Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ; ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ; ರಾಹುಲ್‌ ಗಾಂಧಿ

ಭಾರತ್ ಜೋಡೋ ನ್ಯಾಯ ಯಾತ್ರೆ; ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ ಯಾತ್ರೆ ಬಿಸ್ವನಾಥ್ ಜಿಲ್ಲೆಯ ರಾಜ್‌ಗಢದ ಮೂಲಕ ಎರಡನೇ ಬಾರಿಗೆ ಅಸ್ಸಾಂಗೆ ಪ್ರವೇಶಿದ್ದು, ಇಂದು ಯಾತ್ರೆ ನಾಗಾನ್ ಜಿಲ್ಲೆಯ ಕಡೆಗೆ ಸಾಗುತ್ತಿದೆ.

ನಿನ್ನೆ ರಾತ್ರಿ ಯಾತ್ರೆ ಸಾಗಿ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ವಾಸ್ತವ್ಯ ಹೂಡಲಾಗಿತ್ತು. ಅರುಣಾಚಲ ಪ್ರದೇಶದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ದಿವಂಗತ ತಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 1987ರಲ್ಲಿ ಅರುಣಾಚಲ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನ ನೀಡಿದ್ದರು. ಆದರೆ ಬಿಜೆಪಿ ರಾಜ್ಯದ ಜನರಿಗೆ ನಿರುದ್ಯೋಗ, ಬೆಲೆ ಏರಿಕೆ ಮತ್ತು ಜಿಎಸ್‌ಟಿಯ ಒತ್ತಡವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

ದೋಯಿಮುಖ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ಜಾತಿ, ಮತ, ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ. ಧರ್ಮ ಮತ್ತು ಭಾಷೆಯ ಹೆಸರಿನಲ್ಲಿ ಜಗಳವಾಡಲು ಜನರನ್ನು  ಪ್ರಚೋದಿಸುತ್ತದೆ. ಬಿಜೆಪಿಯು ಕೆಲವು ಉದ್ಯಮಿಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತದೆ.  ಕಷ್ಟದಲ್ಲಿರುವ ಜನರ ಹಿತಾಸಕ್ತಿಗಾಗಿ ಅಲ್ಲ. ಆದರೆ ಕಾಂಗ್ರೆಸ್ ಜನರನ್ನು ಒಗ್ಗೂಡಿಸಲು ಕೆಲಸ ಮಾಡುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ದೇಶದಲ್ಲಿ ನಿರುದ್ಯೋಗ ಸಮಸ್ಯೆಗೆ ಹೆಚ್ಚಳಕ್ಕೆ ಬಿಜೆಪಿ ಕಾರಣ. ಬಿಜೆಪಿ ಆಡಳಿತದಲ್ಲಿ ಸರ್ಕಾರವು ಜನರ ಕುಂದುಕೊರತೆಗಳನ್ನು ಆಲಿಸಲು ಸಿದ್ಧರಿಲ್ಲ. ಯಾತ್ರೆಯ ಸಮಯದಲ್ಲಿ ನಾನು ಬೆಳಿಗ್ಗೆಯಿಂದ ಸಂಜೆಯವರೆಗೆ ಹಲವಾರು ಗಂಟೆಗಳ ಕಾಲ ಪ್ರಯಾಣಿಸುತ್ತೇನೆ ಮತ್ತು ಜನರ ನೋವುಗಳಿಗೆ ಕಿವಿಯಾಗುತ್ತೇನೆ ಎಂದು ಹೇಳಿದ್ದಾರೆ.

ನಿನ್ನೆ ಸಂಜೆ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಅರುಣಾಚಲ ಪ್ರದೇಶವನ್ನು ಪ್ರವೇಶಿಸಿತ್ತು.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಕಾಲ್ನಡಿಗೆ ಮತ್ತು ಬಸ್ಸಿನಲ್ಲಿ ಸಾಗುತ್ತಿದ್ದು, ಗುರುವಾರದಿಂದ ಶನಿವಾರ ಮಧ್ಯಾಹ್ನದವರೆಗೆ ಅಸ್ಸಾಂನಲ್ಲಿ ಮೊದಲ ಹಂತದ ಪ್ರಯಾಣ ನಡೆದಿತ್ತು. ಆ ಬಳಿಕ ನೆರೆಯ ರಾಜ್ಯ ಅರುಣಾಚಲ ಪ್ರದೇಶವನ್ನು ಪ್ರವೇಶಿಸಿತ್ತು. ಅರುಣಾಚಲ ಪ್ರದೇಶದಲ್ಲಿ ರಾತ್ರಿ ವಾಸ್ತವ್ಯ ಹೂಡಲಾಗಿತ್ತು. ಅಸ್ಸಾಂ ರಾಜ್ಯಕ್ಕೆ ಎರಡನೇ ಬಾರಿ ಭೇಟಿ ನೀಡುತ್ತಿದ್ದಂತೆ ರಾಜ್ಯದಲ್ಲಿ ಯಾತ್ರೆಗೆ ಬೆಂಬಲ ನೀಡಿದ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ರಾಹುಲ್‌ ಗಾಂಧಿ ಸಭೆ ನಡೆಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಗುವಾಹಟಿ ಮೂಲಕ ತೆರಳಲು ಅನುಮತಿ ನಿರಾಕರಿಸಿದ್ದಾರೆ. ಮತ್ತು ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಲಖಿಂಪುರ ಜಿಲ್ಲೆಯ ಗೋಬಿಂದಾಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ನಾವು ಭಾರತ್‌ ಜೋಡೋ ಯಾತ್ರೆಗೆ ಸರಿಯಾದ ಮಾರ್ಗದಲ್ಲಿ  ಅನುಮತಿಗಳಿಗಾಗಿ ಅರ್ಜಿ ಸಲ್ಲಿಸಿದ್ದೇವೆ, ಆದರೆ ಸರ್ಕಾರಿ ಅಧಿಕಾರಿಗಳು ಅಪ್ರಸ್ತುತ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಹೇಗಾದರೂ ಮಾಡಿ ನಮ್ಮನ್ನು ತಡೆಯುವುದು ಅವರ ಉದ್ದೇಶವಾಗಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಇತ್ತೀಚಿನ ಗುವಾಹಟಿ ಭೇಟಿಯ ಸಂದರ್ಭದಲ್ಲಿ ಅವರು ತೆರಳಿದ ಅದೇ ಮಾರ್ಗದಲ್ಲಿ ಪ್ರಯಾಣಿಸಲು ನಾವು ಅಸ್ಸಾಂ ಸರ್ಕಾರವನ್ನು ವಿನಂತಿಸಿದ್ದೇವೆ ಎಂದು ಹೇಳಿದ್ದಾರೆ.

ಶನಿವಾರ ಅಸ್ಸಾಂನಲ್ಲಿ ಯಾತ್ರೆಯಲ್ಲಿ ತೆರಳುತ್ತಿದ್ದ ವಾಹನಗಳ ಮೇಲೆ ದಾಳಿ ನಡೆಸಲಾಗಿದೆ ಮತ್ತು ಉತ್ತರ ಲಖಿಂಪುರದಲ್ಲಿ ಬ್ಯಾನರ್‌ಗಳನ್ನು ಹರಿದು ಹಾಕಲಾಗಿದೆ. ದೇಶದಲ್ಲಿ ಬಿಜೆಪಿ ಆಡಳಿತವಿರುವ ಯಾವುದೇ  ರಾಜ್ಯಗಳು ಅಸ್ಸಾಂ ಸರ್ಕಾರದಂತೆ ಸಮಸ್ಯೆಗಳನ್ನು ಸೃಷ್ಟಿಸಿಲ್ಲ. ಜ.18ರಂದು ಯಾತ್ರೆಯು ಅಸ್ಸಾಂಗೆ ಪ್ರವೇಶಿಸಿದ ದಿನ ಜೋರ್ಹತ್ ಜಿಲ್ಲೆಯಲ್ಲಿ ಯಾತ್ರೆ ಮತ್ತು ಅದರ ಮುಖ್ಯ ಸಂಘಟಕರ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅಸ್ಸಾಂನ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಹೇಳಿದ್ದಾರೆ.

ಅಸ್ಸಾಂ ಸರ್ಕಾರವು ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸದಂತೆ ಜನಸಾಮಾನ್ಯರಿಗೆ ಬೆದರಿಕೆ ಹಾಕುತ್ತಿದೆ. ಕೆಲವು ಕಾರ್ಡ್‌ಗಳ ವಿತರಣೆಯ ಹೆಸರಿನಲ್ಲಿ ಮಹಿಳೆಯರನ್ನು ಕರೆದು ಗಂಟೆಗಟ್ಟಲೆ ಕೊಠಡಿಗಳಲ್ಲಿ ಇರಿಸುತ್ತಾರೆ. ಪೆಟ್ರೋಲ್ ಪಂಪ್‌ಗಳು ನಮಗೆ ಇಂಧನವನ್ನು ನೀಡುತ್ತಿಲ್ಲ. ಯಾತ್ರೆಗೆ ಸೇರದಂತೆ ಬಿಜೆಪಿ ಕಾರ್ಯಕರ್ತರು ಜನರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಶನಿವಾರ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಪ್ರತಿಕ್ರಿಯಿಸಿ, ಅಸ್ಸಾಂ ಸರಕಾರದ ನಡೆಯನ್ನು ಖಂಡಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಿಜೆಪಿಯು ಭಾರತದ ಜನರಿಗೆ ಸಂವಿಧಾನವು ಖಾತರಿಪಡಿಸಿದ ಪ್ರತಿಯೊಂದು ಹಕ್ಕು ಮತ್ತು ನ್ಯಾಯವನ್ನು ಕೆಡವಲು ಪ್ರಯತ್ನಿಸಿದೆ. ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ನಡೆಸುತ್ತಿರುವ ದಾಳಿ ಮತ್ತು ಬೆದರಿಕೆಯ ತಂತ್ರಕ್ಕೆ ಕಾಂಗ್ರೆಸ್ ಪಕ್ಷವು ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸೇರಿ ಮೂವರು ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್‌ ಆದೇಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...