Homeಮುಖಪುಟಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

- Advertisement -
- Advertisement -

ಮುಸ್ಲಿಮರನ್ನು ತೊಡೆದುಹಾಕಿ ಎಂದು ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಈಶಾನ್ಯ ದೆಹಲಿಯ ಭಾಗೀರಥಿ ವಿಹಾರ್‌ನಲ್ಲಿ ನಡೆದ ಕೋಮು ಹಿಂಸಾಚಾರದ ಸಂದರ್ಭದಲ್ಲಿ ಆದೇಶ ನೀಡಿದ್ದರು. ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂದು ಆ ಪ್ರದೇಶದ ನಿವಾಸಿಗಳೊಬ್ಬರು ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ವರ್ಷದ ಫೆಬ್ರವರಿ ಕೊನೆಯ ವಾರದಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗಳ ಕುರಿತ ಚಾರ್ಜ್‌‌ಶೀಟ್‌ಗಳಲ್ಲಿ ಬಿಜೆಪಿ ಮುಖಂಡರನ್ನು ಹೊರತುಪಡಿಸಿ ಉಳಿದವರನ್ನು ಸೇರಿಸುತ್ತಿರುವ ಪೊಲೀಸರ ಕ್ರಮಕ್ಕೆ ತದ್ವಿರುದ್ಧವಾಗಿ ಈ ದೂರು ದನಿಯೆತ್ತಿದೆ.

ಸ್ಥಳೀಯ ಬಿಜೆಪಿ ಮುಖಂಡರು ಗಲಭೆಗೆ ಕುಮ್ಮಕ್ಕು ನೀಡಿದ್ದರು ಎಂದು ಸ್ಥಳೀಯ ನಿವಾಸಿಗಳು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಲವು ದೂರುಗಳಲ್ಲಿ ಬಿಜೆಪಿ ನಾಯಕರಾದ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಉತ್ತರ ಪ್ರದೇಶದ ಶಾಸಕ ನಂದ್ ಕಿಶೋರ್ ಗುಜ್ಜರ್, ದೆಹಲಿ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಮತ್ತು ಸ್ವಯಂ ಘೋಷಿತ ಹಿಂದುತ್ವ ನಾಯಕಿ ರಾಗಿಣಿ ತಿವಾರಿ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ದೆಹಲಿ ಪೊಲೀಸರ ಚಾರ್ಜ್‌ಶೀಟ್‌ಗಳು ಕಪಿಲ್ ಮಿಶ್ರಾ ಅವರ ಹೆಸರನ್ನು ಹೇಗೆ ಬಿಟ್ಟುಬಿಟ್ಟಿವೆ ಎಂಬುದರ ಬಗ್ಗೆ ಈಗಾಗಲೇ ಸಾಕಷ್ಟು ವರದಿಯಾಗಿದೆ. ರಾಗಿಣಿ ತಿವಾರಿ ಅವರು ಗುಂಡುಗಳನ್ನು ಹಾರಿಸಿದರು ಮತ್ತು ಜನಸಮೂಹವನ್ನು ಹೇಗೆ ಪ್ರಚೋದಿಸಿದರು ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ತಿಳಿಸಿದ್ದಾರೆ.


ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌


ಈ ಭಾಗವಾಗಿ, ಗಲಭೆಯ ಸಂದರ್ಭದಲ್ಲಿ ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಜೋಹ್ರಿಪುರದ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಗಲಭೆಯನ್ನು ಮುನ್ನೆಡಿಸಿದ್ದರು ಎಂದು ದೂರಲಾಗಿದೆ. ಈ ಕುರಿತು ಮಾರ್ಚ್ 11 ರಂದು ಗೋಕುಲ್ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹಿಂಸಾಚಾರದ ಮೊದಲ ದಿನವಾದ ಫೆಬ್ರವರಿ 24 ರಂದು ಭಾಗೀರತಿ ವಿಹಾರ್‌ನ ಗಾಲಿ ಸಂಖ್ಯೆ 1/3 ರಲ್ಲಿ “ಜೈ ಶ್ರೀ ರಾಮ್”, “ಆಗ್ ಲಾಗಾವೊ” “ಮಾರೊ” ಎಂದು ಘೋಷಣೆಗಳನ್ನು ಕೂಗುತ್ತಾ ಕನ್ಹಯ್ಯ ಲಾಲ್ ಜನರನ್ನು ಪ್ರಚೋದಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ತಿಳಿಸಿದ್ದಾರೆ.

“24.02.2020 ರಂದು ನಾನು ನನ್ನ ಮನೆಯಲ್ಲಿದ್ದೆ. ರಾತ್ರಿ 8-9 ರ ಸುಮಾರಿಗೆ ನಾನು ದೊಡ್ಡ ಶಬ್ದ ಮತ್ತು ಗದ್ದಲವನ್ನು ಕೇಳಿ ಮನೆಯಿಂದ ಹೊರಬಂದೆ. ಪಾಲ್ ಚೌಕ್‌ನ ಶಿವ ಮಂದಿರದ ಕಡೆಗೆ ಸುಮಾರು 100-150 ಜನರು ‘ಜೈ ಶ್ರೀ ರಾಮ್’, ‘ಕಾ ** ಒ ಕೋ ಸಬಕ್ ಸಿಖಾವೊ’ (ಮುಸ್ಲಿಮರಿಗೆ ಪಾಠ ಕಲಿಸಿ) ‘ಆಗ್ ಲಗಾವೊ (ಬೆಂಕಿ ಹಚ್ಚಿ)’ ಎಂದು ಜಪಿಸುತ್ತಿರುವುದನ್ನು ನಾನು ನೋಡಿದೆ. ‘ಮಾರೊ (ಕೊಲ್ಲು)’ ಎಂದು ಕೂಗುತ್ತಾ
ಜನಸಮೂಹವು ಕತ್ತಿಗಳು, ತ್ರಿಶೂಲಗಳು, ದೊಡ್ಡ ಕೊಡಲಿಗಳು ಮತ್ತು ಪಿಸ್ತೂಲ್‌ಗಳನ್ನು ಹೊತ್ತೊಯ್ಯುತ್ತಿತ್ತು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಜನಸಮೂಹವನ್ನು ಮುನ್ನಡೆಸುತ್ತಿದ್ದ ಯೋಗೇಂದ್ರ ಜೀನ್ಸ್ವಾಲಾ ಮತ್ತು ಕೌನ್ಸಿಲರ್ ಕನ್ಹಯ್ಯ ಲಾಲ್ ಅವರನ್ನು ನಾನು ನೋಡಿದಾಗ ಕನ್ಹಯ್ಯ ಲಾಲ್ ಜನಸಮೂಹವನ್ನು ಯೋಗೇಂದ್ರ ಜೀನ್ಸ್ವಾಲಾ ಅವರ ಅಂಗಡಿಯ ಕಡೆಗೆ ಕರೆತಂದರು ಮತ್ತು ಅವರು ಅಲ್ಲಿಯೇ ನಿಲ್ಲಿಸಿದರು. ಇಡೀ ಜನಸಮೂಹ ಜೋರಾಗಿ ಘೋಷಣೆಗಳನ್ನು ಕೂಗಲಾರಂಭಿಸಿತು. ತಮ್ಮ ಬೀದಿಯ ನಿವಾಸಿಗಳು ತಮ್ಮ ಮನೆಗಳನ್ನು ರಕ್ಷಿಸಲು ರಾತ್ರಿಯಿಡೀ ಕಾವಲು ಕಾಯುತ್ತಿದ್ದರು ಎಂದು ದೂರುದಾರ ನೆನಪಿಸಿಕೊಳ್ಳುತ್ತಾರೆ.

ಆದರೆ ಮಾರ್ಚ್‌ 11 ರಂದೇ ಭಾಗೀರಥಿ ವಿಹಾರ್‌ನ ಸ್ಥಳೀಯ ನಿವಾಸಿಗಳು ದೂರು ಸಲ್ಲಿಸಿದರೂ ಈ ಕುರಿತು ತನಿಖೆಯಾಗಲಿ, ಚಾರ್ಜ್‌‌ಶೀಟ್‌ನಲ್ಲಿ ಬಿಜೆಪಿ ಮುಖಂಡರ ಹೆಸರನ್ನಾಗಲಿ ಪೊಲೀಸರು ಕೈಬಿಟ್ಟಿದ್ದು ಆಶ್ಚರ್‍ಯ ಮೂಡಿಸುತ್ತಿದ್ದು, ಪೊಲೀಸರು ಸ್ಪಷ್ಟವಾಗಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ದೆಹಲಿ ಚುನಾವಣೆ: ಬಿಜೆಪಿಯ ಕಪಿಲ್ ಮಿಶ್ರಾಗೆ 48 ಗಂಟೆಗಳ ಕಾಲ ಪ್ರಚಾರ ನಿಷೇಧ ಮಾಡಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...