Homeಕರ್ನಾಟಕಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ಬಿಬಿಎಂಪಿ ಅನುಮತಿ ರದ್ದುಗೊಳಿಸಿದ 15 ದಿನಗಳ ನಂತರವೂ ಅಕ್ರಮ ನಡೆಯುತ್ತಲೆ ಇತ್ತು!

- Advertisement -
- Advertisement -

ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ರಾಜ್ಯದ ಆಡಳಿತರೂಢ ಪಕ್ಷವಾದ ಬಿಜೆಪಿಗೆ ನೇರ ಕೈವಾಡವಿದೆ ಎಂದು ದಿ ನ್ಯೂಸ್ ಮಿನಿಟ್‌ ಹೊಸ ವರದಿ ಹೇಳಿದೆ. ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ತನ್ನ ಏಜೆಂಟರಿಗೆ ಬಿಜೆಪಿ ಕಚೇರಿಯಲ್ಲೆ ತರಬೇತಿ ನೀಡುತ್ತಿತ್ತು ಮತ್ತು ಬಿಬಿಎಂಪಿ ಅವರಿಗೆ ನೀಡಿದ್ದ ಅನುಮತಿ ರದ್ದುಗೊಳಿಸಿದ 15 ದಿನಗಳ ನಂತರವೂ ಅದು ಮುಂದುವರೆದಿತ್ತು ಎಂದು ಆರೋಪಿಸಿದೆ.

ದಿ ನ್ಯೂಸ್ ಮಿನಿಟ್ ಮತ್ತು ಪ್ರತಿಧ್ವನಿ ಜಂಟಿಯಾಗಿ ನಡೆಸಿದ ತನಿಖಾ ವರದಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಮತದಾರರ ಮಾಹಿತಿ ಕಳ್ಳತನ ಹಗರಣ ಬಯಲಿಗೆಳೆದಿತ್ತು. ಈ ಹಗರಣದಲ್ಲಿ ಪೊಲೀಸರು ಈಗಾಗಲೆ ಒಟ್ಟು ಐವರನ್ನು ಬಂಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನ ಹೊಂಗಸಂದ್ರದ ಬಿಜೆಪಿ ವಾರ್ಡ್ ಕಚೇರಿಯಲ್ಲೆ ಏಜೆಂಟರಿಗೆ ತರಬೇತಿ ನೀಡಲಾಗಿತ್ತು ಎಂದು ನ್ಯೂಸ್ ಮಿನಿಟ್‌ ಹೇಳಿದೆ. ಚಿಲುಮೆ ಸಂಸ್ಥೆಯ ಉದ್ಯೋಗಾಕಾಂಕ್ಷಿಯಂತೆ ತೆರಳಿದ್ದ ನ್ಯೂಸ್ ಮಿನಿಟ್‌‌ನ ವ್ಯಕ್ತಿಯೊಬ್ಬರು ಮೂಲಕ ಈ ಮಾಹಿತಿ ಬಹಿರಂಗವಾಗಿದೆ. ಈ ಕಚೇರಿಯಲ್ಲಿ ಕಾರ್ಯಕರ್ತರು ಕಾರ್ಯನಿರ್ವಹಿಸುವ ಏರಿಯಾಗಳ ನಕ್ಷೆ ಮಾಡುವುದು ಮತ್ತು ಮತದಾರರ ಡೇಟಾವನ್ನು ಹೇಗೆ ಸಂಗ್ರಹಿಸುವುದು ಎಂಬುದರ ಕುರಿತು ಚಿಲುಮೆ ಎನ್‌ಜಿಒ ತನ್ನ ಕ್ಷೇತ್ರ ಕಾರ್ಯಕರ್ತರಿಗೆ ತರಬೇತಿ ನೀಡಿತ್ತು ಎಂದು ನ್ಯೂಸ್ ಮಿನಿಟ್ ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಎನ್‌ಜಿಒ ನಿರ್ದೇಶಕ ರವಿಕುಮಾರ್ ಬಂಧನ

ಬಿಜೆಪಿಯ ಈ ಕಚೇರಿಯನ್ನು ಕಾರ್ಪೊರೇಟರ್ ಹುದ್ದೆಯ ಆಕಾಂಕ್ಷಿಗಳು ಪ್ರಾಥಮಿಕವಾಗಿ ಬಳಸುತ್ತಾರೆ. ಸೆಪ್ಟೆಂಬರ್ 2020 ರವರೆಗೆ ವಾರ್ಡ್‌ನ ಕೌನ್ಸಿಲರ್ ಬಿಜೆಪಿಯ ಭಾರತಿ ರಾಮಚಂದ್ರ ಆಗಿದ್ದರು. ಈ ಕಚೇರಿಗೆ ಪ್ರಸ್ತುತ ಶಾಸಕರ ವಾರ್ಡ್‌ ಕಚೇರಿ ಎಂದು ಹೆಸರು ಹಾಕಲಾಗಿದೆ. ಹೊಂಗಸಂದ್ರವು ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಅವರ ಕ್ಷೇತ್ರಕ್ಕೆ ಸೇರುತ್ತದೆ.

PC: TNM

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆದೇಶಿಸಿದ ನಂತರವೂ ಚಿಲುಮೆಯ ಏಜೆಂಟರು ಅಕ್ರಮ ಮತದಾರರ ಮಾಹಿತಿ ಸಂಗ್ರಹಣೆಯನ್ನು ಮುಂದುವರೆಸುತ್ತಿದ್ದಾರೆ ಎಂಬ ಹೇಳಿಕೆಗಳನ್ನು ಪರಿಶೀಲಿಸಲು ನ್ಯೂಸ್ ಮಿನಿಟ್‌ ರಹಸ್ಯವಾಗಿ ಅಲ್ಲಿಗೆ ತೆರಳಿತ್ತು.

ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನ: ಚಿಲುಮೆ ಸಂಸ್ಥೆಯ ಇಬ್ಬರ ಬಂಧನ, ನಿರ್ದೇಶಕ ಪರಾರಿ

ಈ ಹಿಂದೆ ವರದಿಯಾದಂತೆ, ನವೆಂಬರ್ 2 ರಂದು ಚುನಾವಣಾ ವಂಚನೆಯ ತನಿಖೆಯನ್ನು ನ್ಯೂಸ್ ಮಿನಿಟ್‌ ಪ್ರಾರಂಭಿಸಿದ ನಂತರ BBMP ತರಾತುರಿಯಲ್ಲಿ ಚಿಲುಮೆ ಎನ್‌ಜಿಒಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿತು. ಆದರೂ ಕನಿಷ್ಠ ನವೆಂಬರ್ 17 ರವರೆಗೆ ಚಿಲುಮೆಯು ತನ್ನ ಕಾರ್ಯಾಚರಣೆಯನ್ನು ಯಾವುದೇ ಬದಲಾವಣೆಯಿಲ್ಲದೆ ಮುಂದುವರಿಸಿತ್ತು ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಬಿಬಿಎಂಪಿಯ ರದ್ದತಿ ಆದೇಶವನ್ನು ಧಿಕ್ಕರಿಸಿ ಚಿಲುಮೆಯು ಹೊಸ ತಾಜಾ ಫೀಲ್ಡ್ ಏಜೆಂಟರನ್ನು ನೇಮಿಸಿಕೊಳ್ಳುತ್ತಿದೆ ಎಂಬ ಸುಳಿವು ಆಧರಿಸಿ, ನ್ಯೂಸ್‌ ಮಿನಿಟ್‌‌ ನವೆಂಬರ್ 12 ರಂದು ಕೆಲಸ ಹುಡುಕುವ ನೆಪದಲ್ಲಿ ಚಿಲುಮೆ ಎನ್‌ಜಿಒ ಮಲ್ಲೇಶ್ವರಂ ಕಚೇರಿಗೆ ಭೇಟಿ ನೀಡಿತ್ತು. ಕೆಲವು ಪ್ರಶ್ನೆಗಳ ನಂತರ ನ್ಯೂಸ್‌ ಮಿನಿಟ್‌‌ನ ವ್ಯಕ್ತಿಯನ್ನು ಅಲ್ಲಿ ಕೆಲಸಕ್ಕೆ ಸೇರಿಸಿಕೊಂಡಿದ್ದರು.

ನವೆಂಬರ್ 16 ರಂದು ದಕ್ಷಿಣ ಬೆಂಗಳೂರಿನ ಹೊಂಗಸಂದ್ರ ಪ್ರದೇಶದಲ್ಲಿ ತರಬೇತಿ ಕೇಂದ್ರದ ಸ್ಥಳದ ಲೊಕೇಷನ್‌ ಕಳುಹಿಸಿದ್ದರು. ಮರುದಿನ ಸ್ಥಳಕ್ಕೆ ತೆರಳಿದ್ದ ನ್ಯೂಸ್ ಮಿನಿಟ್‌ನ ವ್ಯಕ್ತಿ, ಬಿಜೆಪಿಯ ಬೊಮ್ಮಸಂದ್ರ ಶಾಸಕ ಸತೀಶ್ ರೆಡ್ಡಿ ಅವರ ಕಚೇರಿಯಲ್ಲಿ ತರಬೇತಿ ನಡೆಯುತ್ತಿರುವುದನ್ನು ಕಂಡು ಅಚ್ಚರಿಗೊಂಡಿದ್ದಾರೆ. ಅವರು ಕಚೇರಿಯ ಒಳಗಿನ ಮತ್ತು ಹೊರಗಿನ ಫೋಟೋಗಳನ್ನು ಕ್ಲಿಕ್ ಮಾಡಿದ್ದು, ಅದನ್ನು ನ್ಯೂಸ್ ಮಿನಿಟ್‌ ಪ್ರಕಟಿಸಿದೆ. ಕಚೇರಿಯ ಮುಖ್ಯ ಕಿಟಕಿಯ ಮೇಲೆ ಸತೀಶ್ ರೆಡ್ಡಿ ಅವರ ಚಿತ್ರವಿರುವ ದೊಡ್ಡ ಪೋಸ್ಟರ್ ಅನ್ನು ಫೋಟೋಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

“ನವೆಂಬರ್‌ 17 ರಂದು ಹಗರಣ ಬಯಲಾಗುತ್ತಿದ್ದಂತೆ ಕನ್ನಡ ಮಾಧ್ಯಮಗಳು ಅದನ್ನು ವರದಿ ಮಾಡಿದ್ದವು. ಹೀಗಾಗಿ ಏಜೆಂಟರಿಗೆ ತರಬೇತಿ ನೀಡುತ್ತಿದ್ದ ಬಿಜೆಪಿ ಕಚೇರಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ನಂತರ ನಡೆದ ಸಂಕ್ಷಿಪ್ತ ಚರ್ಚೆಯ ನಂತರ ಎಲ್ಲರೂ ಅಲ್ಲಿಂದ ಹಿಂತಿರುಗಿದ್ದು, ಅಲ್ಲಿನ ಮೇಲ್ವಿಚಾರಕರು, ‘ತಾಂತ್ರಿಕ ಸಮಸ್ಯೆಯಿಂದ ಕೆಸಲ ನಡೆಸಲು ಸಾಧ್ಯವಾಗುತ್ತಿಲ್ಲ. ಮತ್ತೆ ಪುನರಾರಂಭಿಸಿದಾಗ ತಿಳಿಸಲಾಗುವುದು’ ಎಂದು ಹೇಳಿದ್ದರು” ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ನವೆಂಬರ್ 19 ರಂದು, ನ್ಯೂಸ್‌ ಮಿನಿಟ್‌‌ನ ವ್ಯಕ್ತಿಯು ಮೇಲ್ವಿಚಾರಕರಿಗೆ ಕರೆ ಮಾಡಿ ಚಿಲುಮೆ ಕಚೇರಿಗಳ ಮೇಲೆ ಪೋಲೀಸ್ ದಾಳಿಯ ಬಗ್ಗೆ ಕೇಳಿದ್ದು, ತಮ್ಮ ಕೆಲಸದ ಬಗ್ಗೆ ಪ್ರಶ್ನಿಸಿದ್ದಾರೆ. ಮೇಲ್ವಿಚಾರಕರು ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದು, ಚಿಂತಿಸಬೇಕಾಗಿಲ್ಲ ಎಂದು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

“ಸಣ್ಣಪುಟ್ಟ ಸಮಸ್ಯೆಗಳಿದ್ದು, ಶೀಘ್ರದಲ್ಲೇ ಕಾರ್ಯಾಚರಣೆ ಪುನರಾರಂಭಿಸಲಾಗುವುದು” ಎಂದು ಮೇಲ್ವಿಚಾರಕರು ತಿಳಿಸಿದ್ದಾರೆ. ಆದರೆ, ಅಂದಿನಿಂದ ಒಂದನ್ನು ಹೊರತುಪಡಿಸಿ ಎಲ್ಲಾ ಸಂಖ್ಯೆಗಳು ಸ್ವಿಚ್ ಆಫ್ ಆಗಿವೆ ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು ನಗರ ಉತ್ತರ: ಹಿಂದುತ್ವದ ಫ್ರಿಂಜ್ ಅಖಾಡದಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟ್ ಯಾರು?

ತಮ್ಮ ವಾರ್ಡ್ ಕಚೇರಿಯಲ್ಲಿ ನಡೆದ ತರಬೇತಿ ಕುರಿತು ಸತೀಶ್ ರೆಡ್ಡಿ ಅವರ ಪ್ರತಿಕ್ರಿಯೆ ಕೇಳಿದಾಗ, ಈ ಬಗ್ಗೆ ಯಾವುದೆ ಮಾಹಿತಿ ತನಗೆ ಇಲ್ಲ ಎಂದು ಶಾಸಕ ಹೇಳಿದ್ದಾಗಿ ನ್ಯೂಸ್ ಮಿನಿಟ್‌ ಹೇಳಿದೆ. ತರಬೇತಿಗಾಗಿ ತಮ್ಮ ಅನುಮತಿಯಿಲ್ಲದೆ ಕಚೇರಿಯನ್ನು ಬಳಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ಅನೇಕ ಜನರು ಕಚೇರಿಗೆ ಭೇಟಿ ನೀಡುತ್ತಾರೆ ಮತ್ತು ತರಬೇತಿಯ ಬಗ್ಗೆ ತನಗೆ ತಿಳಿದಿಲ್ಲ ಎಂದು ಅವರು ಉತ್ತರಿಸಿದ್ದಾರೆ.

ನ್ಯೂಸ್ ಮಿನಿಟ್‌‌ನ ಸಂಪೂರ್ಣ ವರದಿ ಇಲ್ಲಿ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...