HomeUncategorizedಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭ್ರಷ್ಟಾಚಾರ ಬಯಲಿಗೆ: 40% ಕಮಿಷನ್ ಆರೋಪಕ್ಕೆ ಇಷ್ಟು ಸಾಕ್ಷಿ ಸಾಕಲ್ಲವೇ?

ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭ್ರಷ್ಟಾಚಾರ ಬಯಲಿಗೆ: 40% ಕಮಿಷನ್ ಆರೋಪಕ್ಕೆ ಇಷ್ಟು ಸಾಕ್ಷಿ ಸಾಕಲ್ಲವೇ?

ಈಗ ಒಬ್ಬ ಶಾಸಕನ ಪುತ್ರನ ಮನೆಯಲ್ಲಿ ಇಷ್ಟೊಂದು ಹಣ ಸಿಕ್ಕಿದೆ ಎಂದಾದರೆ ಅಷ್ಟೂ ಶಾಸಕರು-ಸಚಿವರ ಮೇಲೆ ತನಿಖೆ ನಡೆಸಿದರೆ ಸಾವಿರಾರು ಕೋಟಿ ರೂ ಪತ್ತೆಯಾಗುವುದಲ್ಲಿ ಅನುಮಾನವಿಲ್ಲ.

- Advertisement -
- Advertisement -

ಮೊಟ್ಟಮೊದಲ ಬಾರಿಗೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯವಾದ ಕರ್ನಾಟಕದಲ್ಲಿ ಆಡಳಿತ ಪಕ್ಷದ ಶಾಸಕನ ಪುತ್ರನ ಕಚೇರಿ ಮತ್ತು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಕರ್ನಾಟಕದ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ಅದು ಗೃಹ ಸಚಿವ ಅಮಿತ್ ‍ಶಾ ರಾಜ್ಯದಲ್ಲಿ ಇರುವಾಗಲೇ ಬಿಜೆಪಿಗೆ ಶಾಕಿಂಗ್ ನ್ಯೂಸ್ ಅಪ್ಪಳಿಸಿದೆ. ಕೆಲದಿನಗಳ ಹಿಂದಷ್ಟೆ ಅಮಿತ್ ಶಾ ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಅತಿ ಭ್ರಷ್ಟರನ್ನು ಪಕ್ಷದಲ್ಲೇ ಇಟ್ಟುಕೊಂಡು ಯಾವ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತಾರೆ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದುವರೆಗೂ ಬಿಜೆಪಿಯ ದಾಳಿಗೆ ವಿಪಕ್ಷಗಳು, ಸ್ವತಂತ್ರ ಮಾಧ್ಯಮಗಳು ಗುರಿಯಾಗಿದ್ದವು. ಅಲ್ಲದೆ ವಾಷಿಂಗ್ ಮೆಷಿನ್ ಪಕ್ಷ ಎಂದು ಬಿಜೆಪಿಯನ್ನು ದೂರಲಾಗುತ್ತಿತ್ತು. ಏಕೆಂದರೆ ವಿರೋಧ ಪಕ್ಷಗಳಲ್ಲಿದ್ದ ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಹಲವು ಮುಖಂಡರು ಬಿಜೆಪಿ ಸೇರಿ ಅಧಿಕಾರ ಅನುಭವಿಸುತ್ತಿದ್ದಾರೆ. ಆದರೆ ಮೊದಲ ಬಾರಿಗೆ ಕರ್ನಾಟಕದಲ್ಲಿ ಭ್ರಷ್ಟಾಚಾರದ ಬಲೆಗೆ ಬಿಜೆಪಿ ಶಾಸಕನ ಪುತ್ರ ಬಿದ್ದಿದ್ದಾರೆ. ಇನ್ನು ಕರ್ನಾಟಕದ ಬಿಜೆಪಿ ಸರ್ಕಾರ ಯಾವುದೇ ಕಾಮಗಾರಿಯಲ್ಲಿ 40% ಕಮಿಷನ್ ಕೇಳುತ್ತದೆ ಎಂಬ ಆರೋಪವಿರುವ ಸಮಯದಲ್ಲಿಯೇ ಈ ಪ್ರಕರಣ ಜರುಗಿದೆ.

ಚನ್ನಗಿರಿ ಕ್ಷೇತ್ರದ ಬಿಜೆಪಿ ಎಂಎಲ್‌ಎ, ಕೆ ಎಸ್ ಡಿ ಎಲ್ ಅಧ್ಯಕ್ಷ ಮಾಡಾಳ್ ವಿರುಪಾಕ್ಷಪ್ಪರವರ ಪುತ್ರ ಪ್ರಶಾಂತ್ ಮಾಡಾಳ್ ತಮ್ಮ ತಂದೆಯ ಪರವಾಗಿ 40 ಲಕ್ಷ ರೂ ಲಂಚ ವಸೂಲಿ ಮಾಡುವಾಗ ಕ್ರೆಸೆಂಟ್ ರಸ್ತೆಯಲ್ಲಿರುವ ಎಂಸ್ಟುಡಿಯೊದಲ್ಲಿ ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಯಾಗಿರುವ ಅವರು, ನಿಯೋಜನೆ ಮೇಲೆ ಬಿಡಬ್ಲೂಎಸ್‌ಎಸ್‌ಬಿಯಲ್ಲಿ (ಬೆಂಗಳೂರು ಜಲಮಂಡಳಿ) ಮುಖ್ಯ ಲೆಕ್ಕಾಧಿಕಾರಿಯಾಗಿದ್ದರು. ಕೆಎಸ್‌ ಡಿಎಲ್‌ ಗೆ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್‌ ನ ಪರ್ಚೇಸ್‌ ಆರ್ಡರ್ ನೀಡಲು 81 ಲಕ್ಷ ರೂ ಲಂಚ ಕೇಳಿದ್ದರು. ಹಾಗಾಗಿ ಶ್ರೇಯಸ್ ಕಶ್ಯಪ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಗುರುವಾರ ಸಂಜೆ ಮುಂಗಡವಾಗಿ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಆನಂತರ ಲೋಕಾಯುಕ್ತ ಅಧಿಕಾರಿಗಳು ಶೋಧ ಮುಂದುವರೆಸಿದಾಗ ಅವರ ಕಚೇರಿಯಲ್ಲಿ 1.6 ಕೋಟಿ ಹಣ ಪತ್ತೆಯಾಗಿದೆ. ಅವರ ಡಾಲರ್ಸ್ ಕಾಲೋನಿ ಮನೆಯಲ್ಲಿ 6 ಕೋಟಿ ರೂ. ಸಿಕ್ಕಿದೆ. ಇತರೆ ಅಧಿಕಾರಿಗಳ ಮನೆಯಲ್ಲಿ 70 ಲಕ್ಷದಷ್ಟು ಪತ್ತೆಯಾಗಿದ್ದು ಒಟ್ಟು 8.2 ಕೋಟಿಗೂ ಅಧಿಕ ಹಣ ಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರೆದಿದೆ. ತಂದೆ ಮಗ ಇಬ್ಬರನ್ನೂ ಆರೋಪಿಗಳನ್ನಾಗಿ ಮಾಡಲಾಗಿದೆ.

2008ರ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿರುವ ಪ್ರಶಾಂತ್ ಮಾಡಾಳ್ ಈ ಹಿಂದೆಯೂ ಸಹ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಡ್ ಲಿಮಿಟೆಡ್ (KRIDL) ಉಪ ಹಣಕಾಸು ಅಧಿಕಾರಿಯಾಗಿದ್ದಾಗ ಸರ್ಕಾರದ 55 ಕೋಟಿ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡ ಪ್ರಕರಣದಲ್ಲಿ ಆರೋಪಿಯಾಗಿದ್ದು, 2017ರಲ್ಲಿ ಅವರನ್ನು ಅಮಾನತು ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಸದ್ಯದ ಲಂಚ ಪ್ರಕರಣದಲ್ಲಿ ಅವರೊಂದಗೆ ಐವರು ಅಧಿಕಾರಿಗಳನ್ನು ಬಂಧಿಸಲಾಗಿದೆ. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ – ಗುತ್ತಿಗೆದಾರರ ಆರೋಪ

ಎಲ್ಲಾ ಕಾಮಗಾರಿಗಳಲ್ಲಿ ಬಿಜೆಪಿ ಸರ್ಕಾರದ ಶಾಸಕರು, ಸಚಿವರು 40% ಕಮಿಷನ್ ಕೇಳುತ್ತಿದ್ದಾರೆ ಎಂದು ಕರ್ನಾಟಕದ ಗುತ್ತಿಗೆದಾರರ ಸಂಘ ಆರೋಪಿಸಿತ್ತು. ಈ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿತ್ತು. ಆದರೆ ಈ ಕುರಿತು ತನಿಖೆಯಾಗಲಿಲ್ಲ. ಬದಲಿಗೆ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ.ಕೆಂಪಣ್ಣನವರನ್ನೇ ಸರ್ಕಾರ ಬಂಧಿಸಿತ್ತು.

ಇನ್ನು ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಸಚಿವರಾಗಿದ್ದ ಈಶ್ವರಪ್ಪರವರ ಮೇಲೆ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡುವಂತಾಗಿತ್ತು. ಆದರೆ ಬಿ ರಿಪೋರ್ಟ್ ಹಾಕಿ ಪ್ರಕರಣ ಮುಚ್ಚಿ ಹಾಕಲಾಗಿತ್ತು.

ಇದೇ ಸಂದರ್ಭದಲ್ಲಿ ಬಿಟ್‌ ಕಾಯಿನ್ ಹಗರಣ, ಪಿಎಸ್‌ಐ ಹಗರಣಗಳು ಹೊರಬಂದಿದ್ದವು. ಇವುಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಅಶ್ವಥ್ ನಾರಾಯಣ್‌ರಂತಹ ಪ್ರಭಾವಿಗಳ ಹೆಸರು ಕೇಳಿಬಂದಿದ್ದವು. ಆದರೆ ಈ ಎಲ್ಲಾ ಸಂದರ್ಭಗಳಲ್ಲಿ ಬಿಜೆಪಿ ಮುಖಂಡರು ದಾಖಲೆ ಕೊಡಿ, ಸಾಕ್ಷ್ಯ ಕೊಡಿ ಅನ್ನುತ್ತಿದ್ದರು.

ಈಗ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ಕೋಟಿ ಕೋಟಿ ರೂ.ಗಳ ಹಣದ ಕಂತೆ ಕಮಿಷನ್ ಆರೋಪಕ್ಕೆ ಪ್ರಬಲ ಸಾಕ್ಷಿಯಾಗಿ ನಿಂತಿದೆ. ಆದರೆ ಈ ಕುರಿತು ನಿಷ್ಪಷಪಾತ ತನಿಖೆ ನಡೆಯಲಿದೆಯೇ? ಬಿಜೆಪಿ ತನ್ನ ವಿರುದ್ಧ ತಾನೇ ತನಿಖೆ ಮಾಡಬಲ್ಲದೆ? ಎಂಬ ಪ್ರಶ್ನೆಗಳು ಎದ್ದಿವೆ.

ಈ ದಾಳಿ ಬೆನ್ನಲ್ಲೆ ಸರ್ಕಾರದ ವಿರುದ್ದ ಕಾಂಗ್ರೆಸ್ ಮುಗಿಬಿದ್ದಿದ್ದು ಆಕ್ರೋಶ ವ್ಯಕ್ತಪಡಿಸಿದೆ. ”ಇಷ್ಟು ದಿನ ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳ್ತಿದ್ರು. ಈಗ ಲೋಕಾಯುಕ್ತದವರೇ ಕೊಟ್ಟಿದ್ದಾರೆ ತಗೊಳ್ಳಿ. ಈಗ ರಾಜೀನಾಮೆ ಕೋಡೋರು ಯಾರು..? ಸಿಎಂ ರಾಜೀನಾಮೆ ಕೊಡ್ತಾರಾ..? ಸಚಿವರು ಕೊಡ್ತಾರಾ? ನಿಗಮ ಮಂಡಳಿ ಅಧ್ಯಕ್ಷರು ರಾಜೀನಾಮೆ ಕೊಡ್ತಾರಾ..? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

40% ಕಮಿಷನ್‍ಗೆ ದಾಖಲೆ ಕೊಡಿ ಎನ್ನುತ್ತಿದ್ದ ಸಿಎಂ ಅವರೇ, ಇಂದು ಲೋಕಾಯುಕ್ತ ದಾಳಿಯಲ್ಲಿ ಕಮಿಷನ್ ಕರ್ಮಕಾಂಡಕ್ಕೆ ದಾಖಲೆ ಸಿಕ್ಕಿತಲ್ಲವೇ? ಇದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಾಕ್ಷಿಯಲ್ಲವೇ? ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರೋದೇ ಭ್ರಷ್ಟಾಚಾರ ತಡೆಯೋಕೆ. ಹಿಂದೆ ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್ ಕಾಲದ ಕೇಸ್ ಗಳು ಮುಚ್ಚಿಹೋಯ್ತು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.

ಹಾಗಾದರೆ, ದಾಖಲೆಗಳು – ದೂರುಗಳ ಮೇಲೆ ಇಂತಹ ದಾಳಿಗಳು ನಡೆಯುತ್ತವೆ ಎನ್ನುವುದಾದರೆ, ಈ ಹಿಂದೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರು ಸರ್ಕಾರದ ಅಭಿವೃದ್ದಿ ಕೆಲಸಗಳಲ್ಲಿ 40% ಕಮಿಷನ್‌ ಪಡೆಯುತ್ತಿರುವುದು ಶೇ. 100ರಷ್ಟು ನಿಜ ಎಂದು ಆರೋಪಿಸಿದ್ದರು. ಅದಕ್ಕಾಗಿಯೇ ಅವರು ಸ್ವತಂತ್ರ ತನಿಖೆಗೆ ಆಗ್ರಹಿಸಿದರು. ಆದರೆ ಮುಖ್ಯಮಂತ್ರಿಯಾಗಿರುವ ಬೊಮ್ಮಾಯಿ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈಗ ಸಾಕ್ಷಿ ಸಿಕ್ಕಿದೆ. ಈಗಲಾದರೂ ಕ್ರಮ ಕೈಗೊಳ್ಳುತ್ತಾರೆಯೇ?

ರಾಜ್ಯದ ಅಧಿಕಾರಿಗಳು, ಶಾಸಕರು ಮತ್ತು ಸಚಿವರು ಎಲ್ಲಾ ಸರ್ಕಾರಿ ಗುತ್ತಿಗೆಗಳಿಗೆ 40% ಲಂಚವನ್ನು ಕೇಳುತ್ತಾರೆ ಎಂದು ಆರೋಪಿಸಿದ ಸುಮಾರು ತಿಂಗಳ ನಂತರ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ತಮ್ಮ ಪ್ರತಿಪಾದನೆಯನ್ನು ನಿರೂಪಿಸಲು ಆಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿತ್ತು. 15 ಶಾಸಕರು ಮತ್ತು ನಾಲ್ವರು ಸಚಿವರ ವಿರುದ್ಧ ಭ್ರಷ್ಟಾಚಾರದ ದಾಖಲೆಗಳು ತಮ್ಮ ಬಳಿ ಇದೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷ ಆರ್. ಮಂಜುನಾಥ್ ಹೇಳಿದ್ದರು. ಆದರೆ ರಾಜ್ಯ ಸರ್ಕಾರ ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಈಗ ಒಬ್ಬ ಶಾಸಕನ ಪುತ್ರನ ಮನೆಯಲ್ಲಿ ಇಷ್ಟೊಂದು ಹಣ ಸಿಕ್ಕಿದೆ ಎಂದಾದರೆ ಅಷ್ಟೂ ಶಾಸಕರು-ಸಚಿವರ ಮೇಲೆ ತನಿಖೆ ನಡೆಸಿದರೆ ಸಾವಿರಾರು ಕೋಟಿ ರೂ ಪತ್ತೆಯಾಗುವುದಲ್ಲಿ ಅನುಮಾನವಿಲ್ಲ. ಆದರೆ ತನಿಖೆ ಮಾಡುವವರಾರು ಎಂಬುದೇ ಪ್ರಶ್ನೆಯಾಗಿದೆ.

ಇದನ್ನೂ ಓದಿ: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...