Homeಮುಖಪುಟಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಈಗ ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರದ ಮುಂದೆ ಹೆಸರು ಬದಲಾವಣೆಯ ಒತ್ತಾಯವನ್ನು ಬಿಜೆಪಿ ಮಾಡಿದೆ.

- Advertisement -
- Advertisement -

ಮೊಘಲ್ ಸಾಮ್ರಾಟರ ಅವಧಿಯ ಹೆಸರುಗಳನ್ನು ಸೂಚಿಸುವ 40 ಗ್ರಾಮಗಳಿಗೆ ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿ ದೆಹಲಿ ಬಿಜೆಪಿಯು ಎಎಪಿ ನೇತೃತ್ವದ ದೆಹಲಿ ಸರ್ಕಾರವನ್ನು ಆಗ್ರಹಿಸಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಸಾವಿಗೀಡಾದ ಐಬಿ ಸಿಬ್ಬಂದಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೆಬಲ್ ರತನ್ ಲಾಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು ಮತ್ತು ಹುತಾತ್ಮರ ಹೆಸರನ್ನು ಆ ಗ್ರಾಮಗಳಿಗೆ ಇಡಬೇಕು ಎಂದು ಆಗ್ರಹಿಸಲಾಗಿದೆ.

ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ದೆಹಲಿ ಪೊಲೀಸ್ ಅಧಿಕಾರಿ ಮೋಹನ್ ಚಂದ್ ಶರ್ಮಾ, ಕಾರ್ಗಿಲ್ ಯುದ್ಧದ ಸಮಯದಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮಹರ್ಷಿ ವಾಲ್ಮೀಕಿ, ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಮೊಹಮ್ಮದ್ ರಫಿ, ಕ್ರಿಕೆಟಿಗ ಯಶಪಾಲ್ ಶರ್ಮಾ, ಅಥ್ಲೀಟ್ ಮಿಲ್ಕಾ ಸಿಂಗ್ ಅವರ ಹೆಸರುಗಳನ್ನು ಬಿಜೆಪಿ ಪ್ರಾಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನರು ಮೊಘಲರ ಕಾಲದ ಹೆಸರುಗಳನ್ನು ಬದಲಾಯಿಸಬೇಕೆಂದು ಬಯಸುತ್ತಿರುವ ಕಾರಣ ನಾವು ಹಳ್ಳಿಗಳಿಗೆ ಬೇರೆ ಹೆಸರು ಇಡಲು ಪ್ರಸ್ತಾವನೆಯನ್ನು ಕಳುಹಿಸುತ್ತಿದ್ದೇವೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಮೊಘಲ ಸಾಮ್ರಾಜ್ಯಕ್ಕೆ ಸಂಬಂಧಿಸಿದ” ಮತ್ತು “ಗುಲಾಮತನದ ಮನಸ್ಥಿತಿಯನ್ನು ಸಂಕೇತಿಸುವ” ಹೆಸರುಗಳನ್ನು ಹೊಂದಿರುವ 40 ಹಳ್ಳಿಗಳಿವೆ ಎಂದು ಅವರು ಆರೋಪಿಸಿದ್ದಾರೆ.

“ಜಿಯಾ ಸರೈ, ಜಮ್ರೂದ್‌ಪುರ, ಮಸೂದ್‌ಪುರ್, ಜಾಫರ್‌ಪುರ್ ಕಲಾನ್, ತಾಜ್‌ಪುರ, ನಜಾಫ್‌ಗಢ್, ನೆಬ್ ಸರೈ ಮುಂತಾದ ಹೆಸರುಗಳಿರುವ ಗ್ರಾಮಗಳಿವೆ” ಎಂದು ಗುಪ್ತಾ ಹೇಳಿದ್ದಾರೆ.

“ಇನ್ನು ಮುಂದೆ ಈ ಗುಲಾಮಗಿರಿಯ ಸಂಕೇತಗಳನ್ನು ಮುಂದುವರಿಸಲು ಈ ಹಳ್ಳಿಗಳ ಯುವಕರು ಬಯಸುವುದಿಲ್ಲ. ದೇಶದ ಮಹಾನ್ ಪುತ್ರರು, ಪ್ರಖ್ಯಾತ ವ್ಯಕ್ತಿಗಳ ಹೆಸರಿನಿಂದ ಗುರುತಿಸಲ್ಪಡಬೇಕು ಎಂದು ಈ ಗ್ರಾಮಗಳ ಯುವಕರು ಬಯಸುತ್ತಾರೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಒಂದು ದಿನ ಮೊದಲು ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾದವಪುರ ಎಂದು ಬದಲಾಯಿಸುವಂತೆ ಒತ್ತಾಯಿಸಿ ಬೋರ್ಡ್ ಕೂಡ ಹಾಕಲಾಗಿತ್ತು. ಗುಪ್ತಾ ಸೈಯದ್ ಉಲ್ ಅಜೈಬ್, ಹೌಜ್ ಖಾಸ್ ಮತ್ತು ನಜಾಫ್‌ಗಢ್ ಹೆಸರನ್ನು ಸಹ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದರು.

ಪಂಚಾಯಿತಿಗಳು ಮತ್ತು ಸ್ಥಳೀಯರೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯನ್ನು ಮುಂದಿಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ದಿಲ್ಲಿ ಸಿಎಂ ರಾಜಕೀಯ ಮಾಡುವುದಿಲ್ಲ. ನಮ್ಮ ಪ್ರಸ್ತಾಪವನ್ನು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಭಗತ್ ಸಿಂಗ್ ಟೋಕಾಸ್ ಅವರು ಮೊಹಮ್ಮದ್‌ಪುರ ಗ್ರಾಮವನ್ನು ಮಾಧವಪುರ ಎಂದು ಘೋಷಿಸುವ ಫಲಕಗಳನ್ನು ಹಾಕಿದ್ದರು. ಈ ಪ್ರದೇಶವನ್ನು ಮರುನಾಮಕರಣ ಮಾಡಲು ಕೆಲವು ಸ್ಥಳೀಯರೊಂದಿಗೆ ಗುಪ್ತಾ ಕಾರ್ಯಕ್ರಮದಲ್ಲಿ ಹಾಜರಿದ್ದರು. ಹೆಸರುಗಳನ್ನು ಬದಲಾಯಿಸುವ ಅಂತಿಮ ಅಧಿಕಾರವು ದೆಹಲಿ ಸರ್ಕಾರಕ್ಕಿದೆ.

ಅಭಿವೃದ್ಧಿ ರಾಜಕೀಯವನ್ನು ಬದಿಗೆಸೆದಿರುವ ಬಿಜೆಪಿ ಕೋಮು ಕೇಂದ್ರಿತ ಹೆಸರು ಬದಲಾವಣೆಯ ರಾಜಕೀಯವನ್ನು ಮುಂದುವರಿಸಿದೆ ಎಂಬ ಆರೋಪಗಳು ಸಾಮಾನ್ಯವಾಗಿವೆ.

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್ ಇತಿಹಾಸಕ್ಕೆ ಕತ್ತರಿ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ (ಸಿಬಿಎಸ್‌ಇ) ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕಡಿವಾಣ ಹಾಕುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿತ್ತು.

ಮೊಘಲ್‌ ಸಾಮ್ರಾಜ್ಯವನ್ನು ವೈಭವೀಕರಿಸುವ ಮತ್ತು ಇಸ್ಲಾಂ ಧರ್ಮದ ವಿಸ್ತರಣೆಯ ಕುರಿತು ಪಾಕಿಸ್ತಾನಿ ಕವಿಯ ನಜ್ಮ್‌ ಅವರ ಪಠ್ಯವನ್ನು ಹೈಯರ್‌ ಸೆಕೆಂಡರಿ ಪಠ್ಯಕ್ರಮದಿಂದ ಸಿಬಿಎಸ್‌ಇ ತೆಗೆದಿದೆ.

ಹೊಸ ಶೈಕ್ಷಣಿಕ ಅವಧಿಗೆ ಪ್ರಕಟಿಸಿದ ಪಠ್ಯಕ್ರಮದಲ್ಲಿ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಎನ್‌ಸಿಇಆರ್‌ಟಿ ಪುಸ್ತಕದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳಿಂದ ಫೈಜ್ ಅಹಮದ್ ಫೈಜ್ ಅವರ ಶಾಯರಿ ಮತ್ತು 11ನೇ ತರಗತಿಯ ಇತಿಹಾಸ ಪುಸ್ತಕದಿಂದ ಇಸ್ಲಾಂ ಧರ್ಮದ ಸ್ಥಾಪನೆ, ಉದಯ ಮತ್ತು ವಿಸ್ತರಣೆಯ ಪಠ್ಯವನ್ನು ತೆಗೆದುಹಾಕಲಾಗಿದೆ. ಅದೇ ಸಮಯದಲ್ಲಿ, 12ನೇ ತರಗತಿ ಪುಸ್ತಕದಿಂದ ಮೊಘಲ್ ಸಾಮ್ರಾಜ್ಯದ ಆಡಳಿತ ಅಧ್ಯಾಯದಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...