Homeಮುಖಪುಟಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳಿಂದ ಬೆದರಿಕೆ | ಔರಂಗಜೇಬ್‌ ಸಮಾಧಿಗೆ ಬಿಗಿಭದ್ರತೆ

ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳಿಂದ ಬೆದರಿಕೆ | ಔರಂಗಜೇಬ್‌ ಸಮಾಧಿಗೆ ಬಿಗಿಭದ್ರತೆ

- Advertisement -
- Advertisement -

ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರ ಸಮಾಧಿಯನ್ನು ತೆಗೆದುಹಾಕಬೇಕೆಂಬ ಕೂಗುಗಳು ತೀವ್ರಗೊಳ್ಳುತ್ತಿದ್ದಂತೆ, ಪೊಲೀಸರು ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಸಮಾಧಿಯ ಸ್ಥಳಕ್ಕೆ ಪ್ರವೇಶಿಸುವ ಮೊದಲು ಸಂದರ್ಶಕರು ತಮ್ಮ ಗುರುತಿನ ಚೀಟಿಗಳನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬಿಜೆಪಿ ಪರ ಸಂಘಟನೆಯ

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಖುಲ್ದಾಬಾದ್‌ನಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕಲು ಜ್ಞಾಪಕ ಪತ್ರಗಳನ್ನು ಸಲ್ಲಿಸಿತ್ತು. ಮರಾಠಾ ರಾಜ ಶಿವಾಜಿಯ ಮಗ ಸಂಭಾಜಿಯನ್ನು ಸೆರೆಹಿಡಿದು, ಔರಂಗಜೇಬ್‌ ಆದೇಶದ ಮೇರೆಗೆ ಗಲ್ಲಿಗೇರಿಸಲಾಗಿತ್ತು ಎಂದು ಇತಿಹಾಸ ಹೇಳುತ್ತದೆ. ಬಿಜೆಪಿ ಪರ ಸಂಘಟನೆಯ

ಛತ್ರಪತಿ ಸಂಭಾಜಿನಗರ ಗ್ರಾಮೀಣ ಪೊಲೀಸ್ ಇಲಾಖೆಯು ಖುಲ್ದಾಬಾದ್ ಪಟ್ಟಣದ ಪ್ರವೇಶ ದ್ವಾರದಿಂದ ಸಮಾಧಿ ಸ್ಥಳದವರೆಗೆ ಬಹು ಭದ್ರತಾ ಠಾಣೆಗಳನ್ನು ಅಳವಡಿಸಿದೆ. ರಾಜ್ಯ ಮೀಸಲು ಪೊಲೀಸ್ ಪಡೆ (SRPF)ಯ 50 ಪೊಲೀಸರು, ಸ್ಥಳೀಯ ಪೊಲೀಸರ 30 ಸಿಬ್ಬಂದಿ ಮತ್ತು 20 ಗೃಹರಕ್ಷಕ ದಳದವರನ್ನು ಒಳಗೊಂಡ ತಂಡವನ್ನು ವಿವಿಧ ಸ್ಥಳಗಳಲ್ಲಿ ಮತ್ತು ಸಮಾಧಿ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಮಾಧಿಗೆ ಭೇಟಿ ನೀಡುವ ಪ್ರವಾಸಿಗರು ಈಗ ಗೃಹರಕ್ಷಕ ದಳದ ತಂಡದೊಂದಿಗೆ ಇರಿಸಲಾಗಿರುವ ಸಂದರ್ಶಕರ ನೋಂದಣಿಯಲ್ಲಿ ತಮ್ಮ ಹೆಸರುಗಳನ್ನು ಬರೆಯಬೇಕು ಮತ್ತು ಗುರುತಿನ ದಾಖಲೆಗಳನ್ನು ಒದಗಿಸಬೇಕು ಎಂದು ಅವರು ಹೇಳಿದ್ದಾರೆ. ಸಮಾಧಿಯ ಉಸ್ತುವಾರಿ ವಹಿಸಿರುವ ಪರ್ವೇಜ್ ಕಬೀರ್ ಅಹ್ಮದ್, “ಇಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ಜನರು ವದಂತಿಗಳನ್ನು ನಂಬಬಾರದು.” ಎಂದು ಹೇಳಿದ್ದಾರೆ.

“ಸಮಾಧಿಯನ್ನು ಕೆಡವಲು ಬೇಡಿಕೆಗಳು ಬಂದ ನಂತರ ಸಂದರ್ಶಕರ ಸಂಖ್ಯೆ ಕಡಿಮೆಯಾಗಿದೆ. ರಂಜಾನ್ ಸಮಯದಲ್ಲಿ ಸಾಮಾನ್ಯವಾಗಿ ಜನರ ಸಂಖ್ಯೆ ಕಡಿಮೆ ಇರುತ್ತದೆ. ದಿನನಿತ್ಯ ಸುಮಾರು 100 ಜನರು ಭೇಟಿ ನೀಡುತ್ತಾರೆ, ಆದರೆ ಈ ವಿಷಯ ಮುನ್ನಲೆಗೆ ಬಂದಾಗಿನಿಂದ ಸಂಖ್ಯೆ ಕಡಿಮೆಯಾಗಿದೆ.” ಎಂದು ಅವರು ಹೇಳಿದ್ದಾರೆ.

ವಿಎಚ್‌ಪಿ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಸರ್ಕಾರಿ ಕಚೇರಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಔರಂಗಜೇಬ್‌ನ ಸಮಾಧಿಯನ್ನು ತೆಗೆದುಹಾಕಲು ಜ್ಞಾಪಕ ಪತ್ರಗಳನ್ನು ಸಲ್ಲಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಬರೆದ ಮನವಿ ಪತ್ರದಲ್ಲಿ, ಔರಂಗಜೇಬ್ ಸಿಖ್ ಗುರು ಗುರು ಗೋಬಿಂದ್ ಸಿಂಗ್ ಅವರ ಇಬ್ಬರು ಪುತ್ರರನ್ನು ಮತಾಂತರಗೊಳ್ಳಲು ನಿರಾಕರಿಸಿದ್ದಕ್ಕಾಗಿ ಕೊಂದಿದ್ದಾರೆ. ಮರಾಠಾ ರಾಜ ಛತ್ರಪತಿ ಸಂಭಾಜಿಯನ್ನು ಹಿಂಸಿಸಿ ಕೊಂದಿದ್ದಾನೆ ಮತ್ತು ಕಾಶಿ, ಮಥುರಾ, ಸೋಮನಾಥದಲ್ಲಿ ದೇವಾಲಯಗಳನ್ನು ಕೆಡವಿದ್ದಾನೆ ಎಂದು ಹೇಳಿದೆ.

“ಔರಂಗಜೇಬ್‌ನ ಯಾವುದೇ ಸ್ಮಾರಕವು ನೋವು ಮತ್ತು ಗುಲಾಮಗಿರಿಯ ಸಂಕೇತವಾಗಿದೆ. ಆದ್ದರಿಂದ ಸಮಾಧಿಯನ್ನು ಸಂಪೂರ್ಣವಾಗಿ ಕೆಡವಬೇಕು” ಎಂದು ಅದು ಹೇಳಿದೆ. ಈ ವಿಚಾರದಲ್ಲಿ ಸರ್ಕಾರ ನಿಷ್ಕ್ರಿಯವಾಗಿದ್ದರೆ, ವಿಎಚ್‌ಪಿ ಛತ್ರಪತಿ ಸಂಭಾಜಿನಗರ ಜಿಲ್ಲೆಗೆ ಮೆರವಣಿಗೆ ನಡೆಸಿ ಸಮಾಧಿಯನ್ನು ಕೆಡವುವುದಾಗಿ ಎಚ್ಚರಿಸಿದೆ. ದುಷ್ಕರ್ಮಗಳ ಈ ಸಂಘಟನೆಯು ಛತ್ರಪತಿ ಸಂಭಾಜಿನಗರ, ನಾಗ್ಪುರ ಮತ್ತು ಮುಂಬೈನ ಉಪನಗರ ಪ್ರದೇಶಗಳಲ್ಲಿ ಇದೇ ರೀತಿಯ ಆಂದೋಲನಗಳನ್ನು ನಡೆಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...