Homeಕರ್ನಾಟಕಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರನ್ನು ನಿರಾಕರಿಸಿ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟ ಬಿಜೆಪಿಗರು!

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರನ್ನು ನಿರಾಕರಿಸಿ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟ ಬಿಜೆಪಿಗರು!

ಯಲಹಂಕ ಮೇಲ್ಸೇತುವೆಗೆ ಶತಾಯಗತಾಯ ಸಾವರ್ಕರ್ ಹೆಸರನ್ನು ಇಡಲೇಬೇಕು ಎಂಬುದು ರಾಜ್ಯ ಸರ್ಕಾರದ ಪಾಲಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ಕನ್ನಡಪರ ಹೋರಾಟಗಾರರು ಇದನ್ನು ಒಪ್ಪುವ ಮನಸ್ಥಿತಿಯಲ್ಲಿ ಇಲ್ಲ.

- Advertisement -
- Advertisement -

ಕಿತ್ತೂರು ರಾಣಿ ಚೆನ್ನಮ್ಮ ಭಾರತದ ಸ್ವಾತಂತ್ಯ್ರ ಹೋರಾಟದ ಇತಿಹಾಸದಲ್ಲಿ ಅಗ್ರಗಣ್ಯ ಹೆಸರು. ವಿಪರ್ಯಾಸವೆಂದರೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರಿನ ರಾಣಿ ಚೆನ್ನಮ್ಮ ಹೆಸರಿಡಲು ಕೇಂದ್ರ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಿದ್ದರೆ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸೆರಿಟ್ಟು ವಿಜೃಂಭಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದ ವಾಣಿಜ್ಯ ನಗರಗಳ ಪೈಕಿ ಬೆಳಗಾವಿಯೂ ಒಂದು. ಹೀಗಾಗಿ ಬೆಳಗಾವಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಅಲ್ಲದೆ 2018ರಲ್ಲಿ ಕಾಂಗ್ರೆಸ್—ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೇಲ್ದರ್ಜೆಗೇರಿದ್ದ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಯೂ ಮಾಡಲಾಗಿತ್ತು. ಈ ಸಮಾರಂಭದಲ್ಲಿ ಮಾತನಾಡಿದ್ದ ಅಂದಿನ ವಿಮಾನಯಾನ ಸಚಿವ ಅಶೋಕ ಗಜಪತಿರಾಜು, “ಚೆನ್ನಮ್ಮನ ಹೆಸರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ, ಶೀಘ್ರವೇ ಅನುಮೋದನೆ ನೀಡಲಾಗುವುದುʼ ಎಂದು ಆಶ್ವಾಸನೆ ನೀಡಿದ್ದರು.

ಅದರಂತೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಡಿಸೆಂಬರ್ 22, 2018ರಂದು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು.

ನಂತರ ಸಮ್ಮಿಶ್ರ ಸರ್ಕಾರ ಉರುಳಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಿಎಂ ಬಿಎಸ್ ಯಡಿಯೂರಪ್ಪನವರೂ “ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರಿನ ರಾಣಿ ಚೆನ್ನಮ್ಮ ಅವರ ಹೆಸರಿಡಿ”ಎಂದು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಆದರೆ, 2018ರಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರಿಡಲು ನಮ್ಮದೇನೂ ತಕರಾರಿಲ್ಲ ಎಂದಿದ್ದ ಕೇಂದ್ರ ಸರ್ಕಾರ ಇಂದು ಚೆನ್ನಮ್ಮ ಹೆಸರನ್ನು ಸಾರಾಸಗಟಾಗಿ ತಿರಸ್ಕರಿಸಿದೆ.

ಕೇಂದ್ರ ಸರ್ಕಾರವು ಕನ್ನಡ ನಾಡಿನ ವಿಮಾನ ನಿಲ್ದಾಣಕ್ಕೆ ನಮ್ಮದೇ ಸ್ವಾತಂತ್ಯ್ರ ಹೋರಾಟಗಾರರ ಹೆಸರಿಡಲು ಹಿಂದೂ-ಮುಂದೂ ನೋಡುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ಬಿಬಿಎಂಪಿಯಲ್ಲಿ ಪ್ರಸ್ತಾಪವೇ ಆಗದೆ ಹೆಸರನ್ನು ಕೊನೆಗೂ ಅಂತಿಮಗೊಳಿಸಲಾಗಿದೆ.

ಯಲಹಂಕ ಮೇಲ್ಸೇತುವೆ ವಿವಾದ

ಯಲಹಂಕದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಡೈರಿ ವೃತ್ತದಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆಗೆ ಸಾವರ್ಕರ್ ಹೆಸರನ್ನು ನಾಮಕರಣ ಮಾಡಲು ಸರ್ಕಾರ ಮುಂದಾಗಿತ್ತು. ಈ ಸಂಬಂಧ ಕಳೆದ ಮೇ.28 ರಂದು ಸಮಾರಂಭವನ್ನೂ ಆಯೋಜಿಸಿತ್ತು.
ಆದರೆ, ಸರ್ಕಾರದ ನಿರ್ಣಯವನ್ನು ತೀವ್ರವಾಗಿ ಟೀಕಿಸಿದ್ದ ವಿರೋಧ ಪಕ್ಷಗಳು ಭಾರತದ ಸ್ವಾತಂತ್ಯ್ರ ಹೋರಾಟಕ್ಕೆ ಸಾವರ್ಕರ್ ಕೊಡುಗೆ ಏನು? ಆತ ಸ್ವಾತಂತ್ಯ್ರಕ್ಕಾಗಿ ಹೋರಾಡಿಲ್ಲ. ಬದಲಾಗಿ ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದು ಕರಿನೀರಿನ ಶಿಕ್ಷೆಯಿಂದ ಪಾರಾಗಿದ್ದವರು. ಅಂತವರ ಹೆಸರನ್ನು ಕರ್ನಾಟಕದಲ್ಲಿಡುವ ಅಗತ್ಯ ಇಲ್ಲ. ಅಲ್ಲದೆ, ಕನಾಟಕದಲ್ಲಿ ಕನ್ನಡಿಗರ ಹೆಸರನ್ನೇ ಇಡಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷಗಳು ತೀವ್ರವಾಗಿ ಪ್ರತಿಭಟಿಸಿದ್ದವು. ಇದು ರಾಜ್ಯಾದ್ಯಂತ ಚರ್ಚಾಸ್ಪದ ವಿಚಾರವಾಗಿ ಮಾರ್ಪಾಟಾಗಿತ್ತು. ಪರಿಣಾಮ ಆಡಳಿತರೂಢ ಬಿಜೆಪಿ ಸರ್ಕಾರ ಈ ಸಮಾರಂಭವನ್ನೇ ರದ್ದು ಮಾಡಿತ್ತು.

ಆದರೆ, ಕೊನೆಗೂ ಮಂಗಳವಾರ ಬಿಬಿಎಂಪಿ ಪಾಲಿಕೆ ಸಭೆ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳುವ ಮೂಲಕ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ತೀರ್ಮಾನಿಸಿದೆ ಎನ್ನಲಾಗುತ್ತಿದೆ. ಅಲ್ಲದೆ, ಪಾಲಿಕೆ ಈ ನಿರ್ಣಯವನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, ಸರ್ಕಾರವು ಪಾಲಿಕೆಯ ಪ್ರಸ್ತಾವನೆಯನ್ನು ಪರಿಶೀಲಿಸಿ ಅಂತಿಮ ಆದೇಶ ಹೊರಡಿಸಲಿದೆ ಎಂದೂ ಹೇಳಲಾಗುತ್ತಿದೆ.

ಪಾಲಿಕೆ ವ್ಯಾಪಿಯ ಯಾವುದೇ ಸರ್ಕಾರಿ ಕಾಮಗಾರಿಗಳಿಗೆ ಹೆಸೆರಿಡುವ ಮುನ್ನ ಬಿಬಿಎಂಪಿಯಲ್ಲಿ ಸಭೆ ನಡೆಸಬೇಕು. ಆದರೆ, ಪಾಲಿಕೆಯಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳದೆ ಸಾವರ್ಕರ್ ಹೆಸರಿಡಲು ಒಪ್ಪಿಗೆ ನೀಡಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ. ಆದರೆ, ಇದು ನಿಜವೇ ಎಂದಾದಲ್ಲಿ ಇದೊಂದು ಕಾನೂನು ಬಾಹಿರವಾದ ನಿರ್ಣಯ ಮತ್ತು ರಾಜ್ಯ ಬಿಜೆಪಿ ಸರ್ಕಾರ ಕಾನೂನು ಬಾಹಿರವಾಗಿಯೇ ಸಾವರ್ಕರ್ ಹೆಸರಿಡಲು ಮುಂದಾಗುತ್ತಿದೆಯೇ ಎಂಬ ಪ್ರಶ್ನೆ ಎದ್ದಿದೆ.

ಈ ಕುರಿತು ನಾನುಗೌರಿ.ಕಾಂ ಬಿಬಿಎಂಪಿಯ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಮತ್ತು ಸಾವರ್ಕರ್ ಹೆಸರಿಡಲು ವಿರೋಧ ವ್ಯಕ್ತಿಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಿದ್ದ ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷ ಬಿ.ಹರೀಶ್ ಕುಮಾರ್ ಹಾಗೂ ಬೆಂಗಳೂರು ಮೇಯರ್ ಕೆ. ಗೌತಮ್ ಕುಮಾರ್ ಅವರನ್ನು ಮಾತಾಡಿಸಿತು.

ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಬಿ. ಹರೀಶ್ ಕುಮಾರ್, “ರಾಜ್ಯ ಸರ್ಕಾರ ಕನ್ನಡದ್ರೋಹಿ ಕೆಲಸಕ್ಕೆ ಮುಂದಾಗಿದೆ. ಟಿಪ್ಪು ಸುಲ್ತಾನ್ ವಿವಾದಾತ್ಮಕ ವ್ಯಕ್ತಿ ಎಂಬ ಏಕೈಕ ಕಾರಣಕ್ಕೆ ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯನ್ನೇ ರದ್ದು ಮಾಡಿತ್ತು. ಹಾಗೆ ನೋಡಿದರೆ ಸಾವರ್ಕರ್ ಸಹ ವಿವಾದಾತ್ಮಕ ವ್ಯಕ್ತಿ. ಆದರೆ, ಅವರ ಹೆಸರನ್ನು ಮಾತ್ರ ಏಕೆ ಯಲಹಂಕ ಮೇಲ್ಸೇತುವೆಗೆ ನಾಮಕರಣ ಮಾಡಲಾಗುತ್ತಿದೆ?

ಕಳೆದ ತಿಂಗಳು ನಾವು ಈ ಕುರಿತು ರಸ್ತೆಗಿಳಿದು ಪ್ರತಿಭಟಿಸಿದ್ದೆವು. ಈ ವೇಳೆ ಕನ್ನಡ ಹೋರಾಟಗಾರರ ಕಣ್ಣೊರೆಸುವ ಸಲುವಾಗಿ ಕಾರ್ಯಕ್ರಮವನ್ನು ರದ್ದು ಮಾಡಿದ್ದ ರಾಜ್ಯ ಸರ್ಕಾರ ಇದೀಗ ಸದ್ದಿಲ್ಲದೆ ಮತ್ತೆ ಸಾವರ್ಕರ್ ಹೆಸರನ್ನು ನಾಮಕರಣ ಮಾಡಲು ಮುಂದಾಗಿದೆ. ರಾಜ್ಯ ಸರ್ಕಾರದ ಇಂತಹ ನಿರ್ಧಾರವನ್ನು ಕನ್ನಡಿಗರು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಕನ್ನಡಿಗರ ಹೆಸರನ್ನೇ ನಾಮಕರಣ ಮಾಡಬೇಕು. ಹೀಗಾಗಿ ನಾವು ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಹೈಕೊರ್ಟ್ ಮೊರೆ ಹೋಗುತ್ತೇವೆ” ಎಂದು ತಿಳಿಸಿದ್ಧಾರೆ.

ಇನ್ನೂ ಇದೇ ವಿಚಾರವಾಗಿ ಸ್ಪಷ್ಟನೆ ನೀಡಿರುವ ಬೆಂಗಳೂರು ಮೇಯರ್ ಕೆ. ಗೌತಮ್ ಕುಮಾರ್, “ಮೇ.28 ರಂದು ಸರ್ಕಾರ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಮಾಡಿತ್ತೇ ಹೊರತು, ಸಾವರ್ಕರ್ ಹೆಸರಿಡುವ ಪ್ರಕ್ರಿಯೆಗಳು ಜಾರಿಯಲ್ಲೇ ಇತ್ತು. ನಾವು ಪಾಲಿಕೆಯ ವತಿಯಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದ್ದೆವು. ಆದರೆ, ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕೇವಲ ಒಂದೇ ಒಂದು ಆಕ್ಷೇಪಣೆ ಮಾತ್ರ ಬಂದಿತ್ತು.

ಹೀಗಾಗಿ ಮಂಗಳವಾರ ಪಾಲಿಕೆ ಸದಸ್ಯರ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಎಲ್ಲರೂ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದಾರೆ. ಪರಿಣಾಮ ಪಾಲಿಕೆಯಿಂದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಮುಂದಿನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ನಿರ್ವಹಿಸಲಿದೆ” ಎಂದಿದ್ದಾರೆ.

ಆದರೆ, ಪಾಲಿಕೆಯಲ್ಲಿ ಎಲ್ಲಾ ಸದಸ್ಯರು ಸಾವರ್ಕರ್ ಹೆಸರಿಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದು ನಿಜವೇ? ಎಂದು ತಿಳಿದುಕೊಳ್ಳುವ ಸಲುವಾಗಿ ನಾನುಗೌರಿ.ಕಾಮ್ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜೀದ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿತು. ಆದರೆ, ಅವರು ನಮ್ಮ ಕರೆಯನ್ನು ಸ್ವೀಕರಿಸಲಿಲ್ಲ. (ಇವರ ಸಂಪರ್ಕ ಸಾಧ್ಯವಾದ ನಂತರ ಮತ್ತಷ್ಟು ಅಪ್ಡೇಟ್‌ ಮಾಡಲಾಗುವುದು)

ಒಟ್ಟಾರೆ ಯಲಹಂಕ ಮೇಲ್ಸೇತುವೆಗೆ ಶತಾಯಗತಾಯ ಸಾವರ್ಕರ್ ಹೆಸರನ್ನು ಇಡಲೇಬೇಕು ಎಂಬುದು ರಾಜ್ಯ ಸರ್ಕಾರದ ಪಾಲಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳು ಜಾಣಮೌನ ಸಾಧಿಸಿದರೂ ಸಹ ಕನ್ನಡಪರ ಹೋರಾಟಗಾರರು ಇದನ್ನು ಒಪ್ಪುವ ಮನಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಈ ವಿವಾದ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆಯಲಿದೆ ಎಂಬುದನ್ನು ಕಾದುನೋಡಬೇಕಿದೆ.


ಇದನ್ನು ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...