Homeಮುಖಪುಟಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇತ್ತಿಚೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷದ ಒಳಗಿರುವ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದರು

- Advertisement -
- Advertisement -

ದೇಶದಲ್ಲಿ ಕೊರೊನಾ ಉಲ್ಬಣಕ್ಕಿಂತ ಕೊರೊನಾ ಲಸಿಕೆ ಕೊರತೆಯದ್ದೇ ಸುದ್ದಿ ಹೆಚ್ಚಾಗಿದೆ. ದೇಶಕ್ಕೆ ಲಸಿಕೆ ಅಗತ್ಯವಿದ್ದರೂ ವಿದೇಶಗಳಿಗೆ ಲಸಿಕೆ ರಫ್ತು ಮಾಡಿರುವ ಕೇಂದ್ರದ ವಿರುದ್ಧ ವಿರೋಧ ಪಕ್ಷಗಳು ಮುಗಿಬಿದ್ದಿವೆ. ಇವುಗಳ ನಡುವೆಯೇ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಕಚೇರಿಯಲ್ಲಿ 900 ರೆಮ್‌ಡೆಸಿವಿರ್‌ ಇಂಜೆಕ್ಷನ್‌ಗಳನ್ನು ವಿತರಿಸಲಾಗಿದೆ.

ಜೊತೆಗೆ 100 ಚುಚ್ಚುಮದ್ದನ್ನು ನವಸರಿ ಬಿಜೆಪಿ ಕಚೇರಿಯಿಂದ ಅದೇ ದಿನ ಅಗತ್ಯವಿರುವ ಕೊರೊನಾ ರೋಗಿಗಳ ಸಂಬಂಧಿಕರಿಗೆ ವಿತರಿಸಲಾಗಿದೆ. ಈ ವಿಷಯ ದೇಶದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಆಮ್ ಆದ್ಮಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಸರ್ಕಾರದ ಈ ನಡೆಯನ್ನು ಖಂಡಿಸಿದೆ.

ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್ ಪಾಟೀಲ್, ’ಸೂರತ್ ಬಿಜೆಪಿ ಇಂತಹ 5,000 ಚುಚ್ಚುಮದ್ದಿನ ವ್ಯವಸ್ಥೆ ಮಾಡಿದ್ದು, ಅಗತ್ಯವಿರುವವರು ವೈಯಕ್ತಿಕವಾಗಿ ಸೂರತ್ ಬಿಜೆಪಿ ಕಚೇರಿಗೆ ಬಂದು ತೆಗೆದುಕೊಳ್ಳಬಹುದು. ಕೊರೊನಾ ಸೋಂಕಿತ ರೋಗಿಗಳ ವೈದ್ಯಕೀಯ ಚಿಕಿತ್ಸಾ ದಾಖಲೆಗಳು, ಆಧಾರ್ ಕಾರ್ಡ್ ಮತ್ತು ರೆಮ್‌ಡೆಸಿವಿರ್‌ ಚುಚ್ಚುಮದ್ದಿನ ವೈದ್ಯರ ಚೀಟಿಯೊಂದಿಗೆ ಬರಬೇಕು’ ಎಂದು ಶುಕ್ರವಾರ ಘೋಷಿಸಿದ್ದರು.

ಇದನ್ನೂ ಓದಿ: ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೂರತ್ ನಗರದ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಜಂಜ್‌ಮೆರಾ, “ಮುಂದಿನ ಐದು ದಿನಗಳವರೆಗೆ ಪ್ರತಿದಿನ 1,000 ಇಂತಹ ಚುಚ್ಚುಮದ್ದನ್ನು ನಾವು ಪಡೆಯುತ್ತೇವೆ. ಈಂದು ಮೊದಲ ದಿನ 1000 ಚುಚ್ಚುಮದ್ದು ಪಡೆದಿದ್ದೇವೆ. ಅದರಲ್ಲಿ 100 ಅನ್ನು ನವಸರಿ ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಸೂರತ್ ನಗರದ ಬಿಜೆಪಿ ಕಚೇರಿಯಿಂದ ನಾವು ಅಂತಹ 900 ಚುಚ್ಚುಮದ್ದನ್ನು ವಿತರಿಸಿದ್ದೇವೆ” ಎಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರತಿಪಕ್ಷಗಳಾದ ಕಾಂಗ್ರೆಸ್, ಎನ್‌ಸಿಪಿ ಮತ್ತು ಆಮ್ ಆದ್ಮಿ ಪಕ್ಷ ಬಿಜೆಪಿಯ ಈ ನಡೆಯ್ನು ಖಂಡಿಸಿದೆ. ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗಳನ್ನು ಸಂಗ್ರಹಣೆ ಮಾಡಿದ ಆರೋಪದ ಮೇಲೆ ಬಿಜೆಪಿಯ ಗುಜರಾತ್ ಘಟಕವನ್ನು ಟ್ವೀಟ್ ಮೂಲಕ ದೂಷಿಸಿದೆ.

ಬಿಜೆಪಿಯ ಸೂರತ್ ಘಟಕವು ರಾಜ್ಯದಲ್ಲಿ ಲಸಿಕೆ ಕೊರತೆಯ ಮಧ್ಯೆ 5000 ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಖರೀದಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಗುಜರಾತ್ ಸಿಎಂ ವಿಜಯ್ ರೂಪಾನಿ, ಬಿಜೆಪಿಯ ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗಳನ್ನು ಸಂಗ್ರಹವು ಸರ್ಕಾರಿ ಷೇರುಗಳ ಭಾಗದಿಂದ ಬಂದಿಲ್ಲ ಎಂದು ಹೇಳಿದ್ದಾರೆ.

ಇತ್ತಿಚೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷದ ಒಳಗಿರುವ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿತ್ತು. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಇದರ ಜೊತೆಗೆ ಗುಜರಾತ್ ಬಿಜೆಪಿ ಘಟಕದ ಇಂಜೆಕ್ಷನ್ ವಿತರಣೆ ವಿಚಾರ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.


ಇದನ್ನೂ ಓದಿ: ಕೊರೊನಾ ರಾತ್ರಿ ವೇಳೆ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದ: ಡಿ.ಕೆ. ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...