Homeಮುಖಪುಟಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಟೀಕೆ: ‘ಜಯ್ ಶಾ ಎಷ್ಟು ಶತಕಗಳನ್ನು ಬಾರಿಸಿದ್ದಾರೆ?’ ಎಂದ DMK

ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಟೀಕೆ: ‘ಜಯ್ ಶಾ ಎಷ್ಟು ಶತಕಗಳನ್ನು ಬಾರಿಸಿದ್ದಾರೆ?’ ಎಂದ DMK

- Advertisement -
- Advertisement -

ತಮಿಳುನಾಡಿನ ಕುಟುಂಬ ರಾಜಕಾರಣದ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಆಡಳಿತರೂಢ ಡಿಎಂಕೆ ತಿರುಗೇಟು ನೀಡಿದ್ದು, “ಜಯ್ ಶಾ ಯಾರು ಮತ್ತು ಅವರು ಎಷ್ಟು ಶತಕಗಳನ್ನು ಬಾರಿಸಿದ್ದಾರೆ?” ಎಂದು ಪ್ರಶ್ನಿಸಿದೆ. ನಡ್ಡಾ ಅವರು ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮೇಲೆ ಕಟುವಾದ ವಾಗ್ದಾಳಿ ನಡೆಸಿ, ‘‘ಕುಟುಂಬ ರಾಜಕಾರಣದ ಹಣ ಲಪಟಾಯಿಸುವ ಕಟ್ಟೆ ಪಂಚಾಯತ್‌” ಎಂದು ಕರೆದಿದ್ದರು.

ಹೊಸ ಶಿಕ್ಷಣ ನೀತಿ ಮತ್ತು ನೀಟ್‌ಗೆ ರಾಜ್ಯ ಸರ್ಕಾರ ವಿರೋಧಿಸುತ್ತಿರುವುದರ ಹಿನ್ನಲೆಯಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಟೀಕಿಸಿರುವ ನಡ್ಡಾ, “ಅಶಿಕ್ಷಿತರು ವ್ಯವಹಾರಗಳ ಚುಕ್ಕಾಣಿ ಹಿಡಿದಾಗ ಹೀಗಾಗುತ್ತದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ತಿರುಗೇಟು ನೀಡಿರುವ ಆಡಳಿತಾರೂಢ ಡಿಎಂಕೆ, “ಒಕ್ಕೂಟ ಸರ್ಕಾರದ ಅಧಿಕಾರದಲ್ಲಿರುವವರ ಶೈಕ್ಷಣಿಕ ಅರ್ಹತೆ ಕೇಳುವ ಮಟ್ಟಕ್ಕೆ ತಾನು ಇಳಿಯುವುದಿಲ್ಲ” ಎಂದು ಹೇಳಿದೆ. “ಜಯ್ ಶಾ ಯಾರು ಮತ್ತು ಅವರು ಎಷ್ಟು ಶತಕಗಳನ್ನು ಹೊಡೆದಿದ್ದಾರೆ?” ಡಿಎಂಕೆ ವಕ್ತಾರ ಎ. ಸರವಣ್ ಕೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಷಾ ಅವರು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿತಯಾದ BCCI ಯ ಗೌರವ ಕಾರ್ಯದರ್ಶಿಯಾಗಿದ್ದಾರೆ.

ಇದನ್ನೂ ಓದಿ: ಸಿನಿಮಾ ಬಿಡುಗಡೆಯಾಗಿ 3 ದಿನ ವಿಮರ್ಶಿಸಬೇಡಿ!: ತಮಿಳು ನಿರ್ಮಾಪಕರ ವಿಚಿತ್ರ ಬೇಡಿಕೆ

ಡಿಎಂಕೆಯನ್ನು ‘ದ್ವೇಷ ಮತ್ತು ವಿಭಜನೆ’ ಹರಡುವ ಪಕ್ಷ ಎಂದು ಕರೆದ ನಡ್ಡಾ, “ನಾವು ಕಾಶ್ಮೀರದಿಂದ ತಮಿಳುನಾಡಿನವರೆಗೆ ಕುಟುಂಬ ರಾಜಕಾರಣದ ಪಕ್ಷಗಳಿಗೆ ಸೀಮಿತವಾದ ಪ್ರಾದೇಶಿಕ ಪಕ್ಷಗಳ ವಿರುದ್ಧ ಹೋರಾಡುತ್ತಿದ್ದೇವೆ. ಬಿಜೆಪಿ ಮಾತ್ರ ಸಿದ್ಧಾಂತ ಆಧಾರಿತ ರಾಷ್ಟ್ರೀಯ ಪಕ್ಷವಾಗಿದೆ. ಬಿಜೆಪಿ ಪ್ರಾದೇಶಿಕ ಆಕಾಂಕ್ಷೆಗಳನ್ನು ನೋಡಿಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಎಂಕೆ ವಕ್ತಾರ,“ಬಿಜೆಪಿಯು ದ್ವೇಷ ಮತ್ತು ವಿಭಜನೆಯ ಯಜಮಾನ. ಇದುವೆ ಅದರ ನಿಜವಾದ ಮುಖ. ಅದು ಯುವ ಜನರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ತಮಿಳುನಾಡಿನ ಜನರು ಬುದ್ಧಿವಂತರಾಗಿದ್ದು, 2024 ರಲ್ಲಿ ಅವರನ್ನು ತಿರಸ್ಕರಿಸುತ್ತಾರೆ” ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಪಕ್ಷವನ್ನು ವಿಸ್ತರಿಸುವ ಪ್ರಯತ್ನದ ಭಾಗವಾಗಿ ನಡ್ಡಾ ಅವರು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ತವರು ನೆಲವಾದ ಕಾರೈಕುಡಿಯಲ್ಲಿ ಈ ಹೇಳಿಕೆಯನ್ನು ನೀಡಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ತಮಿಳು ಹುಡುಗಿಯನ್ನು ಮದುವೆಯಾಗುತ್ತಾರೆ: ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯ ಅಭಿಲಾಷೆ

ಡಿಎಂಕೆ ಮತ್ತು ಎಐಎಡಿಎಂಕೆ ಎರಡು ಪಕ್ಷಗಳ ಪ್ರಾಬಲ್ಯವಿರುವ ತಮಿಳುನಾಡಿನಲ್ಲಿ ಬಿಜೆಪಿಗೆ ಗಟ್ಟಿಯಾದ ಅಸ್ತಿತ್ವವಿಲ್ಲ. ಅಲ್ಲಿ ಬಿಜೆಪಿಗೆ ಲೋಕಸಭಾ ಸಂಸದರಿಲ್ಲ. 2019ರ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರೂ ಸೋಲನುಭವಿಸಿತ್ತು. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯ 234 ಸ್ಥಾನಗಳಲ್ಲಿ ಪಕ್ಷವು ಕೇವಲ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು ಮತ್ತು ಡಿಎಂಕೆ ಅಲ್ಲಿ ಅಧಿಕಾರಕ್ಕೆ ಬಂದಿತ್ತು.

ಪನ್ನೀರಸೆಲ್ವಂ ಮತ್ತು ಇ. ಪಳನಿಸ್ವಾಮಿ ನಡುವಿನ ಜಟಾಪಟಿಯಿಂದಾಗಿ ಬಿಜೆಪಿಯ ಮಿತ್ರಪಕ್ಷ ಎಐಎಡಿಎಂಕೆ ವಿಭಜನೆಗೊಂಡಿದ್ದು, ಇದೇ ಸಂಧಂರ್ಭವನ್ನು ಬಳಸಿಕೊಂಡು ರಾಜ್ಯದಲ್ಲಿ ತನ್ನ ಸ್ಥಾನವನ್ನು ಬಲಪಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...