Homeಮುಖಪುಟಲಂಡನ್‌ ಭಾಷಣ ಸಂಬಂಧ ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು; ಸದನ ಮುಂದೂಡಿಕೆ

ಲಂಡನ್‌ ಭಾಷಣ ಸಂಬಂಧ ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು; ಸದನ ಮುಂದೂಡಿಕೆ

- Advertisement -
- Advertisement -

ಬ್ರಿಟನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸದಸ್ಯರು ಒತ್ತಾಯಿಸಿದ ನಂತರ ಸಂಸತ್ತಿನ ಉಭಯ ಸದನಗಳನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ರಾಹುಲ್ ಗಾಂಧಿಯವರು ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ, “ಭಾರತವು ತನ್ನ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದೆ” ಎಂದಿದ್ದರು.

“ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆಯಾಗಿದೆ” ಎಂದು ಬಣ್ಣಿಸಿದ್ದರು.

ಎರಡನೇ ಹಂತದ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ, ಲೋಕಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿಷಯ ಪ್ರಸ್ತಾಪಿಸಿ, “ರಾಹುಲ್‌ ಗಾಂಧಿಯವರ ಹೇಳಿಕೆಗಳು ದೇಶಕ್ಕೆ ಅವಮಾನ ಮಾಡಿವೆ” ಎಂದು ಆರೋಪಿಸಿದರು.

“ರಾಹುಲ್‌ ಅವರ ಹೇಳಿಕೆಗಳನ್ನು ಈ ಸದನದ ಎಲ್ಲಾ ಸದಸ್ಯರು ಖಂಡಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, “1975ರಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ತುರ್ತುಪರಿಸ್ಥಿತಿಯನ್ನು ರಾಹುಲ್‌ ಅವರಿಗೆ ನೆನಪಿಸಬೇಕು, ಆ ಸಂದರ್ಭದಲ್ಲಿ ಜನರ ಹಕ್ಕುಗಳನ್ನು ಅಮಾನತು ಮಾಡಲಾಗಿತ್ತು” ಎಂದು ವಾದಿಸಿದರು.

ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದ ನಂತರ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮುಂದೂಡಿದರು.

ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮಾತನಾಡಿ, ರಾಹುಲ್‌ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

“ಪ್ರಮುಖ ವಿರೋಧ ಪಕ್ಷದ ನಾಯಕರು ವಿದೇಶಕ್ಕೆ ಹೋಗಿ ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಾರೆ” ಎಂದು ಗೋಯಲ್ ಆರೋಪಿಸಿದರು. “ಅವರು ಭಾರತದ ಜನರನ್ನು ಮತ್ತು ಸಂಸತ್ತನ್ನು ಅವಮಾನಿಸಿದ್ದಾರೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವಿದೆ ಮತ್ತು ಸಂಸದರು ಸಂಸತ್ತಿನಲ್ಲಿ ಮಾತನಾಡಬಹುದು” ಎಂದರು.

ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧದ ಆರೋಪಗಳನ್ನು ಕಾಂಗ್ರೆಸ್ ಪ್ರಸ್ತಾಪಿಸಿದಾಗ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ಮೋದಿ ಅಧಿಕಾರದಲ್ಲಿ ಕಾನೂನು ಮತ್ತು ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅವರು ದೇಶವನ್ನು ಸರ್ವಾಧಿಕಾರದಂತೆ ನಡೆಸುತ್ತಿದ್ದಾರೆ” ಎಂದು ಖರ್ಗೆ ಟೀಕಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಫೆಬ್ರವರಿ 13 ರಂದು ಕೊನೆಗೊಂಡ ಸಂಸತ್ತಿನ ಬಜೆಟ್ ಅಧಿವೇಶನ ಮತ್ತೆ ಆರಂಭವಾದ ಬಳಿಕವೂ ಮುಂದೂಡಿಕೆ ಮತ್ತು ಗದ್ದಲಗಳಿಗೆ ಸಾಕ್ಷಿಯಾಯಿತು. ಅದಾನಿ ಗ್ರೂಪ್‌ನ ಅಕ್ರಮಗಳ ವಿರುದ್ಧ ಜಂಟಿ ಸಂಸದೀಯ ಸಮಿತಿಯು ತನಿಖೆ ನಡೆಸಬೇಕು ಎಂದು ವಿರೋಧಪಕ್ಷಗಳು ಒತ್ತಾಯಿಸಿವೆ.

ಉದ್ಯಮಿ ಗೌತಮ್ ಅದಾನಿ ನೇತೃತ್ವದ ಸಂಸ್ಥೆಯ ಕುರಿತು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಜನವರಿ 24ರಂದು ವರದಿ ಬಿಡುಗಡೆ ಮಾಡಿದ ನಂತರ ಸುಮಾರು $120 ಶತಕೋಟಿ ಮಾರುಕಟ್ಟೆ ಮೌಲ್ಯವನ್ನು ಅದಾನಿ ಗ್ರೂಪ್ ಕಳೆದುಕೊಂಡಿದೆ. “ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಲೆಕ್ಕಪತ್ರ ವಂಚನೆ ಮಾಡಲಾಗಿದೆ. ಇದು ಕಾರ್ಪೊರೇಟ್ ಇತಿಹಾಸದಲ್ಲಿ ಅತಿದೊಡ್ಡ ವಿವಾದವಾಗಿದೆ” ಎಂದು ಆರೋಪಿಸಲಾಗಿದೆ.

ಮೋದಿ ಸರ್ಕಾರವು ವ್ಯಾಪಾರ ವಹಿವಾಟುಗಳಲ್ಲಿ ಅದಾನಿ ಗ್ರೂಪ್‌ಗೆ ಒಲವು ತೋರುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆರೋಪಗಳನ್ನು ತಳ್ಳಿಹಾಕಿದ್ದು, ಬಿಜೆಪಿಯು ಮರೆಮಾಚಲು ಅಥವಾ ಭಯಪಡಲು ಏನೂ ಇಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...