, ಮಂಜು ಮತ್ತು ಹ್ಯಾರಿಸ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಶಂಕರ್ ಆಲಿಯಾಸ್ ತುಪ್ಪ ಎನ್ನುವ ಆರೋಪಿಯ ಅಕ್ಕ ಮೈಸೂರು ಮಹಾನಗರ ಪಾಲಿಗೆಯ ಬಿಜೆಪಿ ಸದಸ್ಯರು ಎನ್ನಲಾಗುತ್ತಿದೆ. ಇದು ವೈಯಕ್ತಿಕ ದ್ವೇಷದ ಕಾರಣಕ್ಕೆ ನಡೆದ ಕೊಲೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ

ಟಿ ನರಸೀಪುರದಲ್ಲಿ ಧರ್ಮ ಜಾಗೃತಿ ಬಳಗದ ವತಿಯಿಂದ ಶನಿವಾರ ಹನುಮ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಣಿಕಂಠ ಮತ್ತು ಸಂದೇಶ್ ಎಂಬುವವರು ಬೈಕ್‌ನಲ್ಲಿ ಬಂದಿದ್ದಕ್ಕೆ ಆಯೋಜಕರು ಮತ್ತು ವೇಣುಗೋಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿತ್ತು. ಆನಂತರ ಮಣಿಕಂಠ ಮತ್ತು ಸಂದೇಶ್ ಪುನೀತ್ ರಾಜ್‌ಕುಮಾರ್‌ ಫೋಟೊ ಇರುವ ಬ್ಯಾನರ್ ಹಾಕಲು ಮುಂದಾದಾದ ಅದನ್ನು ವೇಣುಗೋಪಾಲ್ ತಡೆದಿದ್ದು ಜಗಳ ಉಲ್ಭಣವಾಗಲು ಕಾರಣವಾಗಿತ್ತು.

ಕುಪಿತಗೊಂಡು ವೇಣುಗೋಪಾಲ್ ಮೇಲೆ ಹಗೆ ಸಾಧಿಸಿದ ಮಣಿಕಂಠ ಮತ್ತು ಸಂದೇಶ್ ಭಾನುವಾರ ಮಧ್ಯಾಹ್ನ ಶಾಮಿಯಾನ ಅಂಗಡಿಯಲ್ಲಿ ವೇಣುಗೋಪಾಲ್ ಜೊತೆ ಗಲಾಟೆ ಆರಂಭಿಸಿದ್ದರು. ಪೊಲೀಸರು ಬಂದಿದ್ದಕ್ಕೆ ಸುಮ್ಮನಾದ ಅವರು ಸಂಜೆ ವೇಳೆ ರಾಜಿ ಪಂಚಾಯ್ತಿಗೆ ಎಂದು ಮಾರುತಿ ಸರ್ವೀಸ್ ಸ್ಟೇಷನ್ ಬಳಿ ಕರೆಸಿಕೊಂಡು ಮದ್ಯದ ಬಾಟಲಿಗಳಿಂದ ಹೊಡೆದು, ಚಾಕುವಿನಿಂದ ಚುಚ್ಚಿ ಸಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವೇಣುಗೋಪಾಲ್ ನಾಯಕ್‌ ಸಹವರ್ತಿ ರಾಮಾನುಜಂ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಟಿ ನರಸೀಪುರ ಪೊಲೀಸರು ಮಣಿಕಂಠ ಮತ್ತು ಸಂದೇಶ್‌ರವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ನಾಯಕ ಜನಾಂಗದ ಮಣಿಕಂಠ, ಅನಿಲ್, ಕುರುಬ ಜನಾಂಗದ ಶಂಕರ, ಒಕ್ಕಲಿಗ ಜನಾಂಗದ ಸಂದೇಶ್ ಸೇರಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ; ದಲಿತ ಯುವತಿಯೊಂದಿಗೆ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿತ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...