Homeಮುಖಪುಟಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ಇತ್ತಿಚೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷದ ಒಳಗಿರುವ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದರು

- Advertisement -
- Advertisement -

ದೇಶದಲ್ಲಿ ಕೊರೊನಾ ಉಲ್ಬಣಕ್ಕಿಂತ ಕೊರೊನಾ ಲಸಿಕೆ ಕೊರತೆಯದ್ದೇ ಸುದ್ದಿ ಹೆಚ್ಚಾಗಿದೆ. ದೇಶಕ್ಕೆ ಲಸಿಕೆ ಅಗತ್ಯವಿದ್ದರೂ ವಿದೇಶಗಳಿಗೆ ಲಸಿಕೆ ರಫ್ತು ಮಾಡಿರುವ ಕೇಂದ್ರದ ವಿರುದ್ಧ ವಿರೋಧ ಪಕ್ಷಗಳು ಮುಗಿಬಿದ್ದಿವೆ. ಇವುಗಳ ನಡುವೆಯೇ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಕಚೇರಿಯಲ್ಲಿ 900 ರೆಮ್‌ಡೆಸಿವಿರ್‌ ಇಂಜೆಕ್ಷನ್‌ಗಳನ್ನು ವಿತರಿಸಲಾಗಿದೆ.

ಜೊತೆಗೆ 100 ಚುಚ್ಚುಮದ್ದನ್ನು ನವಸರಿ ಬಿಜೆಪಿ ಕಚೇರಿಯಿಂದ ಅದೇ ದಿನ ಅಗತ್ಯವಿರುವ ಕೊರೊನಾ ರೋಗಿಗಳ ಸಂಬಂಧಿಕರಿಗೆ ವಿತರಿಸಲಾಗಿದೆ. ಈ ವಿಷಯ ದೇಶದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಆಮ್ ಆದ್ಮಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಸರ್ಕಾರದ ಈ ನಡೆಯನ್ನು ಖಂಡಿಸಿದೆ.

ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್ ಪಾಟೀಲ್, ’ಸೂರತ್ ಬಿಜೆಪಿ ಇಂತಹ 5,000 ಚುಚ್ಚುಮದ್ದಿನ ವ್ಯವಸ್ಥೆ ಮಾಡಿದ್ದು, ಅಗತ್ಯವಿರುವವರು ವೈಯಕ್ತಿಕವಾಗಿ ಸೂರತ್ ಬಿಜೆಪಿ ಕಚೇರಿಗೆ ಬಂದು ತೆಗೆದುಕೊಳ್ಳಬಹುದು. ಕೊರೊನಾ ಸೋಂಕಿತ ರೋಗಿಗಳ ವೈದ್ಯಕೀಯ ಚಿಕಿತ್ಸಾ ದಾಖಲೆಗಳು, ಆಧಾರ್ ಕಾರ್ಡ್ ಮತ್ತು ರೆಮ್‌ಡೆಸಿವಿರ್‌ ಚುಚ್ಚುಮದ್ದಿನ ವೈದ್ಯರ ಚೀಟಿಯೊಂದಿಗೆ ಬರಬೇಕು’ ಎಂದು ಶುಕ್ರವಾರ ಘೋಷಿಸಿದ್ದರು.

ಇದನ್ನೂ ಓದಿ: ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೂರತ್ ನಗರದ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಜಂಜ್‌ಮೆರಾ, “ಮುಂದಿನ ಐದು ದಿನಗಳವರೆಗೆ ಪ್ರತಿದಿನ 1,000 ಇಂತಹ ಚುಚ್ಚುಮದ್ದನ್ನು ನಾವು ಪಡೆಯುತ್ತೇವೆ. ಈಂದು ಮೊದಲ ದಿನ 1000 ಚುಚ್ಚುಮದ್ದು ಪಡೆದಿದ್ದೇವೆ. ಅದರಲ್ಲಿ 100 ಅನ್ನು ನವಸರಿ ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಸೂರತ್ ನಗರದ ಬಿಜೆಪಿ ಕಚೇರಿಯಿಂದ ನಾವು ಅಂತಹ 900 ಚುಚ್ಚುಮದ್ದನ್ನು ವಿತರಿಸಿದ್ದೇವೆ” ಎಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರತಿಪಕ್ಷಗಳಾದ ಕಾಂಗ್ರೆಸ್, ಎನ್‌ಸಿಪಿ ಮತ್ತು ಆಮ್ ಆದ್ಮಿ ಪಕ್ಷ ಬಿಜೆಪಿಯ ಈ ನಡೆಯ್ನು ಖಂಡಿಸಿದೆ. ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗಳನ್ನು ಸಂಗ್ರಹಣೆ ಮಾಡಿದ ಆರೋಪದ ಮೇಲೆ ಬಿಜೆಪಿಯ ಗುಜರಾತ್ ಘಟಕವನ್ನು ಟ್ವೀಟ್ ಮೂಲಕ ದೂಷಿಸಿದೆ.

ಬಿಜೆಪಿಯ ಸೂರತ್ ಘಟಕವು ರಾಜ್ಯದಲ್ಲಿ ಲಸಿಕೆ ಕೊರತೆಯ ಮಧ್ಯೆ 5000 ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಖರೀದಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಗುಜರಾತ್ ಸಿಎಂ ವಿಜಯ್ ರೂಪಾನಿ, ಬಿಜೆಪಿಯ ರೆಮ್‌ಡಿಸಿವಿರ್‌ ಇಂಜೆಕ್ಷನ್‌ಗಳನ್ನು ಸಂಗ್ರಹವು ಸರ್ಕಾರಿ ಷೇರುಗಳ ಭಾಗದಿಂದ ಬಂದಿಲ್ಲ ಎಂದು ಹೇಳಿದ್ದಾರೆ.

ಇತ್ತಿಚೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷದ ಒಳಗಿರುವ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿತ್ತು. ಪ್ರಸ್ತುತ 45 ವರ್ಷಕ್ಕಿಂತ ಮೇಲಿನವರಿಗೆ ಮಾತ್ರ ಲಸಿಕೆ ನೀಡಬೇಕು ಎಂಬ ಭಾರತ ಸರ್ಕಾರದ ನಿಯಮವನ್ನು ಮೀರಿ ವಿದ್ಯಾರ್ಥಿಗಳು ಕೊರೊನಾ ಲಸಿಕೆ ಪಡೆದಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಇದರ ಜೊತೆಗೆ ಗುಜರಾತ್ ಬಿಜೆಪಿ ಘಟಕದ ಇಂಜೆಕ್ಷನ್ ವಿತರಣೆ ವಿಚಾರ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.


ಇದನ್ನೂ ಓದಿ: ಕೊರೊನಾ ರಾತ್ರಿ ವೇಳೆ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದ: ಡಿ.ಕೆ. ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...