Homeಮುಖಪುಟಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳಿಂದ ಬೆದರಿಕೆ | ಔರಂಗಜೇಬ್‌ ಸಮಾಧಿಗೆ ಬಿಗಿಭದ್ರತೆ

ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳಿಂದ ಬೆದರಿಕೆ | ಔರಂಗಜೇಬ್‌ ಸಮಾಧಿಗೆ ಬಿಗಿಭದ್ರತೆ

- Advertisement -
- Advertisement -

ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರ ಸಮಾಧಿಯನ್ನು ತೆಗೆದುಹಾಕಬೇಕೆಂಬ ಕೂಗುಗಳು ತೀವ್ರಗೊಳ್ಳುತ್ತಿದ್ದಂತೆ, ಪೊಲೀಸರು ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಸಮಾಧಿಯ ಸ್ಥಳಕ್ಕೆ ಪ್ರವೇಶಿಸುವ ಮೊದಲು ಸಂದರ್ಶಕರು ತಮ್ಮ ಗುರುತಿನ ಚೀಟಿಗಳನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬಿಜೆಪಿ ಪರ ಸಂಘಟನೆಯ

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಖುಲ್ದಾಬಾದ್‌ನಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕಲು ಜ್ಞಾಪಕ ಪತ್ರಗಳನ್ನು ಸಲ್ಲಿಸಿತ್ತು. ಮರಾಠಾ ರಾಜ ಶಿವಾಜಿಯ ಮಗ ಸಂಭಾಜಿಯನ್ನು ಸೆರೆಹಿಡಿದು, ಔರಂಗಜೇಬ್‌ ಆದೇಶದ ಮೇರೆಗೆ ಗಲ್ಲಿಗೇರಿಸಲಾಗಿತ್ತು ಎಂದು ಇತಿಹಾಸ ಹೇಳುತ್ತದೆ. ಬಿಜೆಪಿ ಪರ ಸಂಘಟನೆಯ

ಛತ್ರಪತಿ ಸಂಭಾಜಿನಗರ ಗ್ರಾಮೀಣ ಪೊಲೀಸ್ ಇಲಾಖೆಯು ಖುಲ್ದಾಬಾದ್ ಪಟ್ಟಣದ ಪ್ರವೇಶ ದ್ವಾರದಿಂದ ಸಮಾಧಿ ಸ್ಥಳದವರೆಗೆ ಬಹು ಭದ್ರತಾ ಠಾಣೆಗಳನ್ನು ಅಳವಡಿಸಿದೆ. ರಾಜ್ಯ ಮೀಸಲು ಪೊಲೀಸ್ ಪಡೆ (SRPF)ಯ 50 ಪೊಲೀಸರು, ಸ್ಥಳೀಯ ಪೊಲೀಸರ 30 ಸಿಬ್ಬಂದಿ ಮತ್ತು 20 ಗೃಹರಕ್ಷಕ ದಳದವರನ್ನು ಒಳಗೊಂಡ ತಂಡವನ್ನು ವಿವಿಧ ಸ್ಥಳಗಳಲ್ಲಿ ಮತ್ತು ಸಮಾಧಿ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಮಾಧಿಗೆ ಭೇಟಿ ನೀಡುವ ಪ್ರವಾಸಿಗರು ಈಗ ಗೃಹರಕ್ಷಕ ದಳದ ತಂಡದೊಂದಿಗೆ ಇರಿಸಲಾಗಿರುವ ಸಂದರ್ಶಕರ ನೋಂದಣಿಯಲ್ಲಿ ತಮ್ಮ ಹೆಸರುಗಳನ್ನು ಬರೆಯಬೇಕು ಮತ್ತು ಗುರುತಿನ ದಾಖಲೆಗಳನ್ನು ಒದಗಿಸಬೇಕು ಎಂದು ಅವರು ಹೇಳಿದ್ದಾರೆ. ಸಮಾಧಿಯ ಉಸ್ತುವಾರಿ ವಹಿಸಿರುವ ಪರ್ವೇಜ್ ಕಬೀರ್ ಅಹ್ಮದ್, “ಇಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ಜನರು ವದಂತಿಗಳನ್ನು ನಂಬಬಾರದು.” ಎಂದು ಹೇಳಿದ್ದಾರೆ.

“ಸಮಾಧಿಯನ್ನು ಕೆಡವಲು ಬೇಡಿಕೆಗಳು ಬಂದ ನಂತರ ಸಂದರ್ಶಕರ ಸಂಖ್ಯೆ ಕಡಿಮೆಯಾಗಿದೆ. ರಂಜಾನ್ ಸಮಯದಲ್ಲಿ ಸಾಮಾನ್ಯವಾಗಿ ಜನರ ಸಂಖ್ಯೆ ಕಡಿಮೆ ಇರುತ್ತದೆ. ದಿನನಿತ್ಯ ಸುಮಾರು 100 ಜನರು ಭೇಟಿ ನೀಡುತ್ತಾರೆ, ಆದರೆ ಈ ವಿಷಯ ಮುನ್ನಲೆಗೆ ಬಂದಾಗಿನಿಂದ ಸಂಖ್ಯೆ ಕಡಿಮೆಯಾಗಿದೆ.” ಎಂದು ಅವರು ಹೇಳಿದ್ದಾರೆ.

ವಿಎಚ್‌ಪಿ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಸರ್ಕಾರಿ ಕಚೇರಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಔರಂಗಜೇಬ್‌ನ ಸಮಾಧಿಯನ್ನು ತೆಗೆದುಹಾಕಲು ಜ್ಞಾಪಕ ಪತ್ರಗಳನ್ನು ಸಲ್ಲಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಬರೆದ ಮನವಿ ಪತ್ರದಲ್ಲಿ, ಔರಂಗಜೇಬ್ ಸಿಖ್ ಗುರು ಗುರು ಗೋಬಿಂದ್ ಸಿಂಗ್ ಅವರ ಇಬ್ಬರು ಪುತ್ರರನ್ನು ಮತಾಂತರಗೊಳ್ಳಲು ನಿರಾಕರಿಸಿದ್ದಕ್ಕಾಗಿ ಕೊಂದಿದ್ದಾರೆ. ಮರಾಠಾ ರಾಜ ಛತ್ರಪತಿ ಸಂಭಾಜಿಯನ್ನು ಹಿಂಸಿಸಿ ಕೊಂದಿದ್ದಾನೆ ಮತ್ತು ಕಾಶಿ, ಮಥುರಾ, ಸೋಮನಾಥದಲ್ಲಿ ದೇವಾಲಯಗಳನ್ನು ಕೆಡವಿದ್ದಾನೆ ಎಂದು ಹೇಳಿದೆ.

“ಔರಂಗಜೇಬ್‌ನ ಯಾವುದೇ ಸ್ಮಾರಕವು ನೋವು ಮತ್ತು ಗುಲಾಮಗಿರಿಯ ಸಂಕೇತವಾಗಿದೆ. ಆದ್ದರಿಂದ ಸಮಾಧಿಯನ್ನು ಸಂಪೂರ್ಣವಾಗಿ ಕೆಡವಬೇಕು” ಎಂದು ಅದು ಹೇಳಿದೆ. ಈ ವಿಚಾರದಲ್ಲಿ ಸರ್ಕಾರ ನಿಷ್ಕ್ರಿಯವಾಗಿದ್ದರೆ, ವಿಎಚ್‌ಪಿ ಛತ್ರಪತಿ ಸಂಭಾಜಿನಗರ ಜಿಲ್ಲೆಗೆ ಮೆರವಣಿಗೆ ನಡೆಸಿ ಸಮಾಧಿಯನ್ನು ಕೆಡವುವುದಾಗಿ ಎಚ್ಚರಿಸಿದೆ. ದುಷ್ಕರ್ಮಗಳ ಈ ಸಂಘಟನೆಯು ಛತ್ರಪತಿ ಸಂಭಾಜಿನಗರ, ನಾಗ್ಪುರ ಮತ್ತು ಮುಂಬೈನ ಉಪನಗರ ಪ್ರದೇಶಗಳಲ್ಲಿ ಇದೇ ರೀತಿಯ ಆಂದೋಲನಗಳನ್ನು ನಡೆಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...