Homeಮುಖಪುಟಲಂಡನ್‌ ಭಾಷಣ ಸಂಬಂಧ ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು; ಸದನ ಮುಂದೂಡಿಕೆ

ಲಂಡನ್‌ ಭಾಷಣ ಸಂಬಂಧ ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು; ಸದನ ಮುಂದೂಡಿಕೆ

- Advertisement -
- Advertisement -

ಬ್ರಿಟನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸದಸ್ಯರು ಒತ್ತಾಯಿಸಿದ ನಂತರ ಸಂಸತ್ತಿನ ಉಭಯ ಸದನಗಳನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ರಾಹುಲ್ ಗಾಂಧಿಯವರು ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ, “ಭಾರತವು ತನ್ನ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದೆ” ಎಂದಿದ್ದರು.

“ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆಯಾಗಿದೆ” ಎಂದು ಬಣ್ಣಿಸಿದ್ದರು.

ಎರಡನೇ ಹಂತದ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ, ಲೋಕಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿಷಯ ಪ್ರಸ್ತಾಪಿಸಿ, “ರಾಹುಲ್‌ ಗಾಂಧಿಯವರ ಹೇಳಿಕೆಗಳು ದೇಶಕ್ಕೆ ಅವಮಾನ ಮಾಡಿವೆ” ಎಂದು ಆರೋಪಿಸಿದರು.

“ರಾಹುಲ್‌ ಅವರ ಹೇಳಿಕೆಗಳನ್ನು ಈ ಸದನದ ಎಲ್ಲಾ ಸದಸ್ಯರು ಖಂಡಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, “1975ರಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ತುರ್ತುಪರಿಸ್ಥಿತಿಯನ್ನು ರಾಹುಲ್‌ ಅವರಿಗೆ ನೆನಪಿಸಬೇಕು, ಆ ಸಂದರ್ಭದಲ್ಲಿ ಜನರ ಹಕ್ಕುಗಳನ್ನು ಅಮಾನತು ಮಾಡಲಾಗಿತ್ತು” ಎಂದು ವಾದಿಸಿದರು.

ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದ ನಂತರ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮುಂದೂಡಿದರು.

ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮಾತನಾಡಿ, ರಾಹುಲ್‌ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

“ಪ್ರಮುಖ ವಿರೋಧ ಪಕ್ಷದ ನಾಯಕರು ವಿದೇಶಕ್ಕೆ ಹೋಗಿ ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಾರೆ” ಎಂದು ಗೋಯಲ್ ಆರೋಪಿಸಿದರು. “ಅವರು ಭಾರತದ ಜನರನ್ನು ಮತ್ತು ಸಂಸತ್ತನ್ನು ಅವಮಾನಿಸಿದ್ದಾರೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವಿದೆ ಮತ್ತು ಸಂಸದರು ಸಂಸತ್ತಿನಲ್ಲಿ ಮಾತನಾಡಬಹುದು” ಎಂದರು.

ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧದ ಆರೋಪಗಳನ್ನು ಕಾಂಗ್ರೆಸ್ ಪ್ರಸ್ತಾಪಿಸಿದಾಗ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ಮೋದಿ ಅಧಿಕಾರದಲ್ಲಿ ಕಾನೂನು ಮತ್ತು ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅವರು ದೇಶವನ್ನು ಸರ್ವಾಧಿಕಾರದಂತೆ ನಡೆಸುತ್ತಿದ್ದಾರೆ” ಎಂದು ಖರ್ಗೆ ಟೀಕಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಫೆಬ್ರವರಿ 13 ರಂದು ಕೊನೆಗೊಂಡ ಸಂಸತ್ತಿನ ಬಜೆಟ್ ಅಧಿವೇಶನ ಮತ್ತೆ ಆರಂಭವಾದ ಬಳಿಕವೂ ಮುಂದೂಡಿಕೆ ಮತ್ತು ಗದ್ದಲಗಳಿಗೆ ಸಾಕ್ಷಿಯಾಯಿತು. ಅದಾನಿ ಗ್ರೂಪ್‌ನ ಅಕ್ರಮಗಳ ವಿರುದ್ಧ ಜಂಟಿ ಸಂಸದೀಯ ಸಮಿತಿಯು ತನಿಖೆ ನಡೆಸಬೇಕು ಎಂದು ವಿರೋಧಪಕ್ಷಗಳು ಒತ್ತಾಯಿಸಿವೆ.

ಉದ್ಯಮಿ ಗೌತಮ್ ಅದಾನಿ ನೇತೃತ್ವದ ಸಂಸ್ಥೆಯ ಕುರಿತು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಜನವರಿ 24ರಂದು ವರದಿ ಬಿಡುಗಡೆ ಮಾಡಿದ ನಂತರ ಸುಮಾರು $120 ಶತಕೋಟಿ ಮಾರುಕಟ್ಟೆ ಮೌಲ್ಯವನ್ನು ಅದಾನಿ ಗ್ರೂಪ್ ಕಳೆದುಕೊಂಡಿದೆ. “ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಲೆಕ್ಕಪತ್ರ ವಂಚನೆ ಮಾಡಲಾಗಿದೆ. ಇದು ಕಾರ್ಪೊರೇಟ್ ಇತಿಹಾಸದಲ್ಲಿ ಅತಿದೊಡ್ಡ ವಿವಾದವಾಗಿದೆ” ಎಂದು ಆರೋಪಿಸಲಾಗಿದೆ.

ಮೋದಿ ಸರ್ಕಾರವು ವ್ಯಾಪಾರ ವಹಿವಾಟುಗಳಲ್ಲಿ ಅದಾನಿ ಗ್ರೂಪ್‌ಗೆ ಒಲವು ತೋರುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆರೋಪಗಳನ್ನು ತಳ್ಳಿಹಾಕಿದ್ದು, ಬಿಜೆಪಿಯು ಮರೆಮಾಚಲು ಅಥವಾ ಭಯಪಡಲು ಏನೂ ಇಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...