Homeಮುಖಪುಟಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳಿಂದ ಬೆದರಿಕೆ | ಔರಂಗಜೇಬ್‌ ಸಮಾಧಿಗೆ ಬಿಗಿಭದ್ರತೆ

ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳಿಂದ ಬೆದರಿಕೆ | ಔರಂಗಜೇಬ್‌ ಸಮಾಧಿಗೆ ಬಿಗಿಭದ್ರತೆ

- Advertisement -
- Advertisement -

ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರ ಸಮಾಧಿಯನ್ನು ತೆಗೆದುಹಾಕಬೇಕೆಂಬ ಕೂಗುಗಳು ತೀವ್ರಗೊಳ್ಳುತ್ತಿದ್ದಂತೆ, ಪೊಲೀಸರು ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಸಮಾಧಿಯ ಸ್ಥಳಕ್ಕೆ ಪ್ರವೇಶಿಸುವ ಮೊದಲು ಸಂದರ್ಶಕರು ತಮ್ಮ ಗುರುತಿನ ಚೀಟಿಗಳನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬಿಜೆಪಿ ಪರ ಸಂಘಟನೆಯ

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಖುಲ್ದಾಬಾದ್‌ನಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕಲು ಜ್ಞಾಪಕ ಪತ್ರಗಳನ್ನು ಸಲ್ಲಿಸಿತ್ತು. ಮರಾಠಾ ರಾಜ ಶಿವಾಜಿಯ ಮಗ ಸಂಭಾಜಿಯನ್ನು ಸೆರೆಹಿಡಿದು, ಔರಂಗಜೇಬ್‌ ಆದೇಶದ ಮೇರೆಗೆ ಗಲ್ಲಿಗೇರಿಸಲಾಗಿತ್ತು ಎಂದು ಇತಿಹಾಸ ಹೇಳುತ್ತದೆ. ಬಿಜೆಪಿ ಪರ ಸಂಘಟನೆಯ

ಛತ್ರಪತಿ ಸಂಭಾಜಿನಗರ ಗ್ರಾಮೀಣ ಪೊಲೀಸ್ ಇಲಾಖೆಯು ಖುಲ್ದಾಬಾದ್ ಪಟ್ಟಣದ ಪ್ರವೇಶ ದ್ವಾರದಿಂದ ಸಮಾಧಿ ಸ್ಥಳದವರೆಗೆ ಬಹು ಭದ್ರತಾ ಠಾಣೆಗಳನ್ನು ಅಳವಡಿಸಿದೆ. ರಾಜ್ಯ ಮೀಸಲು ಪೊಲೀಸ್ ಪಡೆ (SRPF)ಯ 50 ಪೊಲೀಸರು, ಸ್ಥಳೀಯ ಪೊಲೀಸರ 30 ಸಿಬ್ಬಂದಿ ಮತ್ತು 20 ಗೃಹರಕ್ಷಕ ದಳದವರನ್ನು ಒಳಗೊಂಡ ತಂಡವನ್ನು ವಿವಿಧ ಸ್ಥಳಗಳಲ್ಲಿ ಮತ್ತು ಸಮಾಧಿ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಮಾಧಿಗೆ ಭೇಟಿ ನೀಡುವ ಪ್ರವಾಸಿಗರು ಈಗ ಗೃಹರಕ್ಷಕ ದಳದ ತಂಡದೊಂದಿಗೆ ಇರಿಸಲಾಗಿರುವ ಸಂದರ್ಶಕರ ನೋಂದಣಿಯಲ್ಲಿ ತಮ್ಮ ಹೆಸರುಗಳನ್ನು ಬರೆಯಬೇಕು ಮತ್ತು ಗುರುತಿನ ದಾಖಲೆಗಳನ್ನು ಒದಗಿಸಬೇಕು ಎಂದು ಅವರು ಹೇಳಿದ್ದಾರೆ. ಸಮಾಧಿಯ ಉಸ್ತುವಾರಿ ವಹಿಸಿರುವ ಪರ್ವೇಜ್ ಕಬೀರ್ ಅಹ್ಮದ್, “ಇಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ಜನರು ವದಂತಿಗಳನ್ನು ನಂಬಬಾರದು.” ಎಂದು ಹೇಳಿದ್ದಾರೆ.

“ಸಮಾಧಿಯನ್ನು ಕೆಡವಲು ಬೇಡಿಕೆಗಳು ಬಂದ ನಂತರ ಸಂದರ್ಶಕರ ಸಂಖ್ಯೆ ಕಡಿಮೆಯಾಗಿದೆ. ರಂಜಾನ್ ಸಮಯದಲ್ಲಿ ಸಾಮಾನ್ಯವಾಗಿ ಜನರ ಸಂಖ್ಯೆ ಕಡಿಮೆ ಇರುತ್ತದೆ. ದಿನನಿತ್ಯ ಸುಮಾರು 100 ಜನರು ಭೇಟಿ ನೀಡುತ್ತಾರೆ, ಆದರೆ ಈ ವಿಷಯ ಮುನ್ನಲೆಗೆ ಬಂದಾಗಿನಿಂದ ಸಂಖ್ಯೆ ಕಡಿಮೆಯಾಗಿದೆ.” ಎಂದು ಅವರು ಹೇಳಿದ್ದಾರೆ.

ವಿಎಚ್‌ಪಿ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಸರ್ಕಾರಿ ಕಚೇರಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಔರಂಗಜೇಬ್‌ನ ಸಮಾಧಿಯನ್ನು ತೆಗೆದುಹಾಕಲು ಜ್ಞಾಪಕ ಪತ್ರಗಳನ್ನು ಸಲ್ಲಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಬರೆದ ಮನವಿ ಪತ್ರದಲ್ಲಿ, ಔರಂಗಜೇಬ್ ಸಿಖ್ ಗುರು ಗುರು ಗೋಬಿಂದ್ ಸಿಂಗ್ ಅವರ ಇಬ್ಬರು ಪುತ್ರರನ್ನು ಮತಾಂತರಗೊಳ್ಳಲು ನಿರಾಕರಿಸಿದ್ದಕ್ಕಾಗಿ ಕೊಂದಿದ್ದಾರೆ. ಮರಾಠಾ ರಾಜ ಛತ್ರಪತಿ ಸಂಭಾಜಿಯನ್ನು ಹಿಂಸಿಸಿ ಕೊಂದಿದ್ದಾನೆ ಮತ್ತು ಕಾಶಿ, ಮಥುರಾ, ಸೋಮನಾಥದಲ್ಲಿ ದೇವಾಲಯಗಳನ್ನು ಕೆಡವಿದ್ದಾನೆ ಎಂದು ಹೇಳಿದೆ.

“ಔರಂಗಜೇಬ್‌ನ ಯಾವುದೇ ಸ್ಮಾರಕವು ನೋವು ಮತ್ತು ಗುಲಾಮಗಿರಿಯ ಸಂಕೇತವಾಗಿದೆ. ಆದ್ದರಿಂದ ಸಮಾಧಿಯನ್ನು ಸಂಪೂರ್ಣವಾಗಿ ಕೆಡವಬೇಕು” ಎಂದು ಅದು ಹೇಳಿದೆ. ಈ ವಿಚಾರದಲ್ಲಿ ಸರ್ಕಾರ ನಿಷ್ಕ್ರಿಯವಾಗಿದ್ದರೆ, ವಿಎಚ್‌ಪಿ ಛತ್ರಪತಿ ಸಂಭಾಜಿನಗರ ಜಿಲ್ಲೆಗೆ ಮೆರವಣಿಗೆ ನಡೆಸಿ ಸಮಾಧಿಯನ್ನು ಕೆಡವುವುದಾಗಿ ಎಚ್ಚರಿಸಿದೆ. ದುಷ್ಕರ್ಮಗಳ ಈ ಸಂಘಟನೆಯು ಛತ್ರಪತಿ ಸಂಭಾಜಿನಗರ, ನಾಗ್ಪುರ ಮತ್ತು ಮುಂಬೈನ ಉಪನಗರ ಪ್ರದೇಶಗಳಲ್ಲಿ ಇದೇ ರೀತಿಯ ಆಂದೋಲನಗಳನ್ನು ನಡೆಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...