Homeಕರ್ನಾಟಕಬಿಜೆಪಿ ಜಿಲ್ಲಾಧ್ಯಕ್ಷರ ಆಮಿಷ: ಪಕ್ಷಕ್ಕೆ ಬಂದರೆ ಅಧ್ಯಕ್ಷ ಪದವಿ ಗ್ಯಾರೆಂಟಿ ಎಂದ ಬಿ.ಸುರೇಶ್ ಗೌಡ

ಬಿಜೆಪಿ ಜಿಲ್ಲಾಧ್ಯಕ್ಷರ ಆಮಿಷ: ಪಕ್ಷಕ್ಕೆ ಬಂದರೆ ಅಧ್ಯಕ್ಷ ಪದವಿ ಗ್ಯಾರೆಂಟಿ ಎಂದ ಬಿ.ಸುರೇಶ್ ಗೌಡ

- Advertisement -
- Advertisement -

ತುಮಕೂರು ಗ್ರಾಮಾಂತರದ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಬಿ.ಸುರೇಶ್ ಗೌಡ ಬಿಜೆಪಿ ಪಕ್ಷಕ್ಕೆ ಬಂದರೆ ಅಧ್ಯಕ್ಷ ಪದವಿ ಕೊಡಿಸುವ ಭರವಸೆ ನೀಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸುಮಾರು ಮೂರುವರೆ ನಿಮಿಷವಿರುವ ಈ ಆಡಿಯೋದಲ್ಲಿ ಬಿ.ಸುರೇಶ್ ಗೌಡ ಗ್ರಾಮ ಪಂಚಾಯ್ತಿ ಸದಸ್ಯ ರವಿ ಎಂಬುವರೊಂದಿಗೆ ಮಾತನಾಡಿರುವುದು ತಿಳಿದುಬರುತ್ತದೆ. “ನೀನು ಅಲ್ಲೇನಿರ್ತೀಯಾ, ನಮ್ಮ ಪಕ್ಷಕ್ಕೆ ಬಾ, ಅಲ್ಲಿದ್ರೆ ನೀನು ಏನೂ ಆಗೋಕೆ ಆಗೊಲ್ಲ. ನೀನು ಬಿಜೆಪಿಗೆ ಬಂದ್ರೆ ಅಧ್ಯಕ್ಷ ಆಗ್ತೀಯ. ನಾನು ನಿನಗೆ ಮಾತು ಕೊಡುತ್ತೇನೆ” ಎಂಬ ಸಂಭಾಷಣೆ ಆಡಿಯೋದಲ್ಲಿದೆ.

ಇದನ್ನೂ ಓದಿ:ತುಮಕೂರು: ಬೌದ್ಧ ಧರ್ಮ ಸ್ವೀಕಾರ ಮಾಡಿದ 250 ದಲಿತರು

ಮುಂದೆ ವಿಷಯ ನಾಸಿರ್ ಎಂಬುವರ ಕಡೆ ಹೊರಳುತ್ತದೆ. “ಆ ಸಾಬಿ ಇದಾನಲ್ಲ, ಅವನೆಸರು ಏನೇಳು? ಅದೇನಪ್ಪ ಅವನು, ನಾಸಿರ್. ಅವ್ನು ಕುಮಾರಸ್ವಾಮಿ ಗೊತ್ತು, ರೇವಣ್ಣ ಗೊತ್ತು, ದೇವೇಗೌಡ ಗೊತ್ತ ಅಂತ ನಿಮ್ಮ ಶಾಸಕ ಅವ್ನಲ್ಲ, ಅವ್ನು ಮಾತು ಕೇಳ್ತನಲ್ಲ ನಾಸಿರ್, ಅವ್ನು ಇರೋವರೆಗೂ ನೀನು ಏನೂ ಆಗೋಕೆ ಬಿಡಲ್ಲ. ಸುಮ್ನೆ ಬಂದು ಬಿಡು. ನೀನು ಅಧ್ಯಕ್ಷ ಆಗ್ತೀಯಾ” ಎಂದು ಆಮಿಷ ನೀಡಲಾಗಿದೆ.

ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಬೆಂಬಲಿತ ಶೇಖರ್ ಅನ್ನೋರಿಗೆ ಓಟು ಹಾಕಬೇಡಿ. ಅವ್ನು ಸೋಲ್ತಾನೆ ಅಂತ ಹೇಳಿದ್ದೆ. ಸೀಕ್ರೇಟ್ ಅಂದ್ರೆ ಸೀಕ್ರೇಟ್. ಅದು ಎಲ್ಲೂ ಹೇಳ್ಕೊಬ್ಯಾಡ್ರಿ. ನಾನೇ ಶೇಖರ್ ನನ್ನ ಸೋಲ್ಸಿದೆ ಅಂತಾ ಗೊತ್ತಾದ್ರೆ, ಊರಾಕೆ ಬರೋಕಾಗುತ್ತ, ಮರ್ಯಾದೆ ಹೋಗುತ್ತೆ. ಒಂದ್ ಕೆಲ್ಸ ಮಾಡು ನಮ್ಮ ಕಡೆ ಬಂದು ಬಿಡು ಸಹಾಯ ಮಾಡ್ತೀನಿ. ಅಧ್ಯಕ್ಷನು ಆಗ್ತೀಯ. ನಂಬಿಕೆ ಇದ್ರೆ ಬಾ, ಗೊತ್ತಾಯ್ತ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾಗಿ ವೈರಲ್ ಆಗಿದೆ.

ಇದನ್ನೂ ಓದಿ: ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...