Homeಮುಖಪುಟಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

- Advertisement -
- Advertisement -

ಮುಸ್ಲಿಮರನ್ನು ತೊಡೆದುಹಾಕಿ ಎಂದು ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಈಶಾನ್ಯ ದೆಹಲಿಯ ಭಾಗೀರಥಿ ವಿಹಾರ್‌ನಲ್ಲಿ ನಡೆದ ಕೋಮು ಹಿಂಸಾಚಾರದ ಸಂದರ್ಭದಲ್ಲಿ ಆದೇಶ ನೀಡಿದ್ದರು. ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂದು ಆ ಪ್ರದೇಶದ ನಿವಾಸಿಗಳೊಬ್ಬರು ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ವರ್ಷದ ಫೆಬ್ರವರಿ ಕೊನೆಯ ವಾರದಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗಳ ಕುರಿತ ಚಾರ್ಜ್‌‌ಶೀಟ್‌ಗಳಲ್ಲಿ ಬಿಜೆಪಿ ಮುಖಂಡರನ್ನು ಹೊರತುಪಡಿಸಿ ಉಳಿದವರನ್ನು ಸೇರಿಸುತ್ತಿರುವ ಪೊಲೀಸರ ಕ್ರಮಕ್ಕೆ ತದ್ವಿರುದ್ಧವಾಗಿ ಈ ದೂರು ದನಿಯೆತ್ತಿದೆ.

ಸ್ಥಳೀಯ ಬಿಜೆಪಿ ಮುಖಂಡರು ಗಲಭೆಗೆ ಕುಮ್ಮಕ್ಕು ನೀಡಿದ್ದರು ಎಂದು ಸ್ಥಳೀಯ ನಿವಾಸಿಗಳು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಲವು ದೂರುಗಳಲ್ಲಿ ಬಿಜೆಪಿ ನಾಯಕರಾದ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಉತ್ತರ ಪ್ರದೇಶದ ಶಾಸಕ ನಂದ್ ಕಿಶೋರ್ ಗುಜ್ಜರ್, ದೆಹಲಿ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಮತ್ತು ಸ್ವಯಂ ಘೋಷಿತ ಹಿಂದುತ್ವ ನಾಯಕಿ ರಾಗಿಣಿ ತಿವಾರಿ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ದೆಹಲಿ ಪೊಲೀಸರ ಚಾರ್ಜ್‌ಶೀಟ್‌ಗಳು ಕಪಿಲ್ ಮಿಶ್ರಾ ಅವರ ಹೆಸರನ್ನು ಹೇಗೆ ಬಿಟ್ಟುಬಿಟ್ಟಿವೆ ಎಂಬುದರ ಬಗ್ಗೆ ಈಗಾಗಲೇ ಸಾಕಷ್ಟು ವರದಿಯಾಗಿದೆ. ರಾಗಿಣಿ ತಿವಾರಿ ಅವರು ಗುಂಡುಗಳನ್ನು ಹಾರಿಸಿದರು ಮತ್ತು ಜನಸಮೂಹವನ್ನು ಹೇಗೆ ಪ್ರಚೋದಿಸಿದರು ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ತಿಳಿಸಿದ್ದಾರೆ.


ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌


ಈ ಭಾಗವಾಗಿ, ಗಲಭೆಯ ಸಂದರ್ಭದಲ್ಲಿ ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಜೋಹ್ರಿಪುರದ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಗಲಭೆಯನ್ನು ಮುನ್ನೆಡಿಸಿದ್ದರು ಎಂದು ದೂರಲಾಗಿದೆ. ಈ ಕುರಿತು ಮಾರ್ಚ್ 11 ರಂದು ಗೋಕುಲ್ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹಿಂಸಾಚಾರದ ಮೊದಲ ದಿನವಾದ ಫೆಬ್ರವರಿ 24 ರಂದು ಭಾಗೀರತಿ ವಿಹಾರ್‌ನ ಗಾಲಿ ಸಂಖ್ಯೆ 1/3 ರಲ್ಲಿ “ಜೈ ಶ್ರೀ ರಾಮ್”, “ಆಗ್ ಲಾಗಾವೊ” “ಮಾರೊ” ಎಂದು ಘೋಷಣೆಗಳನ್ನು ಕೂಗುತ್ತಾ ಕನ್ಹಯ್ಯ ಲಾಲ್ ಜನರನ್ನು ಪ್ರಚೋದಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ತಿಳಿಸಿದ್ದಾರೆ.

“24.02.2020 ರಂದು ನಾನು ನನ್ನ ಮನೆಯಲ್ಲಿದ್ದೆ. ರಾತ್ರಿ 8-9 ರ ಸುಮಾರಿಗೆ ನಾನು ದೊಡ್ಡ ಶಬ್ದ ಮತ್ತು ಗದ್ದಲವನ್ನು ಕೇಳಿ ಮನೆಯಿಂದ ಹೊರಬಂದೆ. ಪಾಲ್ ಚೌಕ್‌ನ ಶಿವ ಮಂದಿರದ ಕಡೆಗೆ ಸುಮಾರು 100-150 ಜನರು ‘ಜೈ ಶ್ರೀ ರಾಮ್’, ‘ಕಾ ** ಒ ಕೋ ಸಬಕ್ ಸಿಖಾವೊ’ (ಮುಸ್ಲಿಮರಿಗೆ ಪಾಠ ಕಲಿಸಿ) ‘ಆಗ್ ಲಗಾವೊ (ಬೆಂಕಿ ಹಚ್ಚಿ)’ ಎಂದು ಜಪಿಸುತ್ತಿರುವುದನ್ನು ನಾನು ನೋಡಿದೆ. ‘ಮಾರೊ (ಕೊಲ್ಲು)’ ಎಂದು ಕೂಗುತ್ತಾ
ಜನಸಮೂಹವು ಕತ್ತಿಗಳು, ತ್ರಿಶೂಲಗಳು, ದೊಡ್ಡ ಕೊಡಲಿಗಳು ಮತ್ತು ಪಿಸ್ತೂಲ್‌ಗಳನ್ನು ಹೊತ್ತೊಯ್ಯುತ್ತಿತ್ತು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಜನಸಮೂಹವನ್ನು ಮುನ್ನಡೆಸುತ್ತಿದ್ದ ಯೋಗೇಂದ್ರ ಜೀನ್ಸ್ವಾಲಾ ಮತ್ತು ಕೌನ್ಸಿಲರ್ ಕನ್ಹಯ್ಯ ಲಾಲ್ ಅವರನ್ನು ನಾನು ನೋಡಿದಾಗ ಕನ್ಹಯ್ಯ ಲಾಲ್ ಜನಸಮೂಹವನ್ನು ಯೋಗೇಂದ್ರ ಜೀನ್ಸ್ವಾಲಾ ಅವರ ಅಂಗಡಿಯ ಕಡೆಗೆ ಕರೆತಂದರು ಮತ್ತು ಅವರು ಅಲ್ಲಿಯೇ ನಿಲ್ಲಿಸಿದರು. ಇಡೀ ಜನಸಮೂಹ ಜೋರಾಗಿ ಘೋಷಣೆಗಳನ್ನು ಕೂಗಲಾರಂಭಿಸಿತು. ತಮ್ಮ ಬೀದಿಯ ನಿವಾಸಿಗಳು ತಮ್ಮ ಮನೆಗಳನ್ನು ರಕ್ಷಿಸಲು ರಾತ್ರಿಯಿಡೀ ಕಾವಲು ಕಾಯುತ್ತಿದ್ದರು ಎಂದು ದೂರುದಾರ ನೆನಪಿಸಿಕೊಳ್ಳುತ್ತಾರೆ.

ಆದರೆ ಮಾರ್ಚ್‌ 11 ರಂದೇ ಭಾಗೀರಥಿ ವಿಹಾರ್‌ನ ಸ್ಥಳೀಯ ನಿವಾಸಿಗಳು ದೂರು ಸಲ್ಲಿಸಿದರೂ ಈ ಕುರಿತು ತನಿಖೆಯಾಗಲಿ, ಚಾರ್ಜ್‌‌ಶೀಟ್‌ನಲ್ಲಿ ಬಿಜೆಪಿ ಮುಖಂಡರ ಹೆಸರನ್ನಾಗಲಿ ಪೊಲೀಸರು ಕೈಬಿಟ್ಟಿದ್ದು ಆಶ್ಚರ್‍ಯ ಮೂಡಿಸುತ್ತಿದ್ದು, ಪೊಲೀಸರು ಸ್ಪಷ್ಟವಾಗಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ದೆಹಲಿ ಚುನಾವಣೆ: ಬಿಜೆಪಿಯ ಕಪಿಲ್ ಮಿಶ್ರಾಗೆ 48 ಗಂಟೆಗಳ ಕಾಲ ಪ್ರಚಾರ ನಿಷೇಧ ಮಾಡಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...