Homeಕರ್ನಾಟಕ`ಕಾಶ್ಮೀರ್‌ ಫೈಲ್ಸ್‌'ಗೆ ತೆರಿಗೆ ವಿನಾಯಿತಿ ನೀಡುವ ಸಿಎಂಗೆ ‘ಜೇಮ್ಸ್’ ನೆನಪಾಗಲಿಲ್ಲವೇ?: ಸಿದ್ದರಾಮಯ್ಯ ಪ್ರಶ್ನೆ

`ಕಾಶ್ಮೀರ್‌ ಫೈಲ್ಸ್‌’ಗೆ ತೆರಿಗೆ ವಿನಾಯಿತಿ ನೀಡುವ ಸಿಎಂಗೆ ‘ಜೇಮ್ಸ್’ ನೆನಪಾಗಲಿಲ್ಲವೇ?: ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಪ್ರತಿಯೊಬ್ಬ ಕನ್ನಡಿಗನೂ ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ ‘ಕಾಶ್ಮೀರಿ ಫೈಲ್ಸ್’ ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಚಿತ್ರಮಂದಿರಗಳ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು, “ಜೇಮ್ಸ್ ಚಿತ್ರದ ನಿರ್ಮಾಪಕರು ನನ್ನನ್ನು ಭೇಟಿಯಾಗಿ ತಿಳಿಸಿದ ವಿಷಯ ಆಘಾತಕಾರಿಯಾದುದು. ಅವರು ತಿಂಗಳುಗಳ ಹಿಂದೆಯೇ ಚಿತ್ರ ಪ್ರದರ್ಶನಕ್ಕೆ ಚಿತ್ರಮಂದಿರಗಳನ್ನು ಬುಕ್ ಮಾಡಿ ಮುಂಗಡ ಹಣವನ್ನೂ ಪಾವತಿಸಿದ್ದಾರೆ. ಚಿತ್ರ ಹೌಸ್ ಪುಲ್ ಆಗಿ ಓಡುತ್ತಿದ್ದರೂ ಪ್ರದರ್ಶನ ನಿಲ್ಲಿಸುವಂತೆ ಬಲವಂತ ಮಾಡುತ್ತಿರುವುದು ಅನ್ಯಾಯ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ಪ್ರಶ್ನೆ ಮತ್ತು ಸುಪ್ರೀಂ ತೀರ್ಪು

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಮಧ್ಯಪ್ರವೇಶಿಸಿ ಜೇಮ್ಸ್ ಚಿತ್ರದ ಪ್ರದರ್ಶನಕ್ಕೆ ತಡೆಯೊಡ್ಡುತ್ತಿರುವುದರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಇದಕ್ಕೆ ತಪ್ಪಿದಲ್ಲಿ ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಲು ನಡೆಯುತ್ತಿರುವ ಹುನ್ನಾರದಲ್ಲಿ ರಾಜ್ಯ ಸರ್ಕಾರವೂ ಷಾಮೀಲಾಗಿದೆ ಎಂದು ತಿಳಿದುಕೊಳ್ಳಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

“ಪುನೀತ್ ರಾಜ್ ಕುಮಾರ್ ಅಗಲಿಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಬಿಜೆಪಿ ಶಾಸಕರು ಮತ್ತು ನಾಯಕರು ಕಣ್ಣೀರು ಸುರಿಸಿದ್ದಾರೆ, ಅಪಾರ ಶೋಕ ವ್ಯಕ್ತಪಡಿಸಿದ್ದಾರೆ. ಆ ಎಲ್ಲ ಭಾವನೆಗಳು ಪ್ರಾಮಾಣಿಕವಾದುದೆಂದು ನಾನು ನಂಬಿದ್ದೇನೆ. ಅದನ್ನು ಸಾಬೀತುಪಡಿಸುವ ಕಾಲ ಈಗ ಬಂದಿದೆ” ಎಂದು ಅವರು ಹೇಳಿದ್ದಾರೆ.

“ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಉಂಟು ಮಾಡುತ್ತಿರುವುದು ಕೇವಲ ಪುನೀತ್ ರಾಜ್ ಕುಮಾರ್ ಅವರಿಗೆ ಮಾಡುತ್ತಿರುವ ದ್ರೋಹ ಮಾತ್ರವಲ್ಲ ಸಮಸ್ತ ಕನ್ನಡಿಗರಿಗೆ ಮಾಡುತ್ತಿರುವ ಅವಮಾನವೂ ಹೌದು. ಈ ಅನ್ಯಾಯವನ್ನು ಖಂಡಿಸಿ ಕನ್ನಡಿಗರೆಲ್ಲರೂ ಬೀದಿಗೆ ಇಳಿಯುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಂಡರೆ ಒಳಿತು” ಎಂದು ಅವರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

“ಪುನೀತ್ ರಾಜ್ ಕುಮಾರ್ ಇಡೀ ವಿಶ್ವ ಕೊಂಡಾಡುತ್ತಿರುವ ಕನ್ನಡದ ಹೆಮ್ಮೆಯ ನಟ. ನಟನೆಯಿಂದ ಮಾತ್ರವಲ್ಲ ಸದ್ದಿಲ್ಲದೆ ಮಾಡಿದ ಸಮಾಜಮುಖಿ ಕೆಲಸಗಳಿಂದಲೂ ಜನಮನ ಗೆದ್ದಿರುವ ಅಪರೂಪದ ವ್ಯಕ್ತಿ. ಇವರ ಕೊನೆಯ ಚಿತ್ರವನ್ನು ವೀಕ್ಷಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲು ಜನ ಸಿದ್ಧವಾಗಿದ್ದಾರೆ.
ಕಾಶ್ಮೀರಿ ಫೈಲ್ಸ್ ಇರಲಿ, ಇನ್ನೊಂದಿರಲಿ. ಒಂದು ಚಿತ್ರವನ್ನು ಬಲವಂತದಿಂದ ಪ್ರದರ್ಶನ ಮಾಡಿ ಜನ ನೋಡುವಂತೆ ಒತ್ತಡ ಹೇರುವುದು ಸರಿ ಅಲ್ಲ” ಎಂದು ಅವರು ಹೇಳಿದ್ದಾರೆ.

“ಗಾಂಧೀಜಿ ಬಗ್ಗೆಯೂ ಚಿತ್ರ ಬಂದಿದೆ. ಇತ್ತೀಚೆಗೆ ಜೈಭೀಮ್ ಎಂಬ ಚಿತ್ರವೂ ಬಂದಿದೆ. ಅವುಗಳನ್ನು ನೋಡಬೇಕೆಂದು ಯಾರಾದರೂ ಬಲವಂತ ಮಾಡಿದ್ದಾರಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಪುನೀತ್ ರಾಜ್ ಕುಮಾರ್ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ಕನ್ನಡಿಗರೆಲ್ಲರೂ ನೋಡಲು ಪ್ರೋತ್ಸಾಹ ನೀಡಬೇಕಾಗಿತ್ತು. ಕಾಶ್ಮೀರಿ ಫೈಲ್ಸ್ ಎಂಬ ಹಿಂದಿ ಸಿನೆಮಾಕ್ಕೆ ತೆರಿಗೆ ವಿನಾಯಿತಿ ನೀಡುವಾಗ ಕನ್ನಡಿಗನೆಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳಿಗೆ ಕನ್ನಡದ ಜೇಮ್ಸ್ ನೆನಪಾಗಲಿಲ್ಲವೇ? ತೆರಿಗೆ ವಿನಾಯಿತಿಗೆ ಈಗಲೂ ಕಾಲ ಮಿಂಚಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾಜಪದವರು ಕಾಶ್ಮೀರಿ ಫ಼ೈಲ್ಸ್ ಚಿತ್ರಕ್ಕೆ ಜನಗಳು ಬರದೇ ಇರೋದು ನೋಡಿ ಹುಚ್ಚರಾಗಿದ್ದಾರೆ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...