Homeಮುಖಪುಟಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

- Advertisement -
- Advertisement -

ಮುಸ್ಲಿಮರನ್ನು ತೊಡೆದುಹಾಕಿ ಎಂದು ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಈಶಾನ್ಯ ದೆಹಲಿಯ ಭಾಗೀರಥಿ ವಿಹಾರ್‌ನಲ್ಲಿ ನಡೆದ ಕೋಮು ಹಿಂಸಾಚಾರದ ಸಂದರ್ಭದಲ್ಲಿ ಆದೇಶ ನೀಡಿದ್ದರು. ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂದು ಆ ಪ್ರದೇಶದ ನಿವಾಸಿಗಳೊಬ್ಬರು ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ವರ್ಷದ ಫೆಬ್ರವರಿ ಕೊನೆಯ ವಾರದಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗಳ ಕುರಿತ ಚಾರ್ಜ್‌‌ಶೀಟ್‌ಗಳಲ್ಲಿ ಬಿಜೆಪಿ ಮುಖಂಡರನ್ನು ಹೊರತುಪಡಿಸಿ ಉಳಿದವರನ್ನು ಸೇರಿಸುತ್ತಿರುವ ಪೊಲೀಸರ ಕ್ರಮಕ್ಕೆ ತದ್ವಿರುದ್ಧವಾಗಿ ಈ ದೂರು ದನಿಯೆತ್ತಿದೆ.

ಸ್ಥಳೀಯ ಬಿಜೆಪಿ ಮುಖಂಡರು ಗಲಭೆಗೆ ಕುಮ್ಮಕ್ಕು ನೀಡಿದ್ದರು ಎಂದು ಸ್ಥಳೀಯ ನಿವಾಸಿಗಳು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಲವು ದೂರುಗಳಲ್ಲಿ ಬಿಜೆಪಿ ನಾಯಕರಾದ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಉತ್ತರ ಪ್ರದೇಶದ ಶಾಸಕ ನಂದ್ ಕಿಶೋರ್ ಗುಜ್ಜರ್, ದೆಹಲಿ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಮತ್ತು ಸ್ವಯಂ ಘೋಷಿತ ಹಿಂದುತ್ವ ನಾಯಕಿ ರಾಗಿಣಿ ತಿವಾರಿ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ದೆಹಲಿ ಪೊಲೀಸರ ಚಾರ್ಜ್‌ಶೀಟ್‌ಗಳು ಕಪಿಲ್ ಮಿಶ್ರಾ ಅವರ ಹೆಸರನ್ನು ಹೇಗೆ ಬಿಟ್ಟುಬಿಟ್ಟಿವೆ ಎಂಬುದರ ಬಗ್ಗೆ ಈಗಾಗಲೇ ಸಾಕಷ್ಟು ವರದಿಯಾಗಿದೆ. ರಾಗಿಣಿ ತಿವಾರಿ ಅವರು ಗುಂಡುಗಳನ್ನು ಹಾರಿಸಿದರು ಮತ್ತು ಜನಸಮೂಹವನ್ನು ಹೇಗೆ ಪ್ರಚೋದಿಸಿದರು ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ತಿಳಿಸಿದ್ದಾರೆ.


ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌


ಈ ಭಾಗವಾಗಿ, ಗಲಭೆಯ ಸಂದರ್ಭದಲ್ಲಿ ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಜೋಹ್ರಿಪುರದ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಗಲಭೆಯನ್ನು ಮುನ್ನೆಡಿಸಿದ್ದರು ಎಂದು ದೂರಲಾಗಿದೆ. ಈ ಕುರಿತು ಮಾರ್ಚ್ 11 ರಂದು ಗೋಕುಲ್ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹಿಂಸಾಚಾರದ ಮೊದಲ ದಿನವಾದ ಫೆಬ್ರವರಿ 24 ರಂದು ಭಾಗೀರತಿ ವಿಹಾರ್‌ನ ಗಾಲಿ ಸಂಖ್ಯೆ 1/3 ರಲ್ಲಿ “ಜೈ ಶ್ರೀ ರಾಮ್”, “ಆಗ್ ಲಾಗಾವೊ” “ಮಾರೊ” ಎಂದು ಘೋಷಣೆಗಳನ್ನು ಕೂಗುತ್ತಾ ಕನ್ಹಯ್ಯ ಲಾಲ್ ಜನರನ್ನು ಪ್ರಚೋದಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ತಿಳಿಸಿದ್ದಾರೆ.

“24.02.2020 ರಂದು ನಾನು ನನ್ನ ಮನೆಯಲ್ಲಿದ್ದೆ. ರಾತ್ರಿ 8-9 ರ ಸುಮಾರಿಗೆ ನಾನು ದೊಡ್ಡ ಶಬ್ದ ಮತ್ತು ಗದ್ದಲವನ್ನು ಕೇಳಿ ಮನೆಯಿಂದ ಹೊರಬಂದೆ. ಪಾಲ್ ಚೌಕ್‌ನ ಶಿವ ಮಂದಿರದ ಕಡೆಗೆ ಸುಮಾರು 100-150 ಜನರು ‘ಜೈ ಶ್ರೀ ರಾಮ್’, ‘ಕಾ ** ಒ ಕೋ ಸಬಕ್ ಸಿಖಾವೊ’ (ಮುಸ್ಲಿಮರಿಗೆ ಪಾಠ ಕಲಿಸಿ) ‘ಆಗ್ ಲಗಾವೊ (ಬೆಂಕಿ ಹಚ್ಚಿ)’ ಎಂದು ಜಪಿಸುತ್ತಿರುವುದನ್ನು ನಾನು ನೋಡಿದೆ. ‘ಮಾರೊ (ಕೊಲ್ಲು)’ ಎಂದು ಕೂಗುತ್ತಾ
ಜನಸಮೂಹವು ಕತ್ತಿಗಳು, ತ್ರಿಶೂಲಗಳು, ದೊಡ್ಡ ಕೊಡಲಿಗಳು ಮತ್ತು ಪಿಸ್ತೂಲ್‌ಗಳನ್ನು ಹೊತ್ತೊಯ್ಯುತ್ತಿತ್ತು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಜನಸಮೂಹವನ್ನು ಮುನ್ನಡೆಸುತ್ತಿದ್ದ ಯೋಗೇಂದ್ರ ಜೀನ್ಸ್ವಾಲಾ ಮತ್ತು ಕೌನ್ಸಿಲರ್ ಕನ್ಹಯ್ಯ ಲಾಲ್ ಅವರನ್ನು ನಾನು ನೋಡಿದಾಗ ಕನ್ಹಯ್ಯ ಲಾಲ್ ಜನಸಮೂಹವನ್ನು ಯೋಗೇಂದ್ರ ಜೀನ್ಸ್ವಾಲಾ ಅವರ ಅಂಗಡಿಯ ಕಡೆಗೆ ಕರೆತಂದರು ಮತ್ತು ಅವರು ಅಲ್ಲಿಯೇ ನಿಲ್ಲಿಸಿದರು. ಇಡೀ ಜನಸಮೂಹ ಜೋರಾಗಿ ಘೋಷಣೆಗಳನ್ನು ಕೂಗಲಾರಂಭಿಸಿತು. ತಮ್ಮ ಬೀದಿಯ ನಿವಾಸಿಗಳು ತಮ್ಮ ಮನೆಗಳನ್ನು ರಕ್ಷಿಸಲು ರಾತ್ರಿಯಿಡೀ ಕಾವಲು ಕಾಯುತ್ತಿದ್ದರು ಎಂದು ದೂರುದಾರ ನೆನಪಿಸಿಕೊಳ್ಳುತ್ತಾರೆ.

ಆದರೆ ಮಾರ್ಚ್‌ 11 ರಂದೇ ಭಾಗೀರಥಿ ವಿಹಾರ್‌ನ ಸ್ಥಳೀಯ ನಿವಾಸಿಗಳು ದೂರು ಸಲ್ಲಿಸಿದರೂ ಈ ಕುರಿತು ತನಿಖೆಯಾಗಲಿ, ಚಾರ್ಜ್‌‌ಶೀಟ್‌ನಲ್ಲಿ ಬಿಜೆಪಿ ಮುಖಂಡರ ಹೆಸರನ್ನಾಗಲಿ ಪೊಲೀಸರು ಕೈಬಿಟ್ಟಿದ್ದು ಆಶ್ಚರ್‍ಯ ಮೂಡಿಸುತ್ತಿದ್ದು, ಪೊಲೀಸರು ಸ್ಪಷ್ಟವಾಗಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ದೆಹಲಿ ಚುನಾವಣೆ: ಬಿಜೆಪಿಯ ಕಪಿಲ್ ಮಿಶ್ರಾಗೆ 48 ಗಂಟೆಗಳ ಕಾಲ ಪ್ರಚಾರ ನಿಷೇಧ ಮಾಡಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...