Homeಮುಖಪುಟಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇತ್ತಿಚೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷದ ಒಳಗಿರುವ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದರು

- Advertisement -
- Advertisement -

ದೇಶದಲ್ಲಿ ಕೊರೊನಾ ಉಲ್ಬಣಕ್ಕಿಂತ ಕೊರೊನಾ ಲಸಿಕೆ ಕೊರತೆಯದ್ದೇ ಸುದ್ದಿ ಹೆಚ್ಚಾಗಿದೆ. ದೇಶಕ್ಕೆ ಲಸಿಕೆ ಅಗತ್ಯವಿದ್ದರೂ ವಿದೇಶಗಳಿಗೆ ಲಸಿಕೆ ರಫ್ತು ಮಾಡಿರುವ ಕೇಂದ್ರದ ವಿರುದ್ಧ ವಿರೋಧ ಪಕ್ಷಗಳು ಮುಗಿಬಿದ್ದಿವೆ. ಇವುಗಳ ನಡುವೆಯೇ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಕಚೇರಿಯಲ್ಲಿ 900 ರೆಮ್‌ಡೆಸಿವಿರ್‌ ಇಂಜೆಕ್ಷನ್‌ಗಳನ್ನು ವಿತರಿಸಲಾಗಿದೆ.

ಜೊತೆಗೆ 100 ಚುಚ್ಚುಮದ್ದನ್ನು ನವಸರಿ ಬಿಜೆಪಿ ಕಚೇರಿಯಿಂದ ಅದೇ ದಿನ ಅಗತ್ಯವಿರುವ ಕೊರೊನಾ ರೋಗಿಗಳ ಸಂಬಂಧಿಕರಿಗೆ ವಿತರಿಸಲಾಗಿದೆ. ಈ ವಿಷಯ ದೇಶದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಆಮ್ ಆದ್ಮಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಸರ್ಕಾರದ ಈ ನಡೆಯನ್ನು ಖಂಡಿಸಿದೆ.

ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್ ಪಾಟೀಲ್, ’ಸೂರತ್ ಬಿಜೆಪಿ ಇಂತಹ 5,000 ಚುಚ್ಚುಮದ್ದಿನ ವ್ಯವಸ್ಥೆ ಮಾಡಿದ್ದು, ಅಗತ್ಯವಿರುವವರು ವೈಯಕ್ತಿಕವಾಗಿ ಸೂರತ್ ಬಿಜೆಪಿ ಕಚೇರಿಗೆ ಬಂದು ತೆಗೆದುಕೊಳ್ಳಬಹುದು. ಕೊರೊನಾ ಸೋಂಕಿತ ರೋಗಿಗಳ ವೈದ್ಯಕೀಯ ಚಿಕಿತ್ಸಾ ದಾಖಲೆಗಳು, ಆಧಾರ್ ಕಾರ್ಡ್ ಮತ್ತು ರೆಮ್‌ಡೆಸಿವಿರ್‌ ಚುಚ್ಚುಮದ್ದಿನ ವೈದ್ಯರ ಚೀಟಿಯೊಂದಿಗೆ ಬರಬೇಕು’ ಎಂದು ಶುಕ್ರವಾರ ಘೋಷಿಸಿದ್ದರು.

ಇದನ್ನೂ ಓದಿ: ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೂರತ್ ನಗರದ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಜಂಜ್‌ಮೆರಾ, “ಮುಂದಿನ ಐದು ದಿನಗಳವರೆಗೆ ಪ್ರತಿದಿನ 1,000 ಇಂತಹ ಚುಚ್ಚುಮದ್ದನ್ನು ನಾವು ಪಡೆಯುತ್ತೇವೆ. ಈಂದು ಮೊದಲ ದಿನ 1000 ಚುಚ್ಚುಮದ್ದು ಪಡೆದಿದ್ದೇವೆ. ಅದರಲ್ಲಿ 100 ಅನ್ನು ನವಸರಿ ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಸೂರತ್ ನಗರದ ಬಿಜೆಪಿ ಕಚೇರಿಯಿಂದ ನಾವು ಅಂತಹ 900 ಚುಚ್ಚುಮದ್ದನ್ನು ವಿತರಿಸಿದ್ದೇವೆ” ಎಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರತಿಪಕ್ಷಗಳಾದ ಕಾಂಗ್ರೆಸ್, ಎನ್‌ಸಿಪಿ ಮತ್ತು ಆಮ್ ಆದ್ಮಿ ಪಕ್ಷ ಬಿಜೆಪಿಯ ಈ ನಡೆಯ್ನು ಖಂಡಿಸಿದೆ. ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗಳನ್ನು ಸಂಗ್ರಹಣೆ ಮಾಡಿದ ಆರೋಪದ ಮೇಲೆ ಬಿಜೆಪಿಯ ಗುಜರಾತ್ ಘಟಕವನ್ನು ಟ್ವೀಟ್ ಮೂಲಕ ದೂಷಿಸಿದೆ.

ಬಿಜೆಪಿಯ ಸೂರತ್ ಘಟಕವು ರಾಜ್ಯದಲ್ಲಿ ಲಸಿಕೆ ಕೊರತೆಯ ಮಧ್ಯೆ 5000 ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಖರೀದಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಗುಜರಾತ್ ಸಿಎಂ ವಿಜಯ್ ರೂಪಾನಿ, ಬಿಜೆಪಿಯ ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗಳನ್ನು ಸಂಗ್ರಹವು ಸರ್ಕಾರಿ ಷೇರುಗಳ ಭಾಗದಿಂದ ಬಂದಿಲ್ಲ ಎಂದು ಹೇಳಿದ್ದಾರೆ.

ಇತ್ತಿಚೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷದ ಒಳಗಿರುವ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿತ್ತು. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಇದರ ಜೊತೆಗೆ ಗುಜರಾತ್ ಬಿಜೆಪಿ ಘಟಕದ ಇಂಜೆಕ್ಷನ್ ವಿತರಣೆ ವಿಚಾರ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.


ಇದನ್ನೂ ಓದಿ: ಕೊರೊನಾ ರಾತ್ರಿ ವೇಳೆ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದ: ಡಿ.ಕೆ. ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...