Homeಮುಖಪುಟಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಈಗ ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರದ ಮುಂದೆ ಹೆಸರು ಬದಲಾವಣೆಯ ಒತ್ತಾಯವನ್ನು ಬಿಜೆಪಿ ಮಾಡಿದೆ.

- Advertisement -
- Advertisement -

ಮೊಘಲ್ ಸಾಮ್ರಾಟರ ಅವಧಿಯ ಹೆಸರುಗಳನ್ನು ಸೂಚಿಸುವ 40 ಗ್ರಾಮಗಳಿಗೆ ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿ ದೆಹಲಿ ಬಿಜೆಪಿಯು ಎಎಪಿ ನೇತೃತ್ವದ ದೆಹಲಿ ಸರ್ಕಾರವನ್ನು ಆಗ್ರಹಿಸಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಸಾವಿಗೀಡಾದ ಐಬಿ ಸಿಬ್ಬಂದಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೆಬಲ್ ರತನ್ ಲಾಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು ಮತ್ತು ಹುತಾತ್ಮರ ಹೆಸರನ್ನು ಆ ಗ್ರಾಮಗಳಿಗೆ ಇಡಬೇಕು ಎಂದು ಆಗ್ರಹಿಸಲಾಗಿದೆ.

ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ದೆಹಲಿ ಪೊಲೀಸ್ ಅಧಿಕಾರಿ ಮೋಹನ್ ಚಂದ್ ಶರ್ಮಾ, ಕಾರ್ಗಿಲ್ ಯುದ್ಧದ ಸಮಯದಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮಹರ್ಷಿ ವಾಲ್ಮೀಕಿ, ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಮೊಹಮ್ಮದ್ ರಫಿ, ಕ್ರಿಕೆಟಿಗ ಯಶಪಾಲ್ ಶರ್ಮಾ, ಅಥ್ಲೀಟ್ ಮಿಲ್ಕಾ ಸಿಂಗ್ ಅವರ ಹೆಸರುಗಳನ್ನು ಬಿಜೆಪಿ ಪ್ರಾಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನರು ಮೊಘಲರ ಕಾಲದ ಹೆಸರುಗಳನ್ನು ಬದಲಾಯಿಸಬೇಕೆಂದು ಬಯಸುತ್ತಿರುವ ಕಾರಣ ನಾವು ಹಳ್ಳಿಗಳಿಗೆ ಬೇರೆ ಹೆಸರು ಇಡಲು ಪ್ರಸ್ತಾವನೆಯನ್ನು ಕಳುಹಿಸುತ್ತಿದ್ದೇವೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಮೊಘಲ ಸಾಮ್ರಾಜ್ಯಕ್ಕೆ ಸಂಬಂಧಿಸಿದ” ಮತ್ತು “ಗುಲಾಮತನದ ಮನಸ್ಥಿತಿಯನ್ನು ಸಂಕೇತಿಸುವ” ಹೆಸರುಗಳನ್ನು ಹೊಂದಿರುವ 40 ಹಳ್ಳಿಗಳಿವೆ ಎಂದು ಅವರು ಆರೋಪಿಸಿದ್ದಾರೆ.

“ಜಿಯಾ ಸರೈ, ಜಮ್ರೂದ್‌ಪುರ, ಮಸೂದ್‌ಪುರ್, ಜಾಫರ್‌ಪುರ್ ಕಲಾನ್, ತಾಜ್‌ಪುರ, ನಜಾಫ್‌ಗಢ್, ನೆಬ್ ಸರೈ ಮುಂತಾದ ಹೆಸರುಗಳಿರುವ ಗ್ರಾಮಗಳಿವೆ” ಎಂದು ಗುಪ್ತಾ ಹೇಳಿದ್ದಾರೆ.

“ಇನ್ನು ಮುಂದೆ ಈ ಗುಲಾಮಗಿರಿಯ ಸಂಕೇತಗಳನ್ನು ಮುಂದುವರಿಸಲು ಈ ಹಳ್ಳಿಗಳ ಯುವಕರು ಬಯಸುವುದಿಲ್ಲ. ದೇಶದ ಮಹಾನ್ ಪುತ್ರರು, ಪ್ರಖ್ಯಾತ ವ್ಯಕ್ತಿಗಳ ಹೆಸರಿನಿಂದ ಗುರುತಿಸಲ್ಪಡಬೇಕು ಎಂದು ಈ ಗ್ರಾಮಗಳ ಯುವಕರು ಬಯಸುತ್ತಾರೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಒಂದು ದಿನ ಮೊದಲು ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾದವಪುರ ಎಂದು ಬದಲಾಯಿಸುವಂತೆ ಒತ್ತಾಯಿಸಿ ಬೋರ್ಡ್ ಕೂಡ ಹಾಕಲಾಗಿತ್ತು. ಗುಪ್ತಾ ಸೈಯದ್ ಉಲ್ ಅಜೈಬ್, ಹೌಜ್ ಖಾಸ್ ಮತ್ತು ನಜಾಫ್‌ಗಢ್ ಹೆಸರನ್ನು ಸಹ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದರು.

ಪಂಚಾಯಿತಿಗಳು ಮತ್ತು ಸ್ಥಳೀಯರೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯನ್ನು ಮುಂದಿಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ದಿಲ್ಲಿ ಸಿಎಂ ರಾಜಕೀಯ ಮಾಡುವುದಿಲ್ಲ. ನಮ್ಮ ಪ್ರಸ್ತಾಪವನ್ನು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಭಗತ್ ಸಿಂಗ್ ಟೋಕಾಸ್ ಅವರು ಮೊಹಮ್ಮದ್‌ಪುರ ಗ್ರಾಮವನ್ನು ಮಾಧವಪುರ ಎಂದು ಘೋಷಿಸುವ ಫಲಕಗಳನ್ನು ಹಾಕಿದ್ದರು. ಈ ಪ್ರದೇಶವನ್ನು ಮರುನಾಮಕರಣ ಮಾಡಲು ಕೆಲವು ಸ್ಥಳೀಯರೊಂದಿಗೆ ಗುಪ್ತಾ ಕಾರ್ಯಕ್ರಮದಲ್ಲಿ ಹಾಜರಿದ್ದರು. ಹೆಸರುಗಳನ್ನು ಬದಲಾಯಿಸುವ ಅಂತಿಮ ಅಧಿಕಾರವು ದೆಹಲಿ ಸರ್ಕಾರಕ್ಕಿದೆ.

ಅಭಿವೃದ್ಧಿ ರಾಜಕೀಯವನ್ನು ಬದಿಗೆಸೆದಿರುವ ಬಿಜೆಪಿ ಕೋಮು ಕೇಂದ್ರಿತ ಹೆಸರು ಬದಲಾವಣೆಯ ರಾಜಕೀಯವನ್ನು ಮುಂದುವರಿಸಿದೆ ಎಂಬ ಆರೋಪಗಳು ಸಾಮಾನ್ಯವಾಗಿವೆ.

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್ ಇತಿಹಾಸಕ್ಕೆ ಕತ್ತರಿ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ (ಸಿಬಿಎಸ್‌ಇ) ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕಡಿವಾಣ ಹಾಕುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿತ್ತು.

ಮೊಘಲ್‌ ಸಾಮ್ರಾಜ್ಯವನ್ನು ವೈಭವೀಕರಿಸುವ ಮತ್ತು ಇಸ್ಲಾಂ ಧರ್ಮದ ವಿಸ್ತರಣೆಯ ಕುರಿತು ಪಾಕಿಸ್ತಾನಿ ಕವಿಯ ನಜ್ಮ್‌ ಅವರ ಪಠ್ಯವನ್ನು ಹೈಯರ್‌ ಸೆಕೆಂಡರಿ ಪಠ್ಯಕ್ರಮದಿಂದ ಸಿಬಿಎಸ್‌ಇ ತೆಗೆದಿದೆ.

ಹೊಸ ಶೈಕ್ಷಣಿಕ ಅವಧಿಗೆ ಪ್ರಕಟಿಸಿದ ಪಠ್ಯಕ್ರಮದಲ್ಲಿ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಎನ್‌ಸಿಇಆರ್‌ಟಿ ಪುಸ್ತಕದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳಿಂದ ಫೈಜ್ ಅಹಮದ್ ಫೈಜ್ ಅವರ ಶಾಯರಿ ಮತ್ತು 11ನೇ ತರಗತಿಯ ಇತಿಹಾಸ ಪುಸ್ತಕದಿಂದ ಇಸ್ಲಾಂ ಧರ್ಮದ ಸ್ಥಾಪನೆ, ಉದಯ ಮತ್ತು ವಿಸ್ತರಣೆಯ ಪಠ್ಯವನ್ನು ತೆಗೆದುಹಾಕಲಾಗಿದೆ. ಅದೇ ಸಮಯದಲ್ಲಿ, 12ನೇ ತರಗತಿ ಪುಸ್ತಕದಿಂದ ಮೊಘಲ್ ಸಾಮ್ರಾಜ್ಯದ ಆಡಳಿತ ಅಧ್ಯಾಯದಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...