Homeಕರ್ನಾಟಕಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಆರೋಪಿ ಬಿಜೆಪಿ ಕಾರ್ಪೊರೇಟರ್ ತಮ್ಮ!

ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಆರೋಪಿ ಬಿಜೆಪಿ ಕಾರ್ಪೊರೇಟರ್ ತಮ್ಮ!

ಆರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಇದು ವೈಯಕ್ತಿಕ ದ್ವೇಷದ ಕಾರಣಕ್ಕೆ ನಡೆದ ಕೊಲೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಕ್ಲುಲ್ಲಕ ವಿಷಯಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕೊನೆಗೆ ವೇಣುಗೋಪಾಲ್ ನಾಯಕ್‌ ಎಂಬ ಯುವಕನ ಕೊಲೆಯಾಗಿತ್ತು. ಈ ಕುರಿತು ಬಿಜೆಪಿ ಪಕ್ಷವು ಪ್ರತಿಭಟನೆ ನಡೆಸಿದ್ದಲ್ಲದೆ ಸತ್ಯಶೋಧನೆ ನಡೆಸಲು ಮುಂದಾಗಿತ್ತು. ಆದರೆ ಕೊಲೆಯಲ್ಲಿ ಬಿಜೆಪಿ ಕಾರ್ಪೊರೇಟರ್ ಒಬ್ಬರ ತಮ್ಮನೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಿಜೆಪಿ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಶಾಸಕರಾದ ಸಿ.ಎನ್ ಅಶ್ವಥ್ ನಾರಾಯಣ್, ಶ್ರೀವತ್ಸ ಸಂಸದರಾದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಎನ್.ಮಹೇಶ್, ಪ್ರೀತಂಗೌಡ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷೆ ಮಂಜುಳಾ ಸೋಮಶೇಖರ್ ನಿಯೋಗ ಇಂದು ಟಿ.ನರಸೀಪುರಕ್ಕೆ ಭೇಟಿ ಮಾಡಿದ್ದಾರೆ. ವೇಣುಗೋಪಾಲ್ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿಗೆ ಸಾಂತ್ವಾನ ಹೇಳಿದ್ದಾರೆ.

ಕೊಲೆ ಪ್ರಕರಣದ ಆರೋಪಿಗಳಾದ ಮಣಿಕಂಠ, ಸಂದೇಶ್, ಅನಿಲ್, ಶಂಕರ್, ಮಂಜು ಮತ್ತು ಹ್ಯಾರಿಸ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಶಂಕರ್ ಆಲಿಯಾಸ್ ತುಪ್ಪ ಎನ್ನುವ ಆರೋಪಿಯ ಅಕ್ಕ ಮೈಸೂರು ಮಹಾನಗರ ಪಾಲಿಗೆಯ ಬಿಜೆಪಿ ಸದಸ್ಯರು ಎನ್ನಲಾಗುತ್ತಿದೆ. ಇದು ವೈಯಕ್ತಿಕ ದ್ವೇಷದ ಕಾರಣಕ್ಕೆ ನಡೆದ ಕೊಲೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ

ಟಿ ನರಸೀಪುರದಲ್ಲಿ ಧರ್ಮ ಜಾಗೃತಿ ಬಳಗದ ವತಿಯಿಂದ ಶನಿವಾರ ಹನುಮ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜ ನರಸಿಂಹಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಣಿಕಂಠ ಮತ್ತು ಸಂದೇಶ್ ಎಂಬುವವರು ಬೈಕ್‌ನಲ್ಲಿ ಬಂದಿದ್ದಕ್ಕೆ ಆಯೋಜಕರು ಮತ್ತು ವೇಣುಗೋಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿತ್ತು. ಆನಂತರ ಮಣಿಕಂಠ ಮತ್ತು ಸಂದೇಶ್ ಪುನೀತ್ ರಾಜ್‌ಕುಮಾರ್‌ ಫೋಟೊ ಇರುವ ಬ್ಯಾನರ್ ಹಾಕಲು ಮುಂದಾದಾದ ಅದನ್ನು ವೇಣುಗೋಪಾಲ್ ತಡೆದಿದ್ದು ಜಗಳ ಉಲ್ಭಣವಾಗಲು ಕಾರಣವಾಗಿತ್ತು.

ಕುಪಿತಗೊಂಡು ವೇಣುಗೋಪಾಲ್ ಮೇಲೆ ಹಗೆ ಸಾಧಿಸಿದ ಮಣಿಕಂಠ ಮತ್ತು ಸಂದೇಶ್ ಭಾನುವಾರ ಮಧ್ಯಾಹ್ನ ಶಾಮಿಯಾನ ಅಂಗಡಿಯಲ್ಲಿ ವೇಣುಗೋಪಾಲ್ ಜೊತೆ ಗಲಾಟೆ ಆರಂಭಿಸಿದ್ದರು. ಪೊಲೀಸರು ಬಂದಿದ್ದಕ್ಕೆ ಸುಮ್ಮನಾದ ಅವರು ಸಂಜೆ ವೇಳೆ ರಾಜಿ ಪಂಚಾಯ್ತಿಗೆ ಎಂದು ಮಾರುತಿ ಸರ್ವೀಸ್ ಸ್ಟೇಷನ್ ಬಳಿ ಕರೆಸಿಕೊಂಡು ಮದ್ಯದ ಬಾಟಲಿಗಳಿಂದ ಹೊಡೆದು, ಚಾಕುವಿನಿಂದ ಚುಚ್ಚಿ ಸಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವೇಣುಗೋಪಾಲ್ ನಾಯಕ್‌ ಸಹವರ್ತಿ ರಾಮಾನುಜಂ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಟಿ ನರಸೀಪುರ ಪೊಲೀಸರು ಮಣಿಕಂಠ ಮತ್ತು ಸಂದೇಶ್‌ರವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ನಾಯಕ ಜನಾಂಗದ ಮಣಿಕಂಠ, ಅನಿಲ್, ಕುರುಬ ಜನಾಂಗದ ಶಂಕರ, ಒಕ್ಕಲಿಗ ಜನಾಂಗದ ಸಂದೇಶ್ ಸೇರಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ; ದಲಿತ ಯುವತಿಯೊಂದಿಗೆ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿತ: ಇಬ್ಬರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...