Homeಮುಖಪುಟಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಈಗ ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರದ ಮುಂದೆ ಹೆಸರು ಬದಲಾವಣೆಯ ಒತ್ತಾಯವನ್ನು ಬಿಜೆಪಿ ಮಾಡಿದೆ.

- Advertisement -
- Advertisement -

ಮೊಘಲ್ ಸಾಮ್ರಾಟರ ಅವಧಿಯ ಹೆಸರುಗಳನ್ನು ಸೂಚಿಸುವ 40 ಗ್ರಾಮಗಳಿಗೆ ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿ ದೆಹಲಿ ಬಿಜೆಪಿಯು ಎಎಪಿ ನೇತೃತ್ವದ ದೆಹಲಿ ಸರ್ಕಾರವನ್ನು ಆಗ್ರಹಿಸಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಸಾವಿಗೀಡಾದ ಐಬಿ ಸಿಬ್ಬಂದಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೆಬಲ್ ರತನ್ ಲಾಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು ಮತ್ತು ಹುತಾತ್ಮರ ಹೆಸರನ್ನು ಆ ಗ್ರಾಮಗಳಿಗೆ ಇಡಬೇಕು ಎಂದು ಆಗ್ರಹಿಸಲಾಗಿದೆ.

ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ದೆಹಲಿ ಪೊಲೀಸ್ ಅಧಿಕಾರಿ ಮೋಹನ್ ಚಂದ್ ಶರ್ಮಾ, ಕಾರ್ಗಿಲ್ ಯುದ್ಧದ ಸಮಯದಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮಹರ್ಷಿ ವಾಲ್ಮೀಕಿ, ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಮೊಹಮ್ಮದ್ ರಫಿ, ಕ್ರಿಕೆಟಿಗ ಯಶಪಾಲ್ ಶರ್ಮಾ, ಅಥ್ಲೀಟ್ ಮಿಲ್ಕಾ ಸಿಂಗ್ ಅವರ ಹೆಸರುಗಳನ್ನು ಬಿಜೆಪಿ ಪ್ರಾಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನರು ಮೊಘಲರ ಕಾಲದ ಹೆಸರುಗಳನ್ನು ಬದಲಾಯಿಸಬೇಕೆಂದು ಬಯಸುತ್ತಿರುವ ಕಾರಣ ನಾವು ಹಳ್ಳಿಗಳಿಗೆ ಬೇರೆ ಹೆಸರು ಇಡಲು ಪ್ರಸ್ತಾವನೆಯನ್ನು ಕಳುಹಿಸುತ್ತಿದ್ದೇವೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಮೊಘಲ ಸಾಮ್ರಾಜ್ಯಕ್ಕೆ ಸಂಬಂಧಿಸಿದ” ಮತ್ತು “ಗುಲಾಮತನದ ಮನಸ್ಥಿತಿಯನ್ನು ಸಂಕೇತಿಸುವ” ಹೆಸರುಗಳನ್ನು ಹೊಂದಿರುವ 40 ಹಳ್ಳಿಗಳಿವೆ ಎಂದು ಅವರು ಆರೋಪಿಸಿದ್ದಾರೆ.

“ಜಿಯಾ ಸರೈ, ಜಮ್ರೂದ್‌ಪುರ, ಮಸೂದ್‌ಪುರ್, ಜಾಫರ್‌ಪುರ್ ಕಲಾನ್, ತಾಜ್‌ಪುರ, ನಜಾಫ್‌ಗಢ್, ನೆಬ್ ಸರೈ ಮುಂತಾದ ಹೆಸರುಗಳಿರುವ ಗ್ರಾಮಗಳಿವೆ” ಎಂದು ಗುಪ್ತಾ ಹೇಳಿದ್ದಾರೆ.

“ಇನ್ನು ಮುಂದೆ ಈ ಗುಲಾಮಗಿರಿಯ ಸಂಕೇತಗಳನ್ನು ಮುಂದುವರಿಸಲು ಈ ಹಳ್ಳಿಗಳ ಯುವಕರು ಬಯಸುವುದಿಲ್ಲ. ದೇಶದ ಮಹಾನ್ ಪುತ್ರರು, ಪ್ರಖ್ಯಾತ ವ್ಯಕ್ತಿಗಳ ಹೆಸರಿನಿಂದ ಗುರುತಿಸಲ್ಪಡಬೇಕು ಎಂದು ಈ ಗ್ರಾಮಗಳ ಯುವಕರು ಬಯಸುತ್ತಾರೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಒಂದು ದಿನ ಮೊದಲು ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾದವಪುರ ಎಂದು ಬದಲಾಯಿಸುವಂತೆ ಒತ್ತಾಯಿಸಿ ಬೋರ್ಡ್ ಕೂಡ ಹಾಕಲಾಗಿತ್ತು. ಗುಪ್ತಾ ಸೈಯದ್ ಉಲ್ ಅಜೈಬ್, ಹೌಜ್ ಖಾಸ್ ಮತ್ತು ನಜಾಫ್‌ಗಢ್ ಹೆಸರನ್ನು ಸಹ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದರು.

ಪಂಚಾಯಿತಿಗಳು ಮತ್ತು ಸ್ಥಳೀಯರೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯನ್ನು ಮುಂದಿಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ದಿಲ್ಲಿ ಸಿಎಂ ರಾಜಕೀಯ ಮಾಡುವುದಿಲ್ಲ. ನಮ್ಮ ಪ್ರಸ್ತಾಪವನ್ನು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಭಗತ್ ಸಿಂಗ್ ಟೋಕಾಸ್ ಅವರು ಮೊಹಮ್ಮದ್‌ಪುರ ಗ್ರಾಮವನ್ನು ಮಾಧವಪುರ ಎಂದು ಘೋಷಿಸುವ ಫಲಕಗಳನ್ನು ಹಾಕಿದ್ದರು. ಈ ಪ್ರದೇಶವನ್ನು ಮರುನಾಮಕರಣ ಮಾಡಲು ಕೆಲವು ಸ್ಥಳೀಯರೊಂದಿಗೆ ಗುಪ್ತಾ ಕಾರ್ಯಕ್ರಮದಲ್ಲಿ ಹಾಜರಿದ್ದರು. ಹೆಸರುಗಳನ್ನು ಬದಲಾಯಿಸುವ ಅಂತಿಮ ಅಧಿಕಾರವು ದೆಹಲಿ ಸರ್ಕಾರಕ್ಕಿದೆ.

ಅಭಿವೃದ್ಧಿ ರಾಜಕೀಯವನ್ನು ಬದಿಗೆಸೆದಿರುವ ಬಿಜೆಪಿ ಕೋಮು ಕೇಂದ್ರಿತ ಹೆಸರು ಬದಲಾವಣೆಯ ರಾಜಕೀಯವನ್ನು ಮುಂದುವರಿಸಿದೆ ಎಂಬ ಆರೋಪಗಳು ಸಾಮಾನ್ಯವಾಗಿವೆ.

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್ ಇತಿಹಾಸಕ್ಕೆ ಕತ್ತರಿ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ (ಸಿಬಿಎಸ್‌ಇ) ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕಡಿವಾಣ ಹಾಕುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿತ್ತು.

ಮೊಘಲ್‌ ಸಾಮ್ರಾಜ್ಯವನ್ನು ವೈಭವೀಕರಿಸುವ ಮತ್ತು ಇಸ್ಲಾಂ ಧರ್ಮದ ವಿಸ್ತರಣೆಯ ಕುರಿತು ಪಾಕಿಸ್ತಾನಿ ಕವಿಯ ನಜ್ಮ್‌ ಅವರ ಪಠ್ಯವನ್ನು ಹೈಯರ್‌ ಸೆಕೆಂಡರಿ ಪಠ್ಯಕ್ರಮದಿಂದ ಸಿಬಿಎಸ್‌ಇ ತೆಗೆದಿದೆ.

ಹೊಸ ಶೈಕ್ಷಣಿಕ ಅವಧಿಗೆ ಪ್ರಕಟಿಸಿದ ಪಠ್ಯಕ್ರಮದಲ್ಲಿ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಎನ್‌ಸಿಇಆರ್‌ಟಿ ಪುಸ್ತಕದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳಿಂದ ಫೈಜ್ ಅಹಮದ್ ಫೈಜ್ ಅವರ ಶಾಯರಿ ಮತ್ತು 11ನೇ ತರಗತಿಯ ಇತಿಹಾಸ ಪುಸ್ತಕದಿಂದ ಇಸ್ಲಾಂ ಧರ್ಮದ ಸ್ಥಾಪನೆ, ಉದಯ ಮತ್ತು ವಿಸ್ತರಣೆಯ ಪಠ್ಯವನ್ನು ತೆಗೆದುಹಾಕಲಾಗಿದೆ. ಅದೇ ಸಮಯದಲ್ಲಿ, 12ನೇ ತರಗತಿ ಪುಸ್ತಕದಿಂದ ಮೊಘಲ್ ಸಾಮ್ರಾಜ್ಯದ ಆಡಳಿತ ಅಧ್ಯಾಯದಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....