Homeಮುಖಪುಟಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಈಗ ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರದ ಮುಂದೆ ಹೆಸರು ಬದಲಾವಣೆಯ ಒತ್ತಾಯವನ್ನು ಬಿಜೆಪಿ ಮಾಡಿದೆ.

- Advertisement -
- Advertisement -

ಮೊಘಲ್ ಸಾಮ್ರಾಟರ ಅವಧಿಯ ಹೆಸರುಗಳನ್ನು ಸೂಚಿಸುವ 40 ಗ್ರಾಮಗಳಿಗೆ ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿ ದೆಹಲಿ ಬಿಜೆಪಿಯು ಎಎಪಿ ನೇತೃತ್ವದ ದೆಹಲಿ ಸರ್ಕಾರವನ್ನು ಆಗ್ರಹಿಸಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಸಾವಿಗೀಡಾದ ಐಬಿ ಸಿಬ್ಬಂದಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೆಬಲ್ ರತನ್ ಲಾಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು ಮತ್ತು ಹುತಾತ್ಮರ ಹೆಸರನ್ನು ಆ ಗ್ರಾಮಗಳಿಗೆ ಇಡಬೇಕು ಎಂದು ಆಗ್ರಹಿಸಲಾಗಿದೆ.

ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ದೆಹಲಿ ಪೊಲೀಸ್ ಅಧಿಕಾರಿ ಮೋಹನ್ ಚಂದ್ ಶರ್ಮಾ, ಕಾರ್ಗಿಲ್ ಯುದ್ಧದ ಸಮಯದಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮಹರ್ಷಿ ವಾಲ್ಮೀಕಿ, ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಮೊಹಮ್ಮದ್ ರಫಿ, ಕ್ರಿಕೆಟಿಗ ಯಶಪಾಲ್ ಶರ್ಮಾ, ಅಥ್ಲೀಟ್ ಮಿಲ್ಕಾ ಸಿಂಗ್ ಅವರ ಹೆಸರುಗಳನ್ನು ಬಿಜೆಪಿ ಪ್ರಾಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನರು ಮೊಘಲರ ಕಾಲದ ಹೆಸರುಗಳನ್ನು ಬದಲಾಯಿಸಬೇಕೆಂದು ಬಯಸುತ್ತಿರುವ ಕಾರಣ ನಾವು ಹಳ್ಳಿಗಳಿಗೆ ಬೇರೆ ಹೆಸರು ಇಡಲು ಪ್ರಸ್ತಾವನೆಯನ್ನು ಕಳುಹಿಸುತ್ತಿದ್ದೇವೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಮೊಘಲ ಸಾಮ್ರಾಜ್ಯಕ್ಕೆ ಸಂಬಂಧಿಸಿದ” ಮತ್ತು “ಗುಲಾಮತನದ ಮನಸ್ಥಿತಿಯನ್ನು ಸಂಕೇತಿಸುವ” ಹೆಸರುಗಳನ್ನು ಹೊಂದಿರುವ 40 ಹಳ್ಳಿಗಳಿವೆ ಎಂದು ಅವರು ಆರೋಪಿಸಿದ್ದಾರೆ.

“ಜಿಯಾ ಸರೈ, ಜಮ್ರೂದ್‌ಪುರ, ಮಸೂದ್‌ಪುರ್, ಜಾಫರ್‌ಪುರ್ ಕಲಾನ್, ತಾಜ್‌ಪುರ, ನಜಾಫ್‌ಗಢ್, ನೆಬ್ ಸರೈ ಮುಂತಾದ ಹೆಸರುಗಳಿರುವ ಗ್ರಾಮಗಳಿವೆ” ಎಂದು ಗುಪ್ತಾ ಹೇಳಿದ್ದಾರೆ.

“ಇನ್ನು ಮುಂದೆ ಈ ಗುಲಾಮಗಿರಿಯ ಸಂಕೇತಗಳನ್ನು ಮುಂದುವರಿಸಲು ಈ ಹಳ್ಳಿಗಳ ಯುವಕರು ಬಯಸುವುದಿಲ್ಲ. ದೇಶದ ಮಹಾನ್ ಪುತ್ರರು, ಪ್ರಖ್ಯಾತ ವ್ಯಕ್ತಿಗಳ ಹೆಸರಿನಿಂದ ಗುರುತಿಸಲ್ಪಡಬೇಕು ಎಂದು ಈ ಗ್ರಾಮಗಳ ಯುವಕರು ಬಯಸುತ್ತಾರೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಒಂದು ದಿನ ಮೊದಲು ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾದವಪುರ ಎಂದು ಬದಲಾಯಿಸುವಂತೆ ಒತ್ತಾಯಿಸಿ ಬೋರ್ಡ್ ಕೂಡ ಹಾಕಲಾಗಿತ್ತು. ಗುಪ್ತಾ ಸೈಯದ್ ಉಲ್ ಅಜೈಬ್, ಹೌಜ್ ಖಾಸ್ ಮತ್ತು ನಜಾಫ್‌ಗಢ್ ಹೆಸರನ್ನು ಸಹ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದರು.

ಪಂಚಾಯಿತಿಗಳು ಮತ್ತು ಸ್ಥಳೀಯರೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯನ್ನು ಮುಂದಿಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ದಿಲ್ಲಿ ಸಿಎಂ ರಾಜಕೀಯ ಮಾಡುವುದಿಲ್ಲ. ನಮ್ಮ ಪ್ರಸ್ತಾಪವನ್ನು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಭಗತ್ ಸಿಂಗ್ ಟೋಕಾಸ್ ಅವರು ಮೊಹಮ್ಮದ್‌ಪುರ ಗ್ರಾಮವನ್ನು ಮಾಧವಪುರ ಎಂದು ಘೋಷಿಸುವ ಫಲಕಗಳನ್ನು ಹಾಕಿದ್ದರು. ಈ ಪ್ರದೇಶವನ್ನು ಮರುನಾಮಕರಣ ಮಾಡಲು ಕೆಲವು ಸ್ಥಳೀಯರೊಂದಿಗೆ ಗುಪ್ತಾ ಕಾರ್ಯಕ್ರಮದಲ್ಲಿ ಹಾಜರಿದ್ದರು. ಹೆಸರುಗಳನ್ನು ಬದಲಾಯಿಸುವ ಅಂತಿಮ ಅಧಿಕಾರವು ದೆಹಲಿ ಸರ್ಕಾರಕ್ಕಿದೆ.

ಅಭಿವೃದ್ಧಿ ರಾಜಕೀಯವನ್ನು ಬದಿಗೆಸೆದಿರುವ ಬಿಜೆಪಿ ಕೋಮು ಕೇಂದ್ರಿತ ಹೆಸರು ಬದಲಾವಣೆಯ ರಾಜಕೀಯವನ್ನು ಮುಂದುವರಿಸಿದೆ ಎಂಬ ಆರೋಪಗಳು ಸಾಮಾನ್ಯವಾಗಿವೆ.

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್ ಇತಿಹಾಸಕ್ಕೆ ಕತ್ತರಿ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ (ಸಿಬಿಎಸ್‌ಇ) ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕಡಿವಾಣ ಹಾಕುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿತ್ತು.

ಮೊಘಲ್‌ ಸಾಮ್ರಾಜ್ಯವನ್ನು ವೈಭವೀಕರಿಸುವ ಮತ್ತು ಇಸ್ಲಾಂ ಧರ್ಮದ ವಿಸ್ತರಣೆಯ ಕುರಿತು ಪಾಕಿಸ್ತಾನಿ ಕವಿಯ ನಜ್ಮ್‌ ಅವರ ಪಠ್ಯವನ್ನು ಹೈಯರ್‌ ಸೆಕೆಂಡರಿ ಪಠ್ಯಕ್ರಮದಿಂದ ಸಿಬಿಎಸ್‌ಇ ತೆಗೆದಿದೆ.

ಹೊಸ ಶೈಕ್ಷಣಿಕ ಅವಧಿಗೆ ಪ್ರಕಟಿಸಿದ ಪಠ್ಯಕ್ರಮದಲ್ಲಿ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಎನ್‌ಸಿಇಆರ್‌ಟಿ ಪುಸ್ತಕದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳಿಂದ ಫೈಜ್ ಅಹಮದ್ ಫೈಜ್ ಅವರ ಶಾಯರಿ ಮತ್ತು 11ನೇ ತರಗತಿಯ ಇತಿಹಾಸ ಪುಸ್ತಕದಿಂದ ಇಸ್ಲಾಂ ಧರ್ಮದ ಸ್ಥಾಪನೆ, ಉದಯ ಮತ್ತು ವಿಸ್ತರಣೆಯ ಪಠ್ಯವನ್ನು ತೆಗೆದುಹಾಕಲಾಗಿದೆ. ಅದೇ ಸಮಯದಲ್ಲಿ, 12ನೇ ತರಗತಿ ಪುಸ್ತಕದಿಂದ ಮೊಘಲ್ ಸಾಮ್ರಾಜ್ಯದ ಆಡಳಿತ ಅಧ್ಯಾಯದಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...