Homeಮುಖಪುಟಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

- Advertisement -
- Advertisement -

ಮುಸ್ಲಿಮರನ್ನು ತೊಡೆದುಹಾಕಿ ಎಂದು ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಈಶಾನ್ಯ ದೆಹಲಿಯ ಭಾಗೀರಥಿ ವಿಹಾರ್‌ನಲ್ಲಿ ನಡೆದ ಕೋಮು ಹಿಂಸಾಚಾರದ ಸಂದರ್ಭದಲ್ಲಿ ಆದೇಶ ನೀಡಿದ್ದರು. ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂದು ಆ ಪ್ರದೇಶದ ನಿವಾಸಿಗಳೊಬ್ಬರು ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ವರ್ಷದ ಫೆಬ್ರವರಿ ಕೊನೆಯ ವಾರದಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗಳ ಕುರಿತ ಚಾರ್ಜ್‌‌ಶೀಟ್‌ಗಳಲ್ಲಿ ಬಿಜೆಪಿ ಮುಖಂಡರನ್ನು ಹೊರತುಪಡಿಸಿ ಉಳಿದವರನ್ನು ಸೇರಿಸುತ್ತಿರುವ ಪೊಲೀಸರ ಕ್ರಮಕ್ಕೆ ತದ್ವಿರುದ್ಧವಾಗಿ ಈ ದೂರು ದನಿಯೆತ್ತಿದೆ.

ಸ್ಥಳೀಯ ಬಿಜೆಪಿ ಮುಖಂಡರು ಗಲಭೆಗೆ ಕುಮ್ಮಕ್ಕು ನೀಡಿದ್ದರು ಎಂದು ಸ್ಥಳೀಯ ನಿವಾಸಿಗಳು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಲವು ದೂರುಗಳಲ್ಲಿ ಬಿಜೆಪಿ ನಾಯಕರಾದ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಉತ್ತರ ಪ್ರದೇಶದ ಶಾಸಕ ನಂದ್ ಕಿಶೋರ್ ಗುಜ್ಜರ್, ದೆಹಲಿ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಮತ್ತು ಸ್ವಯಂ ಘೋಷಿತ ಹಿಂದುತ್ವ ನಾಯಕಿ ರಾಗಿಣಿ ತಿವಾರಿ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ದೆಹಲಿ ಪೊಲೀಸರ ಚಾರ್ಜ್‌ಶೀಟ್‌ಗಳು ಕಪಿಲ್ ಮಿಶ್ರಾ ಅವರ ಹೆಸರನ್ನು ಹೇಗೆ ಬಿಟ್ಟುಬಿಟ್ಟಿವೆ ಎಂಬುದರ ಬಗ್ಗೆ ಈಗಾಗಲೇ ಸಾಕಷ್ಟು ವರದಿಯಾಗಿದೆ. ರಾಗಿಣಿ ತಿವಾರಿ ಅವರು ಗುಂಡುಗಳನ್ನು ಹಾರಿಸಿದರು ಮತ್ತು ಜನಸಮೂಹವನ್ನು ಹೇಗೆ ಪ್ರಚೋದಿಸಿದರು ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ತಿಳಿಸಿದ್ದಾರೆ.


ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌


ಈ ಭಾಗವಾಗಿ, ಗಲಭೆಯ ಸಂದರ್ಭದಲ್ಲಿ ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಜೋಹ್ರಿಪುರದ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಗಲಭೆಯನ್ನು ಮುನ್ನೆಡಿಸಿದ್ದರು ಎಂದು ದೂರಲಾಗಿದೆ. ಈ ಕುರಿತು ಮಾರ್ಚ್ 11 ರಂದು ಗೋಕುಲ್ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹಿಂಸಾಚಾರದ ಮೊದಲ ದಿನವಾದ ಫೆಬ್ರವರಿ 24 ರಂದು ಭಾಗೀರತಿ ವಿಹಾರ್‌ನ ಗಾಲಿ ಸಂಖ್ಯೆ 1/3 ರಲ್ಲಿ “ಜೈ ಶ್ರೀ ರಾಮ್”, “ಆಗ್ ಲಾಗಾವೊ” “ಮಾರೊ” ಎಂದು ಘೋಷಣೆಗಳನ್ನು ಕೂಗುತ್ತಾ ಕನ್ಹಯ್ಯ ಲಾಲ್ ಜನರನ್ನು ಪ್ರಚೋದಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ತಿಳಿಸಿದ್ದಾರೆ.

“24.02.2020 ರಂದು ನಾನು ನನ್ನ ಮನೆಯಲ್ಲಿದ್ದೆ. ರಾತ್ರಿ 8-9 ರ ಸುಮಾರಿಗೆ ನಾನು ದೊಡ್ಡ ಶಬ್ದ ಮತ್ತು ಗದ್ದಲವನ್ನು ಕೇಳಿ ಮನೆಯಿಂದ ಹೊರಬಂದೆ. ಪಾಲ್ ಚೌಕ್‌ನ ಶಿವ ಮಂದಿರದ ಕಡೆಗೆ ಸುಮಾರು 100-150 ಜನರು ‘ಜೈ ಶ್ರೀ ರಾಮ್’, ‘ಕಾ ** ಒ ಕೋ ಸಬಕ್ ಸಿಖಾವೊ’ (ಮುಸ್ಲಿಮರಿಗೆ ಪಾಠ ಕಲಿಸಿ) ‘ಆಗ್ ಲಗಾವೊ (ಬೆಂಕಿ ಹಚ್ಚಿ)’ ಎಂದು ಜಪಿಸುತ್ತಿರುವುದನ್ನು ನಾನು ನೋಡಿದೆ. ‘ಮಾರೊ (ಕೊಲ್ಲು)’ ಎಂದು ಕೂಗುತ್ತಾ
ಜನಸಮೂಹವು ಕತ್ತಿಗಳು, ತ್ರಿಶೂಲಗಳು, ದೊಡ್ಡ ಕೊಡಲಿಗಳು ಮತ್ತು ಪಿಸ್ತೂಲ್‌ಗಳನ್ನು ಹೊತ್ತೊಯ್ಯುತ್ತಿತ್ತು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಜನಸಮೂಹವನ್ನು ಮುನ್ನಡೆಸುತ್ತಿದ್ದ ಯೋಗೇಂದ್ರ ಜೀನ್ಸ್ವಾಲಾ ಮತ್ತು ಕೌನ್ಸಿಲರ್ ಕನ್ಹಯ್ಯ ಲಾಲ್ ಅವರನ್ನು ನಾನು ನೋಡಿದಾಗ ಕನ್ಹಯ್ಯ ಲಾಲ್ ಜನಸಮೂಹವನ್ನು ಯೋಗೇಂದ್ರ ಜೀನ್ಸ್ವಾಲಾ ಅವರ ಅಂಗಡಿಯ ಕಡೆಗೆ ಕರೆತಂದರು ಮತ್ತು ಅವರು ಅಲ್ಲಿಯೇ ನಿಲ್ಲಿಸಿದರು. ಇಡೀ ಜನಸಮೂಹ ಜೋರಾಗಿ ಘೋಷಣೆಗಳನ್ನು ಕೂಗಲಾರಂಭಿಸಿತು. ತಮ್ಮ ಬೀದಿಯ ನಿವಾಸಿಗಳು ತಮ್ಮ ಮನೆಗಳನ್ನು ರಕ್ಷಿಸಲು ರಾತ್ರಿಯಿಡೀ ಕಾವಲು ಕಾಯುತ್ತಿದ್ದರು ಎಂದು ದೂರುದಾರ ನೆನಪಿಸಿಕೊಳ್ಳುತ್ತಾರೆ.

ಆದರೆ ಮಾರ್ಚ್‌ 11 ರಂದೇ ಭಾಗೀರಥಿ ವಿಹಾರ್‌ನ ಸ್ಥಳೀಯ ನಿವಾಸಿಗಳು ದೂರು ಸಲ್ಲಿಸಿದರೂ ಈ ಕುರಿತು ತನಿಖೆಯಾಗಲಿ, ಚಾರ್ಜ್‌‌ಶೀಟ್‌ನಲ್ಲಿ ಬಿಜೆಪಿ ಮುಖಂಡರ ಹೆಸರನ್ನಾಗಲಿ ಪೊಲೀಸರು ಕೈಬಿಟ್ಟಿದ್ದು ಆಶ್ಚರ್‍ಯ ಮೂಡಿಸುತ್ತಿದ್ದು, ಪೊಲೀಸರು ಸ್ಪಷ್ಟವಾಗಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ದೆಹಲಿ ಚುನಾವಣೆ: ಬಿಜೆಪಿಯ ಕಪಿಲ್ ಮಿಶ್ರಾಗೆ 48 ಗಂಟೆಗಳ ಕಾಲ ಪ್ರಚಾರ ನಿಷೇಧ ಮಾಡಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...