Homeಕರ್ನಾಟಕಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರನ್ನು ನಿರಾಕರಿಸಿ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟ ಬಿಜೆಪಿಗರು!

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮ ಹೆಸರನ್ನು ನಿರಾಕರಿಸಿ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟ ಬಿಜೆಪಿಗರು!

ಯಲಹಂಕ ಮೇಲ್ಸೇತುವೆಗೆ ಶತಾಯಗತಾಯ ಸಾವರ್ಕರ್ ಹೆಸರನ್ನು ಇಡಲೇಬೇಕು ಎಂಬುದು ರಾಜ್ಯ ಸರ್ಕಾರದ ಪಾಲಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ಕನ್ನಡಪರ ಹೋರಾಟಗಾರರು ಇದನ್ನು ಒಪ್ಪುವ ಮನಸ್ಥಿತಿಯಲ್ಲಿ ಇಲ್ಲ.

- Advertisement -
- Advertisement -

ಕಿತ್ತೂರು ರಾಣಿ ಚೆನ್ನಮ್ಮ ಭಾರತದ ಸ್ವಾತಂತ್ಯ್ರ ಹೋರಾಟದ ಇತಿಹಾಸದಲ್ಲಿ ಅಗ್ರಗಣ್ಯ ಹೆಸರು. ವಿಪರ್ಯಾಸವೆಂದರೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರಿನ ರಾಣಿ ಚೆನ್ನಮ್ಮ ಹೆಸರಿಡಲು ಕೇಂದ್ರ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಿದ್ದರೆ, ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸೆರಿಟ್ಟು ವಿಜೃಂಭಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದ ವಾಣಿಜ್ಯ ನಗರಗಳ ಪೈಕಿ ಬೆಳಗಾವಿಯೂ ಒಂದು. ಹೀಗಾಗಿ ಬೆಳಗಾವಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಅಲ್ಲದೆ 2018ರಲ್ಲಿ ಕಾಂಗ್ರೆಸ್—ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೇಲ್ದರ್ಜೆಗೇರಿದ್ದ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಯೂ ಮಾಡಲಾಗಿತ್ತು. ಈ ಸಮಾರಂಭದಲ್ಲಿ ಮಾತನಾಡಿದ್ದ ಅಂದಿನ ವಿಮಾನಯಾನ ಸಚಿವ ಅಶೋಕ ಗಜಪತಿರಾಜು, “ಚೆನ್ನಮ್ಮನ ಹೆಸರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ, ಶೀಘ್ರವೇ ಅನುಮೋದನೆ ನೀಡಲಾಗುವುದುʼ ಎಂದು ಆಶ್ವಾಸನೆ ನೀಡಿದ್ದರು.

ಅದರಂತೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಡಿಸೆಂಬರ್ 22, 2018ರಂದು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು.

ನಂತರ ಸಮ್ಮಿಶ್ರ ಸರ್ಕಾರ ಉರುಳಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಿಎಂ ಬಿಎಸ್ ಯಡಿಯೂರಪ್ಪನವರೂ “ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರಿನ ರಾಣಿ ಚೆನ್ನಮ್ಮ ಅವರ ಹೆಸರಿಡಿ”ಎಂದು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಆದರೆ, 2018ರಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರಿಡಲು ನಮ್ಮದೇನೂ ತಕರಾರಿಲ್ಲ ಎಂದಿದ್ದ ಕೇಂದ್ರ ಸರ್ಕಾರ ಇಂದು ಚೆನ್ನಮ್ಮ ಹೆಸರನ್ನು ಸಾರಾಸಗಟಾಗಿ ತಿರಸ್ಕರಿಸಿದೆ.

ಕೇಂದ್ರ ಸರ್ಕಾರವು ಕನ್ನಡ ನಾಡಿನ ವಿಮಾನ ನಿಲ್ದಾಣಕ್ಕೆ ನಮ್ಮದೇ ಸ್ವಾತಂತ್ಯ್ರ ಹೋರಾಟಗಾರರ ಹೆಸರಿಡಲು ಹಿಂದೂ-ಮುಂದೂ ನೋಡುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ಬಿಬಿಎಂಪಿಯಲ್ಲಿ ಪ್ರಸ್ತಾಪವೇ ಆಗದೆ ಹೆಸರನ್ನು ಕೊನೆಗೂ ಅಂತಿಮಗೊಳಿಸಲಾಗಿದೆ.

ಯಲಹಂಕ ಮೇಲ್ಸೇತುವೆ ವಿವಾದ

ಯಲಹಂಕದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಡೈರಿ ವೃತ್ತದಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆಗೆ ಸಾವರ್ಕರ್ ಹೆಸರನ್ನು ನಾಮಕರಣ ಮಾಡಲು ಸರ್ಕಾರ ಮುಂದಾಗಿತ್ತು. ಈ ಸಂಬಂಧ ಕಳೆದ ಮೇ.28 ರಂದು ಸಮಾರಂಭವನ್ನೂ ಆಯೋಜಿಸಿತ್ತು.
ಆದರೆ, ಸರ್ಕಾರದ ನಿರ್ಣಯವನ್ನು ತೀವ್ರವಾಗಿ ಟೀಕಿಸಿದ್ದ ವಿರೋಧ ಪಕ್ಷಗಳು ಭಾರತದ ಸ್ವಾತಂತ್ಯ್ರ ಹೋರಾಟಕ್ಕೆ ಸಾವರ್ಕರ್ ಕೊಡುಗೆ ಏನು? ಆತ ಸ್ವಾತಂತ್ಯ್ರಕ್ಕಾಗಿ ಹೋರಾಡಿಲ್ಲ. ಬದಲಾಗಿ ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದು ಕರಿನೀರಿನ ಶಿಕ್ಷೆಯಿಂದ ಪಾರಾಗಿದ್ದವರು. ಅಂತವರ ಹೆಸರನ್ನು ಕರ್ನಾಟಕದಲ್ಲಿಡುವ ಅಗತ್ಯ ಇಲ್ಲ. ಅಲ್ಲದೆ, ಕನಾಟಕದಲ್ಲಿ ಕನ್ನಡಿಗರ ಹೆಸರನ್ನೇ ಇಡಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷಗಳು ತೀವ್ರವಾಗಿ ಪ್ರತಿಭಟಿಸಿದ್ದವು. ಇದು ರಾಜ್ಯಾದ್ಯಂತ ಚರ್ಚಾಸ್ಪದ ವಿಚಾರವಾಗಿ ಮಾರ್ಪಾಟಾಗಿತ್ತು. ಪರಿಣಾಮ ಆಡಳಿತರೂಢ ಬಿಜೆಪಿ ಸರ್ಕಾರ ಈ ಸಮಾರಂಭವನ್ನೇ ರದ್ದು ಮಾಡಿತ್ತು.

ಆದರೆ, ಕೊನೆಗೂ ಮಂಗಳವಾರ ಬಿಬಿಎಂಪಿ ಪಾಲಿಕೆ ಸಭೆ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳುವ ಮೂಲಕ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ತೀರ್ಮಾನಿಸಿದೆ ಎನ್ನಲಾಗುತ್ತಿದೆ. ಅಲ್ಲದೆ, ಪಾಲಿಕೆ ಈ ನಿರ್ಣಯವನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, ಸರ್ಕಾರವು ಪಾಲಿಕೆಯ ಪ್ರಸ್ತಾವನೆಯನ್ನು ಪರಿಶೀಲಿಸಿ ಅಂತಿಮ ಆದೇಶ ಹೊರಡಿಸಲಿದೆ ಎಂದೂ ಹೇಳಲಾಗುತ್ತಿದೆ.

ಪಾಲಿಕೆ ವ್ಯಾಪಿಯ ಯಾವುದೇ ಸರ್ಕಾರಿ ಕಾಮಗಾರಿಗಳಿಗೆ ಹೆಸೆರಿಡುವ ಮುನ್ನ ಬಿಬಿಎಂಪಿಯಲ್ಲಿ ಸಭೆ ನಡೆಸಬೇಕು. ಆದರೆ, ಪಾಲಿಕೆಯಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳದೆ ಸಾವರ್ಕರ್ ಹೆಸರಿಡಲು ಒಪ್ಪಿಗೆ ನೀಡಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ. ಆದರೆ, ಇದು ನಿಜವೇ ಎಂದಾದಲ್ಲಿ ಇದೊಂದು ಕಾನೂನು ಬಾಹಿರವಾದ ನಿರ್ಣಯ ಮತ್ತು ರಾಜ್ಯ ಬಿಜೆಪಿ ಸರ್ಕಾರ ಕಾನೂನು ಬಾಹಿರವಾಗಿಯೇ ಸಾವರ್ಕರ್ ಹೆಸರಿಡಲು ಮುಂದಾಗುತ್ತಿದೆಯೇ ಎಂಬ ಪ್ರಶ್ನೆ ಎದ್ದಿದೆ.

ಈ ಕುರಿತು ನಾನುಗೌರಿ.ಕಾಂ ಬಿಬಿಎಂಪಿಯ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಮತ್ತು ಸಾವರ್ಕರ್ ಹೆಸರಿಡಲು ವಿರೋಧ ವ್ಯಕ್ತಿಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಿದ್ದ ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷ ಬಿ.ಹರೀಶ್ ಕುಮಾರ್ ಹಾಗೂ ಬೆಂಗಳೂರು ಮೇಯರ್ ಕೆ. ಗೌತಮ್ ಕುಮಾರ್ ಅವರನ್ನು ಮಾತಾಡಿಸಿತು.

ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಬಿ. ಹರೀಶ್ ಕುಮಾರ್, “ರಾಜ್ಯ ಸರ್ಕಾರ ಕನ್ನಡದ್ರೋಹಿ ಕೆಲಸಕ್ಕೆ ಮುಂದಾಗಿದೆ. ಟಿಪ್ಪು ಸುಲ್ತಾನ್ ವಿವಾದಾತ್ಮಕ ವ್ಯಕ್ತಿ ಎಂಬ ಏಕೈಕ ಕಾರಣಕ್ಕೆ ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯನ್ನೇ ರದ್ದು ಮಾಡಿತ್ತು. ಹಾಗೆ ನೋಡಿದರೆ ಸಾವರ್ಕರ್ ಸಹ ವಿವಾದಾತ್ಮಕ ವ್ಯಕ್ತಿ. ಆದರೆ, ಅವರ ಹೆಸರನ್ನು ಮಾತ್ರ ಏಕೆ ಯಲಹಂಕ ಮೇಲ್ಸೇತುವೆಗೆ ನಾಮಕರಣ ಮಾಡಲಾಗುತ್ತಿದೆ?

ಕಳೆದ ತಿಂಗಳು ನಾವು ಈ ಕುರಿತು ರಸ್ತೆಗಿಳಿದು ಪ್ರತಿಭಟಿಸಿದ್ದೆವು. ಈ ವೇಳೆ ಕನ್ನಡ ಹೋರಾಟಗಾರರ ಕಣ್ಣೊರೆಸುವ ಸಲುವಾಗಿ ಕಾರ್ಯಕ್ರಮವನ್ನು ರದ್ದು ಮಾಡಿದ್ದ ರಾಜ್ಯ ಸರ್ಕಾರ ಇದೀಗ ಸದ್ದಿಲ್ಲದೆ ಮತ್ತೆ ಸಾವರ್ಕರ್ ಹೆಸರನ್ನು ನಾಮಕರಣ ಮಾಡಲು ಮುಂದಾಗಿದೆ. ರಾಜ್ಯ ಸರ್ಕಾರದ ಇಂತಹ ನಿರ್ಧಾರವನ್ನು ಕನ್ನಡಿಗರು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಕನ್ನಡಿಗರ ಹೆಸರನ್ನೇ ನಾಮಕರಣ ಮಾಡಬೇಕು. ಹೀಗಾಗಿ ನಾವು ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಹೈಕೊರ್ಟ್ ಮೊರೆ ಹೋಗುತ್ತೇವೆ” ಎಂದು ತಿಳಿಸಿದ್ಧಾರೆ.

ಇನ್ನೂ ಇದೇ ವಿಚಾರವಾಗಿ ಸ್ಪಷ್ಟನೆ ನೀಡಿರುವ ಬೆಂಗಳೂರು ಮೇಯರ್ ಕೆ. ಗೌತಮ್ ಕುಮಾರ್, “ಮೇ.28 ರಂದು ಸರ್ಕಾರ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಮಾಡಿತ್ತೇ ಹೊರತು, ಸಾವರ್ಕರ್ ಹೆಸರಿಡುವ ಪ್ರಕ್ರಿಯೆಗಳು ಜಾರಿಯಲ್ಲೇ ಇತ್ತು. ನಾವು ಪಾಲಿಕೆಯ ವತಿಯಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದ್ದೆವು. ಆದರೆ, ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕೇವಲ ಒಂದೇ ಒಂದು ಆಕ್ಷೇಪಣೆ ಮಾತ್ರ ಬಂದಿತ್ತು.

ಹೀಗಾಗಿ ಮಂಗಳವಾರ ಪಾಲಿಕೆ ಸದಸ್ಯರ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಎಲ್ಲರೂ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದಾರೆ. ಪರಿಣಾಮ ಪಾಲಿಕೆಯಿಂದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಮುಂದಿನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ನಿರ್ವಹಿಸಲಿದೆ” ಎಂದಿದ್ದಾರೆ.

ಆದರೆ, ಪಾಲಿಕೆಯಲ್ಲಿ ಎಲ್ಲಾ ಸದಸ್ಯರು ಸಾವರ್ಕರ್ ಹೆಸರಿಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದು ನಿಜವೇ? ಎಂದು ತಿಳಿದುಕೊಳ್ಳುವ ಸಲುವಾಗಿ ನಾನುಗೌರಿ.ಕಾಮ್ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜೀದ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿತು. ಆದರೆ, ಅವರು ನಮ್ಮ ಕರೆಯನ್ನು ಸ್ವೀಕರಿಸಲಿಲ್ಲ. (ಇವರ ಸಂಪರ್ಕ ಸಾಧ್ಯವಾದ ನಂತರ ಮತ್ತಷ್ಟು ಅಪ್ಡೇಟ್‌ ಮಾಡಲಾಗುವುದು)

ಒಟ್ಟಾರೆ ಯಲಹಂಕ ಮೇಲ್ಸೇತುವೆಗೆ ಶತಾಯಗತಾಯ ಸಾವರ್ಕರ್ ಹೆಸರನ್ನು ಇಡಲೇಬೇಕು ಎಂಬುದು ರಾಜ್ಯ ಸರ್ಕಾರದ ಪಾಲಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳು ಜಾಣಮೌನ ಸಾಧಿಸಿದರೂ ಸಹ ಕನ್ನಡಪರ ಹೋರಾಟಗಾರರು ಇದನ್ನು ಒಪ್ಪುವ ಮನಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಈ ವಿವಾದ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆಯಲಿದೆ ಎಂಬುದನ್ನು ಕಾದುನೋಡಬೇಕಿದೆ.


ಇದನ್ನು ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....