Homeಮುಖಪುಟಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇತ್ತಿಚೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷದ ಒಳಗಿರುವ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದರು

- Advertisement -
- Advertisement -

ದೇಶದಲ್ಲಿ ಕೊರೊನಾ ಉಲ್ಬಣಕ್ಕಿಂತ ಕೊರೊನಾ ಲಸಿಕೆ ಕೊರತೆಯದ್ದೇ ಸುದ್ದಿ ಹೆಚ್ಚಾಗಿದೆ. ದೇಶಕ್ಕೆ ಲಸಿಕೆ ಅಗತ್ಯವಿದ್ದರೂ ವಿದೇಶಗಳಿಗೆ ಲಸಿಕೆ ರಫ್ತು ಮಾಡಿರುವ ಕೇಂದ್ರದ ವಿರುದ್ಧ ವಿರೋಧ ಪಕ್ಷಗಳು ಮುಗಿಬಿದ್ದಿವೆ. ಇವುಗಳ ನಡುವೆಯೇ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಕಚೇರಿಯಲ್ಲಿ 900 ರೆಮ್‌ಡೆಸಿವಿರ್‌ ಇಂಜೆಕ್ಷನ್‌ಗಳನ್ನು ವಿತರಿಸಲಾಗಿದೆ.

ಜೊತೆಗೆ 100 ಚುಚ್ಚುಮದ್ದನ್ನು ನವಸರಿ ಬಿಜೆಪಿ ಕಚೇರಿಯಿಂದ ಅದೇ ದಿನ ಅಗತ್ಯವಿರುವ ಕೊರೊನಾ ರೋಗಿಗಳ ಸಂಬಂಧಿಕರಿಗೆ ವಿತರಿಸಲಾಗಿದೆ. ಈ ವಿಷಯ ದೇಶದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಆಮ್ ಆದ್ಮಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಸರ್ಕಾರದ ಈ ನಡೆಯನ್ನು ಖಂಡಿಸಿದೆ.

ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್ ಪಾಟೀಲ್, ’ಸೂರತ್ ಬಿಜೆಪಿ ಇಂತಹ 5,000 ಚುಚ್ಚುಮದ್ದಿನ ವ್ಯವಸ್ಥೆ ಮಾಡಿದ್ದು, ಅಗತ್ಯವಿರುವವರು ವೈಯಕ್ತಿಕವಾಗಿ ಸೂರತ್ ಬಿಜೆಪಿ ಕಚೇರಿಗೆ ಬಂದು ತೆಗೆದುಕೊಳ್ಳಬಹುದು. ಕೊರೊನಾ ಸೋಂಕಿತ ರೋಗಿಗಳ ವೈದ್ಯಕೀಯ ಚಿಕಿತ್ಸಾ ದಾಖಲೆಗಳು, ಆಧಾರ್ ಕಾರ್ಡ್ ಮತ್ತು ರೆಮ್‌ಡೆಸಿವಿರ್‌ ಚುಚ್ಚುಮದ್ದಿನ ವೈದ್ಯರ ಚೀಟಿಯೊಂದಿಗೆ ಬರಬೇಕು’ ಎಂದು ಶುಕ್ರವಾರ ಘೋಷಿಸಿದ್ದರು.

ಇದನ್ನೂ ಓದಿ: ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೂರತ್ ನಗರದ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಜಂಜ್‌ಮೆರಾ, “ಮುಂದಿನ ಐದು ದಿನಗಳವರೆಗೆ ಪ್ರತಿದಿನ 1,000 ಇಂತಹ ಚುಚ್ಚುಮದ್ದನ್ನು ನಾವು ಪಡೆಯುತ್ತೇವೆ. ಈಂದು ಮೊದಲ ದಿನ 1000 ಚುಚ್ಚುಮದ್ದು ಪಡೆದಿದ್ದೇವೆ. ಅದರಲ್ಲಿ 100 ಅನ್ನು ನವಸರಿ ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಸೂರತ್ ನಗರದ ಬಿಜೆಪಿ ಕಚೇರಿಯಿಂದ ನಾವು ಅಂತಹ 900 ಚುಚ್ಚುಮದ್ದನ್ನು ವಿತರಿಸಿದ್ದೇವೆ” ಎಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರತಿಪಕ್ಷಗಳಾದ ಕಾಂಗ್ರೆಸ್, ಎನ್‌ಸಿಪಿ ಮತ್ತು ಆಮ್ ಆದ್ಮಿ ಪಕ್ಷ ಬಿಜೆಪಿಯ ಈ ನಡೆಯ್ನು ಖಂಡಿಸಿದೆ. ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗಳನ್ನು ಸಂಗ್ರಹಣೆ ಮಾಡಿದ ಆರೋಪದ ಮೇಲೆ ಬಿಜೆಪಿಯ ಗುಜರಾತ್ ಘಟಕವನ್ನು ಟ್ವೀಟ್ ಮೂಲಕ ದೂಷಿಸಿದೆ.

ಬಿಜೆಪಿಯ ಸೂರತ್ ಘಟಕವು ರಾಜ್ಯದಲ್ಲಿ ಲಸಿಕೆ ಕೊರತೆಯ ಮಧ್ಯೆ 5000 ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಖರೀದಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಗುಜರಾತ್ ಸಿಎಂ ವಿಜಯ್ ರೂಪಾನಿ, ಬಿಜೆಪಿಯ ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗಳನ್ನು ಸಂಗ್ರಹವು ಸರ್ಕಾರಿ ಷೇರುಗಳ ಭಾಗದಿಂದ ಬಂದಿಲ್ಲ ಎಂದು ಹೇಳಿದ್ದಾರೆ.

ಇತ್ತಿಚೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷದ ಒಳಗಿರುವ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿತ್ತು. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಇದರ ಜೊತೆಗೆ ಗುಜರಾತ್ ಬಿಜೆಪಿ ಘಟಕದ ಇಂಜೆಕ್ಷನ್ ವಿತರಣೆ ವಿಚಾರ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.


ಇದನ್ನೂ ಓದಿ: ಕೊರೊನಾ ರಾತ್ರಿ ವೇಳೆ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದ: ಡಿ.ಕೆ. ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...