Homeಮುಖಪುಟಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ: ಟಿಎಂಸಿ

ಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ: ಟಿಎಂಸಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಹೆಸರುಗಳು ಪೆಗಾಸಸ್ ಪ್ರಾಜೆಕ್ಟ್‌ನಲ್ಲಿ ಕೇಳಿ ಬಂದ ಹಿನ್ನೆಲೆ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರದ ವಿರುದ್ಧ ಟಿಎಂಸಿ ವಾಗ್ದಾಳಿ ನಡೆಸಿದೆ. “ಫೋನ್  ಹ್ಯಾಕಿಂಗ್” ಹೊರತಾಗಿಯೂ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲ್ಲಲು ಸಾಧ್ಯವಾಗಲಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ವ್ಯಂಗ್ಯವಾಡಿದೆ.

’ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್ ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಇದರಲ್ಲಿ ಟಿಎಂಸಿ ಪಕ್ಷದ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಹೆಸರುಗಳು ಪಟ್ಟಿಯಲ್ಲಿವೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಇದನ್ನೂ ಓದಿ: ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

ಭಾನುವಾರ ಪ್ರಕಟವಾದ ವರದಿಯ ಪ್ರಕಾರ, ಟಿಎಂಸಿಯ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಫೋನ್ ನಂಬರ್‌ ಅನ್ನು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹ್ಯಾಕ್ ಮಾಡಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಮತ್ತು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿರುವ ಅಭಿಷೇಕ್ ಬ್ಯಾನರ್ಜಿಯ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಅಭಿಷೇಕ್ ಬ್ಯಾನರ್ಜಿ, “ಸೋತವರಿಗಾಗಿ ಎರಡು ನಿಮಿಷಗಳ ಮೌನವಹಿಸಿ. ಇಡಿ, ಸಿಬಿಐ, ಎನ್ಐಎ, ಐಟಿ, ಇಸಿಐ, ಬಿಜೆಪಿಯ ಹಣ ಮತ್ತು ಶಕ್ತಿ ಇದರ ಜೊತೆಗೆ ಪೆಗಾಸಸ್ ಸ್ಪೈಯಿಂಗ್… ಇಷ್ಟಿದ್ದರೂ ಅಮಿತ್‌ ಶಾ ಅವರಂತಹವರು 2021ರ ಬಂಗಾಳ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ದಯವಿಟ್ಟು 2024 ರಲ್ಲಿ ಮತ್ತಷ್ಟು ಉತ್ತಮ ಸಂಪನ್ಮೂಲಗಳೊಂದಿಗೆ ಸಿದ್ಧರಾಗಿ!” ಎಂದು ವ್ಯಂಗ್ಯವಾಡಿದ್ದಾರೆ.

ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಬಿಜೆಪಿ ಭಯ ಮತ್ತು ಮನೋರೋಗದಿಂದ ಬಳಲುತ್ತಿದೆ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...