Homeಕರ್ನಾಟಕಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಆರೋಪಿ ಬಿಜೆಪಿ ಕಾರ್ಪೊರೇಟರ್ ತಮ್ಮ!

ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಆರೋಪಿ ಬಿಜೆಪಿ ಕಾರ್ಪೊರೇಟರ್ ತಮ್ಮ!

ಆರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಇದು ವೈಯಕ್ತಿಕ ದ್ವೇಷದ ಕಾರಣಕ್ಕೆ ನಡೆದ ಕೊಲೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಕ್ಲುಲ್ಲಕ ವಿಷಯಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕೊನೆಗೆ ವೇಣುಗೋಪಾಲ್ ನಾಯಕ್‌ ಎಂಬ ಯುವಕನ ಕೊಲೆಯಾಗಿತ್ತು. ಈ ಕುರಿತು ಬಿಜೆಪಿ ಪಕ್ಷವು ಪ್ರತಿಭಟನೆ ನಡೆಸಿದ್ದಲ್ಲದೆ ಸತ್ಯಶೋಧನೆ ನಡೆಸಲು ಮುಂದಾಗಿತ್ತು. ಆದರೆ ಕೊಲೆಯಲ್ಲಿ ಬಿಜೆಪಿ ಕಾರ್ಪೊರೇಟರ್ ಒಬ್ಬರ ತಮ್ಮನೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಿಜೆಪಿ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಶಾಸಕರಾದ ಸಿ.ಎನ್ ಅಶ್ವಥ್ ನಾರಾಯಣ್, ಶ್ರೀವತ್ಸ ಸಂಸದರಾದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಎನ್.ಮಹೇಶ್, ಪ್ರೀತಂಗೌಡ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷೆ ಮಂಜುಳಾ ಸೋಮಶೇಖರ್ ನಿಯೋಗ ಇಂದು ಟಿ.ನರಸೀಪುರಕ್ಕೆ ಭೇಟಿ ಮಾಡಿದ್ದಾರೆ. ವೇಣುಗೋಪಾಲ್ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿಗೆ ಸಾಂತ್ವಾನ ಹೇಳಿದ್ದಾರೆ.

ಕೊಲೆ ಪ್ರಕರಣದ ಆರೋಪಿಗಳಾದ ಮಣಿಕಂಠ, ಸಂದೇಶ್, ಅನಿಲ್, ಶಂಕರ್, ಮಂಜು ಮತ್ತು ಹ್ಯಾರಿಸ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಶಂಕರ್ ಆಲಿಯಾಸ್ ತುಪ್ಪ ಎನ್ನುವ ಆರೋಪಿಯ ಅಕ್ಕ ಮೈಸೂರು ಮಹಾನಗರ ಪಾಲಿಗೆಯ ಬಿಜೆಪಿ ಸದಸ್ಯರು ಎನ್ನಲಾಗುತ್ತಿದೆ. ಇದು ವೈಯಕ್ತಿಕ ದ್ವೇಷದ ಕಾರಣಕ್ಕೆ ನಡೆದ ಕೊಲೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ

ಟಿ ನರಸೀಪುರದಲ್ಲಿ ಧರ್ಮ ಜಾಗೃತಿ ಬಳಗದ ವತಿಯಿಂದ ಶನಿವಾರ ಹನುಮ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಣಿಕಂಠ ಮತ್ತು ಸಂದೇಶ್ ಎಂಬುವವರು ಬೈಕ್‌ನಲ್ಲಿ ಬಂದಿದ್ದಕ್ಕೆ ಆಯೋಜಕರು ಮತ್ತು ವೇಣುಗೋಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿತ್ತು. ಆನಂತರ ಮಣಿಕಂಠ ಮತ್ತು ಸಂದೇಶ್ ಪುನೀತ್ ರಾಜ್‌ಕುಮಾರ್‌ ಫೋಟೊ ಇರುವ ಬ್ಯಾನರ್ ಹಾಕಲು ಮುಂದಾದಾದ ಅದನ್ನು ವೇಣುಗೋಪಾಲ್ ತಡೆದಿದ್ದು ಜಗಳ ಉಲ್ಭಣವಾಗಲು ಕಾರಣವಾಗಿತ್ತು.

ಕುಪಿತಗೊಂಡು ವೇಣುಗೋಪಾಲ್ ಮೇಲೆ ಹಗೆ ಸಾಧಿಸಿದ ಮಣಿಕಂಠ ಮತ್ತು ಸಂದೇಶ್ ಭಾನುವಾರ ಮಧ್ಯಾಹ್ನ ಶಾಮಿಯಾನ ಅಂಗಡಿಯಲ್ಲಿ ವೇಣುಗೋಪಾಲ್ ಜೊತೆ ಗಲಾಟೆ ಆರಂಭಿಸಿದ್ದರು. ಪೊಲೀಸರು ಬಂದಿದ್ದಕ್ಕೆ ಸುಮ್ಮನಾದ ಅವರು ಸಂಜೆ ವೇಳೆ ರಾಜಿ ಪಂಚಾಯ್ತಿಗೆ ಎಂದು ಮಾರುತಿ ಸರ್ವೀಸ್ ಸ್ಟೇಷನ್ ಬಳಿ ಕರೆಸಿಕೊಂಡು ಮದ್ಯದ ಬಾಟಲಿಗಳಿಂದ ಹೊಡೆದು, ಚಾಕುವಿನಿಂದ ಚುಚ್ಚಿ ಸಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವೇಣುಗೋಪಾಲ್ ನಾಯಕ್‌ ಸಹವರ್ತಿ ರಾಮಾನುಜಂ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಟಿ ನರಸೀಪುರ ಪೊಲೀಸರು ಮಣಿಕಂಠ ಮತ್ತು ಸಂದೇಶ್‌ರವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ನಾಯಕ ಜನಾಂಗದ ಮಣಿಕಂಠ, ಅನಿಲ್, ಕುರುಬ ಜನಾಂಗದ ಶಂಕರ, ಒಕ್ಕಲಿಗ ಜನಾಂಗದ ಸಂದೇಶ್ ಸೇರಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ; ದಲಿತ ಯುವತಿಯೊಂದಿಗೆ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿತ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...