Homeಮುಖಪುಟಲಂಡನ್‌ ಭಾಷಣ ಸಂಬಂಧ ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು; ಸದನ ಮುಂದೂಡಿಕೆ

ಲಂಡನ್‌ ಭಾಷಣ ಸಂಬಂಧ ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು; ಸದನ ಮುಂದೂಡಿಕೆ

- Advertisement -
- Advertisement -

ಬ್ರಿಟನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸದಸ್ಯರು ಒತ್ತಾಯಿಸಿದ ನಂತರ ಸಂಸತ್ತಿನ ಉಭಯ ಸದನಗಳನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ರಾಹುಲ್ ಗಾಂಧಿಯವರು ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ, “ಭಾರತವು ತನ್ನ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದೆ” ಎಂದಿದ್ದರು.

“ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆಯಾಗಿದೆ” ಎಂದು ಬಣ್ಣಿಸಿದ್ದರು.

ಎರಡನೇ ಹಂತದ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ, ಲೋಕಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿಷಯ ಪ್ರಸ್ತಾಪಿಸಿ, “ರಾಹುಲ್‌ ಗಾಂಧಿಯವರ ಹೇಳಿಕೆಗಳು ದೇಶಕ್ಕೆ ಅವಮಾನ ಮಾಡಿವೆ” ಎಂದು ಆರೋಪಿಸಿದರು.

“ರಾಹುಲ್‌ ಅವರ ಹೇಳಿಕೆಗಳನ್ನು ಈ ಸದನದ ಎಲ್ಲಾ ಸದಸ್ಯರು ಖಂಡಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, “1975ರಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ತುರ್ತುಪರಿಸ್ಥಿತಿಯನ್ನು ರಾಹುಲ್‌ ಅವರಿಗೆ ನೆನಪಿಸಬೇಕು, ಆ ಸಂದರ್ಭದಲ್ಲಿ ಜನರ ಹಕ್ಕುಗಳನ್ನು ಅಮಾನತು ಮಾಡಲಾಗಿತ್ತು” ಎಂದು ವಾದಿಸಿದರು.

ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದ ನಂತರ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮುಂದೂಡಿದರು.

ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮಾತನಾಡಿ, ರಾಹುಲ್‌ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

“ಪ್ರಮುಖ ವಿರೋಧ ಪಕ್ಷದ ನಾಯಕರು ವಿದೇಶಕ್ಕೆ ಹೋಗಿ ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಾರೆ” ಎಂದು ಗೋಯಲ್ ಆರೋಪಿಸಿದರು. “ಅವರು ಭಾರತದ ಜನರನ್ನು ಮತ್ತು ಸಂಸತ್ತನ್ನು ಅವಮಾನಿಸಿದ್ದಾರೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವಿದೆ ಮತ್ತು ಸಂಸದರು ಸಂಸತ್ತಿನಲ್ಲಿ ಮಾತನಾಡಬಹುದು” ಎಂದರು.

ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧದ ಆರೋಪಗಳನ್ನು ಕಾಂಗ್ರೆಸ್ ಪ್ರಸ್ತಾಪಿಸಿದಾಗ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ಮೋದಿ ಅಧಿಕಾರದಲ್ಲಿ ಕಾನೂನು ಮತ್ತು ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅವರು ದೇಶವನ್ನು ಸರ್ವಾಧಿಕಾರದಂತೆ ನಡೆಸುತ್ತಿದ್ದಾರೆ” ಎಂದು ಖರ್ಗೆ ಟೀಕಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಫೆಬ್ರವರಿ 13 ರಂದು ಕೊನೆಗೊಂಡ ಸಂಸತ್ತಿನ ಬಜೆಟ್ ಅಧಿವೇಶನ ಮತ್ತೆ ಆರಂಭವಾದ ಬಳಿಕವೂ ಮುಂದೂಡಿಕೆ ಮತ್ತು ಗದ್ದಲಗಳಿಗೆ ಸಾಕ್ಷಿಯಾಯಿತು. ಅದಾನಿ ಗ್ರೂಪ್‌ನ ಅಕ್ರಮಗಳ ವಿರುದ್ಧ ಜಂಟಿ ಸಂಸದೀಯ ಸಮಿತಿಯು ತನಿಖೆ ನಡೆಸಬೇಕು ಎಂದು ವಿರೋಧಪಕ್ಷಗಳು ಒತ್ತಾಯಿಸಿವೆ.

ಉದ್ಯಮಿ ಗೌತಮ್ ಅದಾನಿ ನೇತೃತ್ವದ ಸಂಸ್ಥೆಯ ಕುರಿತು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಜನವರಿ 24ರಂದು ವರದಿ ಬಿಡುಗಡೆ ಮಾಡಿದ ನಂತರ ಸುಮಾರು $120 ಶತಕೋಟಿ ಮಾರುಕಟ್ಟೆ ಮೌಲ್ಯವನ್ನು ಅದಾನಿ ಗ್ರೂಪ್ ಕಳೆದುಕೊಂಡಿದೆ. “ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಲೆಕ್ಕಪತ್ರ ವಂಚನೆ ಮಾಡಲಾಗಿದೆ. ಇದು ಕಾರ್ಪೊರೇಟ್ ಇತಿಹಾಸದಲ್ಲಿ ಅತಿದೊಡ್ಡ ವಿವಾದವಾಗಿದೆ” ಎಂದು ಆರೋಪಿಸಲಾಗಿದೆ.

ಮೋದಿ ಸರ್ಕಾರವು ವ್ಯಾಪಾರ ವಹಿವಾಟುಗಳಲ್ಲಿ ಅದಾನಿ ಗ್ರೂಪ್‌ಗೆ ಒಲವು ತೋರುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆರೋಪಗಳನ್ನು ತಳ್ಳಿಹಾಕಿದ್ದು, ಬಿಜೆಪಿಯು ಮರೆಮಾಚಲು ಅಥವಾ ಭಯಪಡಲು ಏನೂ ಇಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...