Homeಮುಖಪುಟಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಈಗ ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರದ ಮುಂದೆ ಹೆಸರು ಬದಲಾವಣೆಯ ಒತ್ತಾಯವನ್ನು ಬಿಜೆಪಿ ಮಾಡಿದೆ.

- Advertisement -
- Advertisement -

ಮೊಘಲ್ ಸಾಮ್ರಾಟರ ಅವಧಿಯ ಹೆಸರುಗಳನ್ನು ಸೂಚಿಸುವ 40 ಗ್ರಾಮಗಳಿಗೆ ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿ ದೆಹಲಿ ಬಿಜೆಪಿಯು ಎಎಪಿ ನೇತೃತ್ವದ ದೆಹಲಿ ಸರ್ಕಾರವನ್ನು ಆಗ್ರಹಿಸಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಸಾವಿಗೀಡಾದ ಐಬಿ ಸಿಬ್ಬಂದಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೆಬಲ್ ರತನ್ ಲಾಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು ಮತ್ತು ಹುತಾತ್ಮರ ಹೆಸರನ್ನು ಆ ಗ್ರಾಮಗಳಿಗೆ ಇಡಬೇಕು ಎಂದು ಆಗ್ರಹಿಸಲಾಗಿದೆ.

ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ದೆಹಲಿ ಪೊಲೀಸ್ ಅಧಿಕಾರಿ ಮೋಹನ್ ಚಂದ್ ಶರ್ಮಾ, ಕಾರ್ಗಿಲ್ ಯುದ್ಧದ ಸಮಯದಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮಹರ್ಷಿ ವಾಲ್ಮೀಕಿ, ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಮೊಹಮ್ಮದ್ ರಫಿ, ಕ್ರಿಕೆಟಿಗ ಯಶಪಾಲ್ ಶರ್ಮಾ, ಅಥ್ಲೀಟ್ ಮಿಲ್ಕಾ ಸಿಂಗ್ ಅವರ ಹೆಸರುಗಳನ್ನು ಬಿಜೆಪಿ ಪ್ರಾಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನರು ಮೊಘಲರ ಕಾಲದ ಹೆಸರುಗಳನ್ನು ಬದಲಾಯಿಸಬೇಕೆಂದು ಬಯಸುತ್ತಿರುವ ಕಾರಣ ನಾವು ಹಳ್ಳಿಗಳಿಗೆ ಬೇರೆ ಹೆಸರು ಇಡಲು ಪ್ರಸ್ತಾವನೆಯನ್ನು ಕಳುಹಿಸುತ್ತಿದ್ದೇವೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಮೊಘಲ ಸಾಮ್ರಾಜ್ಯಕ್ಕೆ ಸಂಬಂಧಿಸಿದ” ಮತ್ತು “ಗುಲಾಮತನದ ಮನಸ್ಥಿತಿಯನ್ನು ಸಂಕೇತಿಸುವ” ಹೆಸರುಗಳನ್ನು ಹೊಂದಿರುವ 40 ಹಳ್ಳಿಗಳಿವೆ ಎಂದು ಅವರು ಆರೋಪಿಸಿದ್ದಾರೆ.

“ಜಿಯಾ ಸರೈ, ಜಮ್ರೂದ್‌ಪುರ, ಮಸೂದ್‌ಪುರ್, ಜಾಫರ್‌ಪುರ್ ಕಲಾನ್, ತಾಜ್‌ಪುರ, ನಜಾಫ್‌ಗಢ್, ನೆಬ್ ಸರೈ ಮುಂತಾದ ಹೆಸರುಗಳಿರುವ ಗ್ರಾಮಗಳಿವೆ” ಎಂದು ಗುಪ್ತಾ ಹೇಳಿದ್ದಾರೆ.

“ಇನ್ನು ಮುಂದೆ ಈ ಗುಲಾಮಗಿರಿಯ ಸಂಕೇತಗಳನ್ನು ಮುಂದುವರಿಸಲು ಈ ಹಳ್ಳಿಗಳ ಯುವಕರು ಬಯಸುವುದಿಲ್ಲ. ದೇಶದ ಮಹಾನ್ ಪುತ್ರರು, ಪ್ರಖ್ಯಾತ ವ್ಯಕ್ತಿಗಳ ಹೆಸರಿನಿಂದ ಗುರುತಿಸಲ್ಪಡಬೇಕು ಎಂದು ಈ ಗ್ರಾಮಗಳ ಯುವಕರು ಬಯಸುತ್ತಾರೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಒಂದು ದಿನ ಮೊದಲು ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾದವಪುರ ಎಂದು ಬದಲಾಯಿಸುವಂತೆ ಒತ್ತಾಯಿಸಿ ಬೋರ್ಡ್ ಕೂಡ ಹಾಕಲಾಗಿತ್ತು. ಗುಪ್ತಾ ಸೈಯದ್ ಉಲ್ ಅಜೈಬ್, ಹೌಜ್ ಖಾಸ್ ಮತ್ತು ನಜಾಫ್‌ಗಢ್ ಹೆಸರನ್ನು ಸಹ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದರು.

ಪಂಚಾಯಿತಿಗಳು ಮತ್ತು ಸ್ಥಳೀಯರೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯನ್ನು ಮುಂದಿಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ದಿಲ್ಲಿ ಸಿಎಂ ರಾಜಕೀಯ ಮಾಡುವುದಿಲ್ಲ. ನಮ್ಮ ಪ್ರಸ್ತಾಪವನ್ನು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಭಗತ್ ಸಿಂಗ್ ಟೋಕಾಸ್ ಅವರು ಮೊಹಮ್ಮದ್‌ಪುರ ಗ್ರಾಮವನ್ನು ಮಾಧವಪುರ ಎಂದು ಘೋಷಿಸುವ ಫಲಕಗಳನ್ನು ಹಾಕಿದ್ದರು. ಈ ಪ್ರದೇಶವನ್ನು ಮರುನಾಮಕರಣ ಮಾಡಲು ಕೆಲವು ಸ್ಥಳೀಯರೊಂದಿಗೆ ಗುಪ್ತಾ ಕಾರ್ಯಕ್ರಮದಲ್ಲಿ ಹಾಜರಿದ್ದರು. ಹೆಸರುಗಳನ್ನು ಬದಲಾಯಿಸುವ ಅಂತಿಮ ಅಧಿಕಾರವು ದೆಹಲಿ ಸರ್ಕಾರಕ್ಕಿದೆ.

ಅಭಿವೃದ್ಧಿ ರಾಜಕೀಯವನ್ನು ಬದಿಗೆಸೆದಿರುವ ಬಿಜೆಪಿ ಕೋಮು ಕೇಂದ್ರಿತ ಹೆಸರು ಬದಲಾವಣೆಯ ರಾಜಕೀಯವನ್ನು ಮುಂದುವರಿಸಿದೆ ಎಂಬ ಆರೋಪಗಳು ಸಾಮಾನ್ಯವಾಗಿವೆ.

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್ ಇತಿಹಾಸಕ್ಕೆ ಕತ್ತರಿ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ (ಸಿಬಿಎಸ್‌ಇ) ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕಡಿವಾಣ ಹಾಕುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿತ್ತು.

ಮೊಘಲ್‌ ಸಾಮ್ರಾಜ್ಯವನ್ನು ವೈಭವೀಕರಿಸುವ ಮತ್ತು ಇಸ್ಲಾಂ ಧರ್ಮದ ವಿಸ್ತರಣೆಯ ಕುರಿತು ಪಾಕಿಸ್ತಾನಿ ಕವಿಯ ನಜ್ಮ್‌ ಅವರ ಪಠ್ಯವನ್ನು ಹೈಯರ್‌ ಸೆಕೆಂಡರಿ ಪಠ್ಯಕ್ರಮದಿಂದ ಸಿಬಿಎಸ್‌ಇ ತೆಗೆದಿದೆ.

ಹೊಸ ಶೈಕ್ಷಣಿಕ ಅವಧಿಗೆ ಪ್ರಕಟಿಸಿದ ಪಠ್ಯಕ್ರಮದಲ್ಲಿ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಎನ್‌ಸಿಇಆರ್‌ಟಿ ಪುಸ್ತಕದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳಿಂದ ಫೈಜ್ ಅಹಮದ್ ಫೈಜ್ ಅವರ ಶಾಯರಿ ಮತ್ತು 11ನೇ ತರಗತಿಯ ಇತಿಹಾಸ ಪುಸ್ತಕದಿಂದ ಇಸ್ಲಾಂ ಧರ್ಮದ ಸ್ಥಾಪನೆ, ಉದಯ ಮತ್ತು ವಿಸ್ತರಣೆಯ ಪಠ್ಯವನ್ನು ತೆಗೆದುಹಾಕಲಾಗಿದೆ. ಅದೇ ಸಮಯದಲ್ಲಿ, 12ನೇ ತರಗತಿ ಪುಸ್ತಕದಿಂದ ಮೊಘಲ್ ಸಾಮ್ರಾಜ್ಯದ ಆಡಳಿತ ಅಧ್ಯಾಯದಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...