Homeಮುಖಪುಟಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇತ್ತಿಚೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷದ ಒಳಗಿರುವ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದರು

- Advertisement -
- Advertisement -

ದೇಶದಲ್ಲಿ ಕೊರೊನಾ ಉಲ್ಬಣಕ್ಕಿಂತ ಕೊರೊನಾ ಲಸಿಕೆ ಕೊರತೆಯದ್ದೇ ಸುದ್ದಿ ಹೆಚ್ಚಾಗಿದೆ. ದೇಶಕ್ಕೆ ಲಸಿಕೆ ಅಗತ್ಯವಿದ್ದರೂ ವಿದೇಶಗಳಿಗೆ ಲಸಿಕೆ ರಫ್ತು ಮಾಡಿರುವ ಕೇಂದ್ರದ ವಿರುದ್ಧ ವಿರೋಧ ಪಕ್ಷಗಳು ಮುಗಿಬಿದ್ದಿವೆ. ಇವುಗಳ ನಡುವೆಯೇ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಕಚೇರಿಯಲ್ಲಿ 900 ರೆಮ್‌ಡೆಸಿವಿರ್‌ ಇಂಜೆಕ್ಷನ್‌ಗಳನ್ನು ವಿತರಿಸಲಾಗಿದೆ.

ಜೊತೆಗೆ 100 ಚುಚ್ಚುಮದ್ದನ್ನು ನವಸರಿ ಬಿಜೆಪಿ ಕಚೇರಿಯಿಂದ ಅದೇ ದಿನ ಅಗತ್ಯವಿರುವ ಕೊರೊನಾ ರೋಗಿಗಳ ಸಂಬಂಧಿಕರಿಗೆ ವಿತರಿಸಲಾಗಿದೆ. ಈ ವಿಷಯ ದೇಶದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಆಮ್ ಆದ್ಮಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಸರ್ಕಾರದ ಈ ನಡೆಯನ್ನು ಖಂಡಿಸಿದೆ.

ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್ ಪಾಟೀಲ್, ’ಸೂರತ್ ಬಿಜೆಪಿ ಇಂತಹ 5,000 ಚುಚ್ಚುಮದ್ದಿನ ವ್ಯವಸ್ಥೆ ಮಾಡಿದ್ದು, ಅಗತ್ಯವಿರುವವರು ವೈಯಕ್ತಿಕವಾಗಿ ಸೂರತ್ ಬಿಜೆಪಿ ಕಚೇರಿಗೆ ಬಂದು ತೆಗೆದುಕೊಳ್ಳಬಹುದು. ಕೊರೊನಾ ಸೋಂಕಿತ ರೋಗಿಗಳ ವೈದ್ಯಕೀಯ ಚಿಕಿತ್ಸಾ ದಾಖಲೆಗಳು, ಆಧಾರ್ ಕಾರ್ಡ್ ಮತ್ತು ರೆಮ್‌ಡೆಸಿವಿರ್‌ ಚುಚ್ಚುಮದ್ದಿನ ವೈದ್ಯರ ಚೀಟಿಯೊಂದಿಗೆ ಬರಬೇಕು’ ಎಂದು ಶುಕ್ರವಾರ ಘೋಷಿಸಿದ್ದರು.

ಇದನ್ನೂ ಓದಿ: ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೂರತ್ ನಗರದ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಜಂಜ್‌ಮೆರಾ, “ಮುಂದಿನ ಐದು ದಿನಗಳವರೆಗೆ ಪ್ರತಿದಿನ 1,000 ಇಂತಹ ಚುಚ್ಚುಮದ್ದನ್ನು ನಾವು ಪಡೆಯುತ್ತೇವೆ. ಈಂದು ಮೊದಲ ದಿನ 1000 ಚುಚ್ಚುಮದ್ದು ಪಡೆದಿದ್ದೇವೆ. ಅದರಲ್ಲಿ 100 ಅನ್ನು ನವಸರಿ ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಸೂರತ್ ನಗರದ ಬಿಜೆಪಿ ಕಚೇರಿಯಿಂದ ನಾವು ಅಂತಹ 900 ಚುಚ್ಚುಮದ್ದನ್ನು ವಿತರಿಸಿದ್ದೇವೆ” ಎಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರತಿಪಕ್ಷಗಳಾದ ಕಾಂಗ್ರೆಸ್, ಎನ್‌ಸಿಪಿ ಮತ್ತು ಆಮ್ ಆದ್ಮಿ ಪಕ್ಷ ಬಿಜೆಪಿಯ ಈ ನಡೆಯ್ನು ಖಂಡಿಸಿದೆ. ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗಳನ್ನು ಸಂಗ್ರಹಣೆ ಮಾಡಿದ ಆರೋಪದ ಮೇಲೆ ಬಿಜೆಪಿಯ ಗುಜರಾತ್ ಘಟಕವನ್ನು ಟ್ವೀಟ್ ಮೂಲಕ ದೂಷಿಸಿದೆ.

ಬಿಜೆಪಿಯ ಸೂರತ್ ಘಟಕವು ರಾಜ್ಯದಲ್ಲಿ ಲಸಿಕೆ ಕೊರತೆಯ ಮಧ್ಯೆ 5000 ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಖರೀದಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಗುಜರಾತ್ ಸಿಎಂ ವಿಜಯ್ ರೂಪಾನಿ, ಬಿಜೆಪಿಯ ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗಳನ್ನು ಸಂಗ್ರಹವು ಸರ್ಕಾರಿ ಷೇರುಗಳ ಭಾಗದಿಂದ ಬಂದಿಲ್ಲ ಎಂದು ಹೇಳಿದ್ದಾರೆ.

ಇತ್ತಿಚೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷದ ಒಳಗಿರುವ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿತ್ತು. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಇದರ ಜೊತೆಗೆ ಗುಜರಾತ್ ಬಿಜೆಪಿ ಘಟಕದ ಇಂಜೆಕ್ಷನ್ ವಿತರಣೆ ವಿಚಾರ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.


ಇದನ್ನೂ ಓದಿ: ಕೊರೊನಾ ರಾತ್ರಿ ವೇಳೆ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದ: ಡಿ.ಕೆ. ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...