Homeಕರ್ನಾಟಕ`ಕಾಶ್ಮೀರ್‌ ಫೈಲ್ಸ್‌'ಗೆ ತೆರಿಗೆ ವಿನಾಯಿತಿ ನೀಡುವ ಸಿಎಂಗೆ ‘ಜೇಮ್ಸ್’ ನೆನಪಾಗಲಿಲ್ಲವೇ?: ಸಿದ್ದರಾಮಯ್ಯ ಪ್ರಶ್ನೆ

`ಕಾಶ್ಮೀರ್‌ ಫೈಲ್ಸ್‌’ಗೆ ತೆರಿಗೆ ವಿನಾಯಿತಿ ನೀಡುವ ಸಿಎಂಗೆ ‘ಜೇಮ್ಸ್’ ನೆನಪಾಗಲಿಲ್ಲವೇ?: ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಪ್ರತಿಯೊಬ್ಬ ಕನ್ನಡಿಗನೂ ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ ‘ಕಾಶ್ಮೀರಿ ಫೈಲ್ಸ್’ ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಚಿತ್ರಮಂದಿರಗಳ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು, “ಜೇಮ್ಸ್ ಚಿತ್ರದ ನಿರ್ಮಾಪಕರು ನನ್ನನ್ನು ಭೇಟಿಯಾಗಿ ತಿಳಿಸಿದ ವಿಷಯ ಆಘಾತಕಾರಿಯಾದುದು. ಅವರು ತಿಂಗಳುಗಳ ಹಿಂದೆಯೇ ಚಿತ್ರ ಪ್ರದರ್ಶನಕ್ಕೆ ಚಿತ್ರಮಂದಿರಗಳನ್ನು ಬುಕ್ ಮಾಡಿ ಮುಂಗಡ ಹಣವನ್ನೂ ಪಾವತಿಸಿದ್ದಾರೆ. ಚಿತ್ರ ಹೌಸ್ ಪುಲ್ ಆಗಿ ಓಡುತ್ತಿದ್ದರೂ ಪ್ರದರ್ಶನ ನಿಲ್ಲಿಸುವಂತೆ ಬಲವಂತ ಮಾಡುತ್ತಿರುವುದು ಅನ್ಯಾಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ಪ್ರಶ್ನೆ ಮತ್ತು ಸುಪ್ರೀಂ ತೀರ್ಪು

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಮಧ್ಯಪ್ರವೇಶಿಸಿ ಜೇಮ್ಸ್ ಚಿತ್ರದ ಪ್ರದರ್ಶನಕ್ಕೆ ತಡೆಯೊಡ್ಡುತ್ತಿರುವುದರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಇದಕ್ಕೆ ತಪ್ಪಿದಲ್ಲಿ ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಲು ನಡೆಯುತ್ತಿರುವ ಹುನ್ನಾರದಲ್ಲಿ ರಾಜ್ಯ ಸರ್ಕಾರವೂ ಷಾಮೀಲಾಗಿದೆ ಎಂದು ತಿಳಿದುಕೊಳ್ಳಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

“ಪುನೀತ್ ರಾಜ್ ಕುಮಾರ್ ಅಗಲಿಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಬಿಜೆಪಿ ಶಾಸಕರು ಮತ್ತು ನಾಯಕರು ಕಣ್ಣೀರು ಸುರಿಸಿದ್ದಾರೆ, ಅಪಾರ ಶೋಕ ವ್ಯಕ್ತಪಡಿಸಿದ್ದಾರೆ. ಆ ಎಲ್ಲ ಭಾವನೆಗಳು ಪ್ರಾಮಾಣಿಕವಾದುದೆಂದು ನಾನು ನಂಬಿದ್ದೇನೆ. ಅದನ್ನು ಸಾಬೀತುಪಡಿಸುವ ಕಾಲ ಈಗ ಬಂದಿದೆ” ಎಂದು ಅವರು ಹೇಳಿದ್ದಾರೆ.

“ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಉಂಟು ಮಾಡುತ್ತಿರುವುದು ಕೇವಲ ಪುನೀತ್ ರಾಜ್ ಕುಮಾರ್ ಅವರಿಗೆ ಮಾಡುತ್ತಿರುವ ದ್ರೋಹ ಮಾತ್ರವಲ್ಲ ಸಮಸ್ತ ಕನ್ನಡಿಗರಿಗೆ ಮಾಡುತ್ತಿರುವ ಅವಮಾನವೂ ಹೌದು. ಈ ಅನ್ಯಾಯವನ್ನು ಖಂಡಿಸಿ ಕನ್ನಡಿಗರೆಲ್ಲರೂ ಬೀದಿಗೆ ಇಳಿಯುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಂಡರೆ ಒಳಿತು” ಎಂದು ಅವರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

“ಪುನೀತ್ ರಾಜ್ ಕುಮಾರ್ ಇಡೀ ವಿಶ್ವ ಕೊಂಡಾಡುತ್ತಿರುವ ಕನ್ನಡದ ಹೆಮ್ಮೆಯ ನಟ. ನಟನೆಯಿಂದ ಮಾತ್ರವಲ್ಲ ಸದ್ದಿಲ್ಲದೆ ಮಾಡಿದ ಸಮಾಜಮುಖಿ ಕೆಲಸಗಳಿಂದಲೂ ಜನಮನ ಗೆದ್ದಿರುವ ಅಪರೂಪದ ವ್ಯಕ್ತಿ. ಇವರ ಕೊನೆಯ ಚಿತ್ರವನ್ನು ವೀಕ್ಷಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲು ಜನ ಸಿದ್ಧವಾಗಿದ್ದಾರೆ.
ಕಾಶ್ಮೀರಿ ಫೈಲ್ಸ್ ಇರಲಿ, ಇನ್ನೊಂದಿರಲಿ. ಒಂದು ಚಿತ್ರವನ್ನು ಬಲವಂತದಿಂದ ಪ್ರದರ್ಶನ ಮಾಡಿ ಜನ ನೋಡುವಂತೆ ಒತ್ತಡ ಹೇರುವುದು ಸರಿ ಅಲ್ಲ” ಎಂದು ಅವರು ಹೇಳಿದ್ದಾರೆ.

“ಗಾಂಧೀಜಿ ಬಗ್ಗೆಯೂ ಚಿತ್ರ ಬಂದಿದೆ. ಇತ್ತೀಚೆಗೆ ಜೈಭೀಮ್ ಎಂಬ ಚಿತ್ರವೂ ಬಂದಿದೆ. ಅವುಗಳನ್ನು ನೋಡಬೇಕೆಂದು ಯಾರಾದರೂ ಬಲವಂತ ಮಾಡಿದ್ದಾರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಪುನೀತ್ ರಾಜ್ ಕುಮಾರ್ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ಕನ್ನಡಿಗರೆಲ್ಲರೂ ನೋಡಲು ಪ್ರೋತ್ಸಾಹ ನೀಡಬೇಕಾಗಿತ್ತು. ಕಾಶ್ಮೀರಿ ಫೈಲ್ಸ್ ಎಂಬ ಹಿಂದಿ ಸಿನೆಮಾಕ್ಕೆ ತೆರಿಗೆ ವಿನಾಯಿತಿ ನೀಡುವಾಗ ಕನ್ನಡಿಗನೆಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳಿಗೆ ಕನ್ನಡದ ಜೇಮ್ಸ್ ನೆನಪಾಗಲಿಲ್ಲವೇ? ತೆರಿಗೆ ವಿನಾಯಿತಿಗೆ ಈಗಲೂ ಕಾಲ ಮಿಂಚಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾಜಪದವರು ಕಾಶ್ಮೀರಿ ಫ಼ೈಲ್ಸ್ ಚಿತ್ರಕ್ಕೆ ಜನಗಳು ಬರದೇ ಇರೋದು ನೋಡಿ ಹುಚ್ಚರಾಗಿದ್ದಾರೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...