Homeಕರ್ನಾಟಕಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರನ್ನು ನಿರಾಕರಿಸಿ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟ ಬಿಜೆಪಿಗರು!

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರನ್ನು ನಿರಾಕರಿಸಿ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟ ಬಿಜೆಪಿಗರು!

ಯಲಹಂಕ ಮೇಲ್ಸೇತುವೆಗೆ ಶತಾಯಗತಾಯ ಸಾವರ್ಕರ್ ಹೆಸರನ್ನು ಇಡಲೇಬೇಕು ಎಂಬುದು ರಾಜ್ಯ ಸರ್ಕಾರದ ಪಾಲಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ಕನ್ನಡಪರ ಹೋರಾಟಗಾರರು ಇದನ್ನು ಒಪ್ಪುವ ಮನಸ್ಥಿತಿಯಲ್ಲಿ ಇಲ್ಲ.

- Advertisement -
- Advertisement -

ಕಿತ್ತೂರು ರಾಣಿ ಚೆನ್ನಮ್ಮ ಭಾರತದ ಸ್ವಾತಂತ್ಯ್ರ ಹೋರಾಟದ ಇತಿಹಾಸದಲ್ಲಿ ಅಗ್ರಗಣ್ಯ ಹೆಸರು. ವಿಪರ್ಯಾಸವೆಂದರೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರಿನ ರಾಣಿ ಚೆನ್ನಮ್ಮ ಹೆಸರಿಡಲು ಕೇಂದ್ರ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಿದ್ದರೆ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸೆರಿಟ್ಟು ವಿಜೃಂಭಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದ ವಾಣಿಜ್ಯ ನಗರಗಳ ಪೈಕಿ ಬೆಳಗಾವಿಯೂ ಒಂದು. ಹೀಗಾಗಿ ಬೆಳಗಾವಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಅಲ್ಲದೆ 2018ರಲ್ಲಿ ಕಾಂಗ್ರೆಸ್—ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೇಲ್ದರ್ಜೆಗೇರಿದ್ದ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಯೂ ಮಾಡಲಾಗಿತ್ತು. ಈ ಸಮಾರಂಭದಲ್ಲಿ ಮಾತನಾಡಿದ್ದ ಅಂದಿನ ವಿಮಾನಯಾನ ಸಚಿವ ಅಶೋಕ ಗಜಪತಿರಾಜು, “ಚೆನ್ನಮ್ಮನ ಹೆಸರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ, ಶೀಘ್ರವೇ ಅನುಮೋದನೆ ನೀಡಲಾಗುವುದುʼ ಎಂದು ಆಶ್ವಾಸನೆ ನೀಡಿದ್ದರು.

ಅದರಂತೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಡಿಸೆಂಬರ್ 22, 2018ರಂದು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು.

ನಂತರ ಸಮ್ಮಿಶ್ರ ಸರ್ಕಾರ ಉರುಳಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಿಎಂ ಬಿಎಸ್ ಯಡಿಯೂರಪ್ಪನವರೂ “ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರಿನ ರಾಣಿ ಚೆನ್ನಮ್ಮ ಅವರ ಹೆಸರಿಡಿ”ಎಂದು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಆದರೆ, 2018ರಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರಿಡಲು ನಮ್ಮದೇನೂ ತಕರಾರಿಲ್ಲ ಎಂದಿದ್ದ ಕೇಂದ್ರ ಸರ್ಕಾರ ಇಂದು ಚೆನ್ನಮ್ಮ ಹೆಸರನ್ನು ಸಾರಾಸಗಟಾಗಿ ತಿರಸ್ಕರಿಸಿದೆ.

ಕೇಂದ್ರ ಸರ್ಕಾರವು ಕನ್ನಡ ನಾಡಿನ ವಿಮಾನ ನಿಲ್ದಾಣಕ್ಕೆ ನಮ್ಮದೇ ಸ್ವಾತಂತ್ಯ್ರ ಹೋರಾಟಗಾರರ ಹೆಸರಿಡಲು ಹಿಂದೂ-ಮುಂದೂ ನೋಡುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ಬಿಬಿಎಂಪಿಯಲ್ಲಿ ಪ್ರಸ್ತಾಪವೇ ಆಗದೆ ಹೆಸರನ್ನು ಕೊನೆಗೂ ಅಂತಿಮಗೊಳಿಸಲಾಗಿದೆ.

ಯಲಹಂಕ ಮೇಲ್ಸೇತುವೆ ವಿವಾದ

ಯಲಹಂಕದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಡೈರಿ ವೃತ್ತದಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆಗೆ ಸಾವರ್ಕರ್ ಹೆಸರನ್ನು ನಾಮಕರಣ ಮಾಡಲು ಸರ್ಕಾರ ಮುಂದಾಗಿತ್ತು. ಈ ಸಂಬಂಧ ಕಳೆದ ಮೇ.28 ರಂದು ಸಮಾರಂಭವನ್ನೂ ಆಯೋಜಿಸಿತ್ತು.
ಆದರೆ, ಸರ್ಕಾರದ ನಿರ್ಣಯವನ್ನು ತೀವ್ರವಾಗಿ ಟೀಕಿಸಿದ್ದ ವಿರೋಧ ಪಕ್ಷಗಳು ಭಾರತದ ಸ್ವಾತಂತ್ಯ್ರ ಹೋರಾಟಕ್ಕೆ ಸಾವರ್ಕರ್ ಕೊಡುಗೆ ಏನು? ಆತ ಸ್ವಾತಂತ್ಯ್ರಕ್ಕಾಗಿ ಹೋರಾಡಿಲ್ಲ. ಬದಲಾಗಿ ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದು ಕರಿನೀರಿನ ಶಿಕ್ಷೆಯಿಂದ ಪಾರಾಗಿದ್ದವರು. ಅಂತವರ ಹೆಸರನ್ನು ಕರ್ನಾಟಕದಲ್ಲಿಡುವ ಅಗತ್ಯ ಇಲ್ಲ. ಅಲ್ಲದೆ, ಕನಾಟಕದಲ್ಲಿ ಕನ್ನಡಿಗರ ಹೆಸರನ್ನೇ ಇಡಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷಗಳು ತೀವ್ರವಾಗಿ ಪ್ರತಿಭಟಿಸಿದ್ದವು. ಇದು ರಾಜ್ಯಾದ್ಯಂತ ಚರ್ಚಾಸ್ಪದ ವಿಚಾರವಾಗಿ ಮಾರ್ಪಾಟಾಗಿತ್ತು. ಪರಿಣಾಮ ಆಡಳಿತರೂಢ ಬಿಜೆಪಿ ಸರ್ಕಾರ ಈ ಸಮಾರಂಭವನ್ನೇ ರದ್ದು ಮಾಡಿತ್ತು.

ಆದರೆ, ಕೊನೆಗೂ ಮಂಗಳವಾರ ಬಿಬಿಎಂಪಿ ಪಾಲಿಕೆ ಸಭೆ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳುವ ಮೂಲಕ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ತೀರ್ಮಾನಿಸಿದೆ ಎನ್ನಲಾಗುತ್ತಿದೆ. ಅಲ್ಲದೆ, ಪಾಲಿಕೆ ಈ ನಿರ್ಣಯವನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, ಸರ್ಕಾರವು ಪಾಲಿಕೆಯ ಪ್ರಸ್ತಾವನೆಯನ್ನು ಪರಿಶೀಲಿಸಿ ಅಂತಿಮ ಆದೇಶ ಹೊರಡಿಸಲಿದೆ ಎಂದೂ ಹೇಳಲಾಗುತ್ತಿದೆ.

ಪಾಲಿಕೆ ವ್ಯಾಪಿಯ ಯಾವುದೇ ಸರ್ಕಾರಿ ಕಾಮಗಾರಿಗಳಿಗೆ ಹೆಸೆರಿಡುವ ಮುನ್ನ ಬಿಬಿಎಂಪಿಯಲ್ಲಿ ಸಭೆ ನಡೆಸಬೇಕು. ಆದರೆ, ಪಾಲಿಕೆಯಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳದೆ ಸಾವರ್ಕರ್ ಹೆಸರಿಡಲು ಒಪ್ಪಿಗೆ ನೀಡಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ. ಆದರೆ, ಇದು ನಿಜವೇ ಎಂದಾದಲ್ಲಿ ಇದೊಂದು ಕಾನೂನು ಬಾಹಿರವಾದ ನಿರ್ಣಯ ಮತ್ತು ರಾಜ್ಯ ಬಿಜೆಪಿ ಸರ್ಕಾರ ಕಾನೂನು ಬಾಹಿರವಾಗಿಯೇ ಸಾವರ್ಕರ್ ಹೆಸರಿಡಲು ಮುಂದಾಗುತ್ತಿದೆಯೇ ಎಂಬ ಪ್ರಶ್ನೆ ಎದ್ದಿದೆ.

ಈ ಕುರಿತು ನಾನುಗೌರಿ.ಕಾಂ ಬಿಬಿಎಂಪಿಯ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಮತ್ತು ಸಾವರ್ಕರ್ ಹೆಸರಿಡಲು ವಿರೋಧ ವ್ಯಕ್ತಿಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಿದ್ದ ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷ ಬಿ.ಹರೀಶ್ ಕುಮಾರ್ ಹಾಗೂ ಬೆಂಗಳೂರು ಮೇಯರ್ ಕೆ. ಗೌತಮ್ ಕುಮಾರ್ ಅವರನ್ನು ಮಾತಾಡಿಸಿತು.

ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಬಿ. ಹರೀಶ್ ಕುಮಾರ್, “ರಾಜ್ಯ ಸರ್ಕಾರ ಕನ್ನಡದ್ರೋಹಿ ಕೆಲಸಕ್ಕೆ ಮುಂದಾಗಿದೆ. ಟಿಪ್ಪು ಸುಲ್ತಾನ್ ವಿವಾದಾತ್ಮಕ ವ್ಯಕ್ತಿ ಎಂಬ ಏಕೈಕ ಕಾರಣಕ್ಕೆ ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯನ್ನೇ ರದ್ದು ಮಾಡಿತ್ತು. ಹಾಗೆ ನೋಡಿದರೆ ಸಾವರ್ಕರ್ ಸಹ ವಿವಾದಾತ್ಮಕ ವ್ಯಕ್ತಿ. ಆದರೆ, ಅವರ ಹೆಸರನ್ನು ಮಾತ್ರ ಏಕೆ ಯಲಹಂಕ ಮೇಲ್ಸೇತುವೆಗೆ ನಾಮಕರಣ ಮಾಡಲಾಗುತ್ತಿದೆ?

ಕಳೆದ ತಿಂಗಳು ನಾವು ಈ ಕುರಿತು ರಸ್ತೆಗಿಳಿದು ಪ್ರತಿಭಟಿಸಿದ್ದೆವು. ಈ ವೇಳೆ ಕನ್ನಡ ಹೋರಾಟಗಾರರ ಕಣ್ಣೊರೆಸುವ ಸಲುವಾಗಿ ಕಾರ್ಯಕ್ರಮವನ್ನು ರದ್ದು ಮಾಡಿದ್ದ ರಾಜ್ಯ ಸರ್ಕಾರ ಇದೀಗ ಸದ್ದಿಲ್ಲದೆ ಮತ್ತೆ ಸಾವರ್ಕರ್ ಹೆಸರನ್ನು ನಾಮಕರಣ ಮಾಡಲು ಮುಂದಾಗಿದೆ. ರಾಜ್ಯ ಸರ್ಕಾರದ ಇಂತಹ ನಿರ್ಧಾರವನ್ನು ಕನ್ನಡಿಗರು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಕನ್ನಡಿಗರ ಹೆಸರನ್ನೇ ನಾಮಕರಣ ಮಾಡಬೇಕು. ಹೀಗಾಗಿ ನಾವು ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಹೈಕೊರ್ಟ್ ಮೊರೆ ಹೋಗುತ್ತೇವೆ” ಎಂದು ತಿಳಿಸಿದ್ಧಾರೆ.

ಇನ್ನೂ ಇದೇ ವಿಚಾರವಾಗಿ ಸ್ಪಷ್ಟನೆ ನೀಡಿರುವ ಬೆಂಗಳೂರು ಮೇಯರ್ ಕೆ. ಗೌತಮ್ ಕುಮಾರ್, “ಮೇ.28 ರಂದು ಸರ್ಕಾರ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಮಾಡಿತ್ತೇ ಹೊರತು, ಸಾವರ್ಕರ್ ಹೆಸರಿಡುವ ಪ್ರಕ್ರಿಯೆಗಳು ಜಾರಿಯಲ್ಲೇ ಇತ್ತು. ನಾವು ಪಾಲಿಕೆಯ ವತಿಯಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದ್ದೆವು. ಆದರೆ, ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕೇವಲ ಒಂದೇ ಒಂದು ಆಕ್ಷೇಪಣೆ ಮಾತ್ರ ಬಂದಿತ್ತು.

ಹೀಗಾಗಿ ಮಂಗಳವಾರ ಪಾಲಿಕೆ ಸದಸ್ಯರ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಎಲ್ಲರೂ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದಾರೆ. ಪರಿಣಾಮ ಪಾಲಿಕೆಯಿಂದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಮುಂದಿನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ನಿರ್ವಹಿಸಲಿದೆ” ಎಂದಿದ್ದಾರೆ.

ಆದರೆ, ಪಾಲಿಕೆಯಲ್ಲಿ ಎಲ್ಲಾ ಸದಸ್ಯರು ಸಾವರ್ಕರ್ ಹೆಸರಿಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದು ನಿಜವೇ? ಎಂದು ತಿಳಿದುಕೊಳ್ಳುವ ಸಲುವಾಗಿ ನಾನುಗೌರಿ.ಕಾಮ್ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜೀದ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿತು. ಆದರೆ, ಅವರು ನಮ್ಮ ಕರೆಯನ್ನು ಸ್ವೀಕರಿಸಲಿಲ್ಲ. (ಇವರ ಸಂಪರ್ಕ ಸಾಧ್ಯವಾದ ನಂತರ ಮತ್ತಷ್ಟು ಅಪ್ಡೇಟ್‌ ಮಾಡಲಾಗುವುದು)

ಒಟ್ಟಾರೆ ಯಲಹಂಕ ಮೇಲ್ಸೇತುವೆಗೆ ಶತಾಯಗತಾಯ ಸಾವರ್ಕರ್ ಹೆಸರನ್ನು ಇಡಲೇಬೇಕು ಎಂಬುದು ರಾಜ್ಯ ಸರ್ಕಾರದ ಪಾಲಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳು ಜಾಣಮೌನ ಸಾಧಿಸಿದರೂ ಸಹ ಕನ್ನಡಪರ ಹೋರಾಟಗಾರರು ಇದನ್ನು ಒಪ್ಪುವ ಮನಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಈ ವಿವಾದ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆಯಲಿದೆ ಎಂಬುದನ್ನು ಕಾದುನೋಡಬೇಕಿದೆ.


ಇದನ್ನು ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...