Homeಮುಖಪುಟಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಈಗ ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರದ ಮುಂದೆ ಹೆಸರು ಬದಲಾವಣೆಯ ಒತ್ತಾಯವನ್ನು ಬಿಜೆಪಿ ಮಾಡಿದೆ.

- Advertisement -
- Advertisement -

ಮೊಘಲ್ ಸಾಮ್ರಾಟರ ಅವಧಿಯ ಹೆಸರುಗಳನ್ನು ಸೂಚಿಸುವ 40 ಗ್ರಾಮಗಳಿಗೆ ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿ ದೆಹಲಿ ಬಿಜೆಪಿಯು ಎಎಪಿ ನೇತೃತ್ವದ ದೆಹಲಿ ಸರ್ಕಾರವನ್ನು ಆಗ್ರಹಿಸಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಸಾವಿಗೀಡಾದ ಐಬಿ ಸಿಬ್ಬಂದಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೆಬಲ್ ರತನ್ ಲಾಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು ಮತ್ತು ಹುತಾತ್ಮರ ಹೆಸರನ್ನು ಆ ಗ್ರಾಮಗಳಿಗೆ ಇಡಬೇಕು ಎಂದು ಆಗ್ರಹಿಸಲಾಗಿದೆ.

ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ದೆಹಲಿ ಪೊಲೀಸ್ ಅಧಿಕಾರಿ ಮೋಹನ್ ಚಂದ್ ಶರ್ಮಾ, ಕಾರ್ಗಿಲ್ ಯುದ್ಧದ ಸಮಯದಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮಹರ್ಷಿ ವಾಲ್ಮೀಕಿ, ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಮೊಹಮ್ಮದ್ ರಫಿ, ಕ್ರಿಕೆಟಿಗ ಯಶಪಾಲ್ ಶರ್ಮಾ, ಅಥ್ಲೀಟ್ ಮಿಲ್ಕಾ ಸಿಂಗ್ ಅವರ ಹೆಸರುಗಳನ್ನು ಬಿಜೆಪಿ ಪ್ರಾಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನರು ಮೊಘಲರ ಕಾಲದ ಹೆಸರುಗಳನ್ನು ಬದಲಾಯಿಸಬೇಕೆಂದು ಬಯಸುತ್ತಿರುವ ಕಾರಣ ನಾವು ಹಳ್ಳಿಗಳಿಗೆ ಬೇರೆ ಹೆಸರು ಇಡಲು ಪ್ರಸ್ತಾವನೆಯನ್ನು ಕಳುಹಿಸುತ್ತಿದ್ದೇವೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಮೊಘಲ ಸಾಮ್ರಾಜ್ಯಕ್ಕೆ ಸಂಬಂಧಿಸಿದ” ಮತ್ತು “ಗುಲಾಮತನದ ಮನಸ್ಥಿತಿಯನ್ನು ಸಂಕೇತಿಸುವ” ಹೆಸರುಗಳನ್ನು ಹೊಂದಿರುವ 40 ಹಳ್ಳಿಗಳಿವೆ ಎಂದು ಅವರು ಆರೋಪಿಸಿದ್ದಾರೆ.

“ಜಿಯಾ ಸರೈ, ಜಮ್ರೂದ್‌ಪುರ, ಮಸೂದ್‌ಪುರ್, ಜಾಫರ್‌ಪುರ್ ಕಲಾನ್, ತಾಜ್‌ಪುರ, ನಜಾಫ್‌ಗಢ್, ನೆಬ್ ಸರೈ ಮುಂತಾದ ಹೆಸರುಗಳಿರುವ ಗ್ರಾಮಗಳಿವೆ” ಎಂದು ಗುಪ್ತಾ ಹೇಳಿದ್ದಾರೆ.

“ಇನ್ನು ಮುಂದೆ ಈ ಗುಲಾಮಗಿರಿಯ ಸಂಕೇತಗಳನ್ನು ಮುಂದುವರಿಸಲು ಈ ಹಳ್ಳಿಗಳ ಯುವಕರು ಬಯಸುವುದಿಲ್ಲ. ದೇಶದ ಮಹಾನ್ ಪುತ್ರರು, ಪ್ರಖ್ಯಾತ ವ್ಯಕ್ತಿಗಳ ಹೆಸರಿನಿಂದ ಗುರುತಿಸಲ್ಪಡಬೇಕು ಎಂದು ಈ ಗ್ರಾಮಗಳ ಯುವಕರು ಬಯಸುತ್ತಾರೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಒಂದು ದಿನ ಮೊದಲು ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾದವಪುರ ಎಂದು ಬದಲಾಯಿಸುವಂತೆ ಒತ್ತಾಯಿಸಿ ಬೋರ್ಡ್ ಕೂಡ ಹಾಕಲಾಗಿತ್ತು. ಗುಪ್ತಾ ಸೈಯದ್ ಉಲ್ ಅಜೈಬ್, ಹೌಜ್ ಖಾಸ್ ಮತ್ತು ನಜಾಫ್‌ಗಢ್ ಹೆಸರನ್ನು ಸಹ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದರು.

ಪಂಚಾಯಿತಿಗಳು ಮತ್ತು ಸ್ಥಳೀಯರೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯನ್ನು ಮುಂದಿಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ದಿಲ್ಲಿ ಸಿಎಂ ರಾಜಕೀಯ ಮಾಡುವುದಿಲ್ಲ. ನಮ್ಮ ಪ್ರಸ್ತಾಪವನ್ನು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಭಗತ್ ಸಿಂಗ್ ಟೋಕಾಸ್ ಅವರು ಮೊಹಮ್ಮದ್‌ಪುರ ಗ್ರಾಮವನ್ನು ಮಾಧವಪುರ ಎಂದು ಘೋಷಿಸುವ ಫಲಕಗಳನ್ನು ಹಾಕಿದ್ದರು. ಈ ಪ್ರದೇಶವನ್ನು ಮರುನಾಮಕರಣ ಮಾಡಲು ಕೆಲವು ಸ್ಥಳೀಯರೊಂದಿಗೆ ಗುಪ್ತಾ ಕಾರ್ಯಕ್ರಮದಲ್ಲಿ ಹಾಜರಿದ್ದರು. ಹೆಸರುಗಳನ್ನು ಬದಲಾಯಿಸುವ ಅಂತಿಮ ಅಧಿಕಾರವು ದೆಹಲಿ ಸರ್ಕಾರಕ್ಕಿದೆ.

ಅಭಿವೃದ್ಧಿ ರಾಜಕೀಯವನ್ನು ಬದಿಗೆಸೆದಿರುವ ಬಿಜೆಪಿ ಕೋಮು ಕೇಂದ್ರಿತ ಹೆಸರು ಬದಲಾವಣೆಯ ರಾಜಕೀಯವನ್ನು ಮುಂದುವರಿಸಿದೆ ಎಂಬ ಆರೋಪಗಳು ಸಾಮಾನ್ಯವಾಗಿವೆ.

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್ ಇತಿಹಾಸಕ್ಕೆ ಕತ್ತರಿ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ (ಸಿಬಿಎಸ್‌ಇ) ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕಡಿವಾಣ ಹಾಕುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿತ್ತು.

ಮೊಘಲ್‌ ಸಾಮ್ರಾಜ್ಯವನ್ನು ವೈಭವೀಕರಿಸುವ ಮತ್ತು ಇಸ್ಲಾಂ ಧರ್ಮದ ವಿಸ್ತರಣೆಯ ಕುರಿತು ಪಾಕಿಸ್ತಾನಿ ಕವಿಯ ನಜ್ಮ್‌ ಅವರ ಪಠ್ಯವನ್ನು ಹೈಯರ್‌ ಸೆಕೆಂಡರಿ ಪಠ್ಯಕ್ರಮದಿಂದ ಸಿಬಿಎಸ್‌ಇ ತೆಗೆದಿದೆ.

ಹೊಸ ಶೈಕ್ಷಣಿಕ ಅವಧಿಗೆ ಪ್ರಕಟಿಸಿದ ಪಠ್ಯಕ್ರಮದಲ್ಲಿ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಎನ್‌ಸಿಇಆರ್‌ಟಿ ಪುಸ್ತಕದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳಿಂದ ಫೈಜ್ ಅಹಮದ್ ಫೈಜ್ ಅವರ ಶಾಯರಿ ಮತ್ತು 11ನೇ ತರಗತಿಯ ಇತಿಹಾಸ ಪುಸ್ತಕದಿಂದ ಇಸ್ಲಾಂ ಧರ್ಮದ ಸ್ಥಾಪನೆ, ಉದಯ ಮತ್ತು ವಿಸ್ತರಣೆಯ ಪಠ್ಯವನ್ನು ತೆಗೆದುಹಾಕಲಾಗಿದೆ. ಅದೇ ಸಮಯದಲ್ಲಿ, 12ನೇ ತರಗತಿ ಪುಸ್ತಕದಿಂದ ಮೊಘಲ್ ಸಾಮ್ರಾಜ್ಯದ ಆಡಳಿತ ಅಧ್ಯಾಯದಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...