Homeಮುಖಪುಟಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಟೀಕೆ: ‘ಜಯ್ ಶಾ ಎಷ್ಟು ಶತಕಗಳನ್ನು ಬಾರಿಸಿದ್ದಾರೆ?’ ಎಂದ DMK

ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಟೀಕೆ: ‘ಜಯ್ ಶಾ ಎಷ್ಟು ಶತಕಗಳನ್ನು ಬಾರಿಸಿದ್ದಾರೆ?’ ಎಂದ DMK

- Advertisement -
- Advertisement -

ತಮಿಳುನಾಡಿನ ಕುಟುಂಬ ರಾಜಕಾರಣದ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಆಡಳಿತರೂಢ ಡಿಎಂಕೆ ತಿರುಗೇಟು ನೀಡಿದ್ದು, “ಜಯ್ ಶಾ ಯಾರು ಮತ್ತು ಅವರು ಎಷ್ಟು ಶತಕಗಳನ್ನು ಬಾರಿಸಿದ್ದಾರೆ?” ಎಂದು ಪ್ರಶ್ನಿಸಿದೆ. ನಡ್ಡಾ ಅವರು ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮೇಲೆ ಕಟುವಾದ ವಾಗ್ದಾಳಿ ನಡೆಸಿ, ‘‘ಕುಟುಂಬ ರಾಜಕಾರಣದ ಹಣ ಲಪಟಾಯಿಸುವ ಕಟ್ಟೆ ಪಂಚಾಯತ್‌” ಎಂದು ಕರೆದಿದ್ದರು.

ಹೊಸ ಶಿಕ್ಷಣ ನೀತಿ ಮತ್ತು ನೀಟ್‌ಗೆ ರಾಜ್ಯ ಸರ್ಕಾರ ವಿರೋಧಿಸುತ್ತಿರುವುದರ ಹಿನ್ನಲೆಯಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಟೀಕಿಸಿರುವ ನಡ್ಡಾ, “ಅಶಿಕ್ಷಿತರು ವ್ಯವಹಾರಗಳ ಚುಕ್ಕಾಣಿ ಹಿಡಿದಾಗ ಹೀಗಾಗುತ್ತದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ತಿರುಗೇಟು ನೀಡಿರುವ ಆಡಳಿತಾರೂಢ ಡಿಎಂಕೆ, “ಒಕ್ಕೂಟ ಸರ್ಕಾರದ ಅಧಿಕಾರದಲ್ಲಿರುವವರ ಶೈಕ್ಷಣಿಕ ಅರ್ಹತೆ ಕೇಳುವ ಮಟ್ಟಕ್ಕೆ ತಾನು ಇಳಿಯುವುದಿಲ್ಲ” ಎಂದು ಹೇಳಿದೆ. “ಜಯ್ ಶಾ ಯಾರು ಮತ್ತು ಅವರು ಎಷ್ಟು ಶತಕಗಳನ್ನು ಹೊಡೆದಿದ್ದಾರೆ?” ಡಿಎಂಕೆ ವಕ್ತಾರ ಎ. ಸರವಣ್ ಕೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಷಾ ಅವರು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿತಯಾದ BCCI ಯ ಗೌರವ ಕಾರ್ಯದರ್ಶಿಯಾಗಿದ್ದಾರೆ.

ಇದನ್ನೂ ಓದಿ: ಸಿನಿಮಾ ಬಿಡುಗಡೆಯಾಗಿ 3 ದಿನ ವಿಮರ್ಶಿಸಬೇಡಿ!: ತಮಿಳು ನಿರ್ಮಾಪಕರ ವಿಚಿತ್ರ ಬೇಡಿಕೆ

ಡಿಎಂಕೆಯನ್ನು ‘ದ್ವೇಷ ಮತ್ತು ವಿಭಜನೆ’ ಹರಡುವ ಪಕ್ಷ ಎಂದು ಕರೆದ ನಡ್ಡಾ, “ನಾವು ಕಾಶ್ಮೀರದಿಂದ ತಮಿಳುನಾಡಿನವರೆಗೆ ಕುಟುಂಬ ರಾಜಕಾರಣದ ಪಕ್ಷಗಳಿಗೆ ಸೀಮಿತವಾದ ಪ್ರಾದೇಶಿಕ ಪಕ್ಷಗಳ ವಿರುದ್ಧ ಹೋರಾಡುತ್ತಿದ್ದೇವೆ. ಬಿಜೆಪಿ ಮಾತ್ರ ಸಿದ್ಧಾಂತ ಆಧಾರಿತ ರಾಷ್ಟ್ರೀಯ ಪಕ್ಷವಾಗಿದೆ. ಬಿಜೆಪಿ ಪ್ರಾದೇಶಿಕ ಆಕಾಂಕ್ಷೆಗಳನ್ನು ನೋಡಿಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಎಂಕೆ ವಕ್ತಾರ,“ಬಿಜೆಪಿಯು ದ್ವೇಷ ಮತ್ತು ವಿಭಜನೆಯ ಯಜಮಾನ. ಇದುವೆ ಅದರ ನಿಜವಾದ ಮುಖ. ಅದು ಯುವ ಜನರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ತಮಿಳುನಾಡಿನ ಜನರು ಬುದ್ಧಿವಂತರಾಗಿದ್ದು, 2024 ರಲ್ಲಿ ಅವರನ್ನು ತಿರಸ್ಕರಿಸುತ್ತಾರೆ” ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಪಕ್ಷವನ್ನು ವಿಸ್ತರಿಸುವ ಪ್ರಯತ್ನದ ಭಾಗವಾಗಿ ನಡ್ಡಾ ಅವರು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ತವರು ನೆಲವಾದ ಕಾರೈಕುಡಿಯಲ್ಲಿ ಈ ಹೇಳಿಕೆಯನ್ನು ನೀಡಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ತಮಿಳು ಹುಡುಗಿಯನ್ನು ಮದುವೆಯಾಗುತ್ತಾರೆ: ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯ ಅಭಿಲಾಷೆ

ಡಿಎಂಕೆ ಮತ್ತು ಎಐಎಡಿಎಂಕೆ ಎರಡು ಪಕ್ಷಗಳ ಪ್ರಾಬಲ್ಯವಿರುವ ತಮಿಳುನಾಡಿನಲ್ಲಿ ಬಿಜೆಪಿಗೆ ಗಟ್ಟಿಯಾದ ಅಸ್ತಿತ್ವವಿಲ್ಲ. ಅಲ್ಲಿ ಬಿಜೆಪಿಗೆ ಲೋಕಸಭಾ ಸಂಸದರಿಲ್ಲ. 2019ರ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರೂ ಸೋಲನುಭವಿಸಿತ್ತು. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯ 234 ಸ್ಥಾನಗಳಲ್ಲಿ ಪಕ್ಷವು ಕೇವಲ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು ಮತ್ತು ಡಿಎಂಕೆ ಅಲ್ಲಿ ಅಧಿಕಾರಕ್ಕೆ ಬಂದಿತ್ತು.

ಪನ್ನೀರಸೆಲ್ವಂ ಮತ್ತು ಇ. ಪಳನಿಸ್ವಾಮಿ ನಡುವಿನ ಜಟಾಪಟಿಯಿಂದಾಗಿ ಬಿಜೆಪಿಯ ಮಿತ್ರಪಕ್ಷ ಎಐಎಡಿಎಂಕೆ ವಿಭಜನೆಗೊಂಡಿದ್ದು, ಇದೇ ಸಂಧಂರ್ಭವನ್ನು ಬಳಸಿಕೊಂಡು ರಾಜ್ಯದಲ್ಲಿ ತನ್ನ ಸ್ಥಾನವನ್ನು ಬಲಪಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...