Homeಮುಖಪುಟಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳಿಂದ ಬೆದರಿಕೆ | ಔರಂಗಜೇಬ್‌ ಸಮಾಧಿಗೆ ಬಿಗಿಭದ್ರತೆ

ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳಿಂದ ಬೆದರಿಕೆ | ಔರಂಗಜೇಬ್‌ ಸಮಾಧಿಗೆ ಬಿಗಿಭದ್ರತೆ

- Advertisement -
- Advertisement -

ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರ ಸಮಾಧಿಯನ್ನು ತೆಗೆದುಹಾಕಬೇಕೆಂಬ ಕೂಗುಗಳು ತೀವ್ರಗೊಳ್ಳುತ್ತಿದ್ದಂತೆ, ಪೊಲೀಸರು ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಸಮಾಧಿಯ ಸ್ಥಳಕ್ಕೆ ಪ್ರವೇಶಿಸುವ ಮೊದಲು ಸಂದರ್ಶಕರು ತಮ್ಮ ಗುರುತಿನ ಚೀಟಿಗಳನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬಿಜೆಪಿ ಪರ ಸಂಘಟನೆಯ

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಖುಲ್ದಾಬಾದ್‌ನಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕಲು ಜ್ಞಾಪಕ ಪತ್ರಗಳನ್ನು ಸಲ್ಲಿಸಿತ್ತು. ಮರಾಠಾ ರಾಜ ಶಿವಾಜಿಯ ಮಗ ಸಂಭಾಜಿಯನ್ನು ಸೆರೆಹಿಡಿದು, ಔರಂಗಜೇಬ್‌ ಆದೇಶದ ಮೇರೆಗೆ ಗಲ್ಲಿಗೇರಿಸಲಾಗಿತ್ತು ಎಂದು ಇತಿಹಾಸ ಹೇಳುತ್ತದೆ. ಬಿಜೆಪಿ ಪರ ಸಂಘಟನೆಯ

ಛತ್ರಪತಿ ಸಂಭಾಜಿನಗರ ಗ್ರಾಮೀಣ ಪೊಲೀಸ್ ಇಲಾಖೆಯು ಖುಲ್ದಾಬಾದ್ ಪಟ್ಟಣದ ಪ್ರವೇಶ ದ್ವಾರದಿಂದ ಸಮಾಧಿ ಸ್ಥಳದವರೆಗೆ ಬಹು ಭದ್ರತಾ ಠಾಣೆಗಳನ್ನು ಅಳವಡಿಸಿದೆ. ರಾಜ್ಯ ಮೀಸಲು ಪೊಲೀಸ್ ಪಡೆ (SRPF)ಯ 50 ಪೊಲೀಸರು, ಸ್ಥಳೀಯ ಪೊಲೀಸರ 30 ಸಿಬ್ಬಂದಿ ಮತ್ತು 20 ಗೃಹರಕ್ಷಕ ದಳದವರನ್ನು ಒಳಗೊಂಡ ತಂಡವನ್ನು ವಿವಿಧ ಸ್ಥಳಗಳಲ್ಲಿ ಮತ್ತು ಸಮಾಧಿ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಮಾಧಿಗೆ ಭೇಟಿ ನೀಡುವ ಪ್ರವಾಸಿಗರು ಈಗ ಗೃಹರಕ್ಷಕ ದಳದ ತಂಡದೊಂದಿಗೆ ಇರಿಸಲಾಗಿರುವ ಸಂದರ್ಶಕರ ನೋಂದಣಿಯಲ್ಲಿ ತಮ್ಮ ಹೆಸರುಗಳನ್ನು ಬರೆಯಬೇಕು ಮತ್ತು ಗುರುತಿನ ದಾಖಲೆಗಳನ್ನು ಒದಗಿಸಬೇಕು ಎಂದು ಅವರು ಹೇಳಿದ್ದಾರೆ. ಸಮಾಧಿಯ ಉಸ್ತುವಾರಿ ವಹಿಸಿರುವ ಪರ್ವೇಜ್ ಕಬೀರ್ ಅಹ್ಮದ್, “ಇಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ಜನರು ವದಂತಿಗಳನ್ನು ನಂಬಬಾರದು.” ಎಂದು ಹೇಳಿದ್ದಾರೆ.

“ಸಮಾಧಿಯನ್ನು ಕೆಡವಲು ಬೇಡಿಕೆಗಳು ಬಂದ ನಂತರ ಸಂದರ್ಶಕರ ಸಂಖ್ಯೆ ಕಡಿಮೆಯಾಗಿದೆ. ರಂಜಾನ್ ಸಮಯದಲ್ಲಿ ಸಾಮಾನ್ಯವಾಗಿ ಜನರ ಸಂಖ್ಯೆ ಕಡಿಮೆ ಇರುತ್ತದೆ. ದಿನನಿತ್ಯ ಸುಮಾರು 100 ಜನರು ಭೇಟಿ ನೀಡುತ್ತಾರೆ, ಆದರೆ ಈ ವಿಷಯ ಮುನ್ನಲೆಗೆ ಬಂದಾಗಿನಿಂದ ಸಂಖ್ಯೆ ಕಡಿಮೆಯಾಗಿದೆ.” ಎಂದು ಅವರು ಹೇಳಿದ್ದಾರೆ.

ವಿಎಚ್‌ಪಿ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿರುವ ಸರ್ಕಾರಿ ಕಚೇರಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಔರಂಗಜೇಬ್‌ನ ಸಮಾಧಿಯನ್ನು ತೆಗೆದುಹಾಕಲು ಜ್ಞಾಪಕ ಪತ್ರಗಳನ್ನು ಸಲ್ಲಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಬರೆದ ಮನವಿ ಪತ್ರದಲ್ಲಿ, ಔರಂಗಜೇಬ್ ಸಿಖ್ ಗುರು ಗುರು ಗೋಬಿಂದ್ ಸಿಂಗ್ ಅವರ ಇಬ್ಬರು ಪುತ್ರರನ್ನು ಮತಾಂತರಗೊಳ್ಳಲು ನಿರಾಕರಿಸಿದ್ದಕ್ಕಾಗಿ ಕೊಂದಿದ್ದಾರೆ. ಮರಾಠಾ ರಾಜ ಛತ್ರಪತಿ ಸಂಭಾಜಿಯನ್ನು ಹಿಂಸಿಸಿ ಕೊಂದಿದ್ದಾನೆ ಮತ್ತು ಕಾಶಿ, ಮಥುರಾ, ಸೋಮನಾಥದಲ್ಲಿ ದೇವಾಲಯಗಳನ್ನು ಕೆಡವಿದ್ದಾನೆ ಎಂದು ಹೇಳಿದೆ.

“ಔರಂಗಜೇಬ್‌ನ ಯಾವುದೇ ಸ್ಮಾರಕವು ನೋವು ಮತ್ತು ಗುಲಾಮಗಿರಿಯ ಸಂಕೇತವಾಗಿದೆ. ಆದ್ದರಿಂದ ಸಮಾಧಿಯನ್ನು ಸಂಪೂರ್ಣವಾಗಿ ಕೆಡವಬೇಕು” ಎಂದು ಅದು ಹೇಳಿದೆ. ಈ ವಿಚಾರದಲ್ಲಿ ಸರ್ಕಾರ ನಿಷ್ಕ್ರಿಯವಾಗಿದ್ದರೆ, ವಿಎಚ್‌ಪಿ ಛತ್ರಪತಿ ಸಂಭಾಜಿನಗರ ಜಿಲ್ಲೆಗೆ ಮೆರವಣಿಗೆ ನಡೆಸಿ ಸಮಾಧಿಯನ್ನು ಕೆಡವುವುದಾಗಿ ಎಚ್ಚರಿಸಿದೆ. ದುಷ್ಕರ್ಮಗಳ ಈ ಸಂಘಟನೆಯು ಛತ್ರಪತಿ ಸಂಭಾಜಿನಗರ, ನಾಗ್ಪುರ ಮತ್ತು ಮುಂಬೈನ ಉಪನಗರ ಪ್ರದೇಶಗಳಲ್ಲಿ ಇದೇ ರೀತಿಯ ಆಂದೋಲನಗಳನ್ನು ನಡೆಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...