Homeಕರ್ನಾಟಕBJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆ ಕಠೋರ ಮತ್ತು ಅವೈಜ್ಞಾನಿಕ ಮಾತ್ರವಲ್ಲ, ಸಂಪೂರ್ಣ ರೈತವಿರೋಧಿಯಾಗಿದೆ. ಈ ಕಾಯ್ದೆಗೆ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದೆಯೇ ಹೊರತು ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಜಾನುವಾರುಗಳ ಬಗ್ಗೆ ಬಿಜೆಪಿ ಸರ್ಕಾರ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಜಾನುವಾರು ಸಂಬಂಧಿ ಆರ್ಥಿಕ ಮತ್ತು ಸಾಮಾಜಿಕ ಅಧ್ಯಯನವನ್ನು ತಜ್ಞರಿಂದ ನಡೆಸಿ, ಅದರ ವರದಿ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ನಂತರ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೂಪಿಸಬೇಕು” ಎಂದು ಹೇಳಿದ್ದಾರೆ.

“ಗೋವುಗಳ ಬಗ್ಗೆ ಬಿಜೆಪಿ ಅಷ್ಟೊಂದು ಭಕ್ತಿ ಮತ್ತು ಕಾಳಜಿ ಹೊಂದಿದ್ದರೆ ಗೋವಾ, ಕೇರಳ ಮತ್ತು ಈಶಾನ್ಯ ರಾಜ್ಯಗಳೂ ಸೇರಿದಂತೆ ಇಡೀ ದೇಶಕ್ಕೆ ಅನ್ವಯವಾಗುವಂತಹ ಒಂದು ಕಾನೂನನ್ನು ಜಾರಿಗೆ ತನ್ನಿ, ಇದರ ಜೊತೆಗೆ ಗೋಮಾಂಸ ರಫ್ತು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

“ಗೋಹತ್ಯೆಯನ್ನು ನಿಷೇಧಿಸುವ ಮೊದಲು ಎಲ್ಲ ಅನುತ್ಪಾದಕ ಜಾನುವಾರುಗಳನ್ನು ಸರ್ಕಾರವೇ ಖರೀದಿಸಬೇಕು, ಅವುಗಳನ್ನು ರೈತರೇ ಸಾಕಬೇಕಾದರೆ ಅದಕ್ಕೆ ತಗುಲುವ ವೆಚ್ಚವನ್ನು ಸರ್ಕಾರ ಭರಿಸಬೇಕು. ಇದಕ್ಕೆ ಸಿದ್ಧವಿದ್ದರೆ ಮುಂದಿನ ವಾರವೇ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಿ, ನಾವು ಭಾಗವಹಿಸುತ್ತೇವೆ” ಎಂದು ಅವರು ಸವಾಲೆಸೆದಿದ್ದಾರೆ.

“ಗೋಹತ್ಯೆ ನಿಷೇಧ 1964 ರಿಂದಲೇ ಇದೆ, ಹಾಲು ನೀಡದ, ಕೃಷಿಯೋಗ್ಯವಲ್ಲದ, ರೋಗಗ್ರಸ್ತ ಗೋವುಗಳನ್ನು ಕೊಲ್ಲುವುದಕ್ಕೆ ಅವಕಾಶ ನೀಡಿರುವ ಆ ಕಾಯ್ದೆ ಉಳಿದಂತೆ ಗೋಹತ್ಯೆಯನ್ನು ನಿಷೇಧಿಸಿದೆ. ರಾಜ್ಯ ಸರ್ಕಾರ ತನ್ನ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯಲು ಈ ಕಾಯ್ದೆಯನ್ನು ತರಲು ಹೊರಟಿದೆ” ಎಂದು ಅವರು ಗಮನಸೆಳೆದಿದ್ದಾರೆ.

“ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಚರ್ಚೆಗೆ ಕೂಡ ಅವಕಾಶ ನೀಡದೆ ದಿಢೀರನೆ ಮಸೂದೆ ಮಂಡಿಸಿ ಅಂಗೀಕಾರ ಪಡೆಯುವ ಪ್ರಯತ್ನ ಮಾಡಿದೆ. ಇದು ಬಿಜೆಪಿ ಪಕ್ಷದ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ. ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

“ಸಮೀಕ್ಷೆಯೊಂದರ ಪ್ರಕಾರ ದೇಶದಲ್ಲಿ ಪ್ರತಿ ವರ್ಷ 3.4 ಗಂಡು ಕರುಗಳು ಹುಟ್ಟುತ್ತವೆ ಮತ್ತು 3.5 ಕೋಟಿ ಜಾನುವಾರುಗಳು ಹೊಸದಾಗಿ ಕರು ಹಾಕುವ ವಯಸ್ಸಿಗೆ ಬರುತ್ತವೆ. ಗಂಡು ಕರುಗಳ ಸರಾಸರಿ ಆಯಸ್ಸು 10 ವರ್ಷ ಅಂದರೂ ಮುಂದಿನ 10 ವರ್ಷಗಳಲ್ಲಿ 34 ಕೋಟಿ ಗಂಡು ಕರುಗಳು ದೇಶದಲ್ಲಿರಲಿವೆ”

“ಪ್ರತೀ ವರ್ಷ 6 ಕೋಟಿ ಹಸುಗಳು ಹಾಲು ಕೊಡುವುದನ್ನು ನಿಲ್ಲಿಸಿ ಅನುತ್ಪಾದಕವಾಗುತ್ತವೆ. ಇವುಗಳಿಗೆ ದಿನಕ್ಕೆ ಸರಾಸರಿ ರೂ.100 ಖರ್ಚು ಎಂದು ಅಂದಾಜಿಸಿದರೂ ವರ್ಷಕ್ಕೆ ರೂ.36,500 ಬೇಕು. ಈ ಹಸುಗಳ ನಿರ್ವಹಣೆಗೆ 5 ಲಕ್ಷ ಎಕರೆ ಭೂಮಿ, ವಾಸಕ್ಕೆ ಶೆಡ್ಡು, ಗೋಶಾಲೆ ಇವೆಲ್ಲದರ ಒಟ್ಟು ಖರ್ಚು ರೂ.10 ಲಕ್ಷ ಕೋಟಿ ಎಂದು ಅಧ್ಯಯನ ಹೇಳುತ್ತದೆ”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

“2019 ರ ಜಾನುವಾರು ಗಣತಿ ಪ್ರಕಾರ ಹಸು, ಹೋರಿ, ಎಮ್ಮೆ ಮತ್ತು ಕೋಣಗಳು ಸೇರಿ ರಾಜ್ಯದಲ್ಲಿ ಒಟ್ಟು 84,69,004 ಜಾನುವಾರುಗಳಿವೆ. ಇವುಗಳ ಸಾಕಾಣಿಕೆಗೆ ವಾರ್ಷಿಕ 2 ಕೋಟಿ 76 ಲಕ್ಷ ಟನ್ ಮೇವಿನ ಅಗತ್ಯವಿದೆ. ಆದರೆ ನಮ್ಮಲ್ಲಿ ಲಭ್ಯವಿರುವ ಮೇವಿನ 1 ಕೋಟಿ 49 ಲಕ್ಷ ಟನ್ ಮಾತ್ರ”

“ಕಳೆದ 20 ವರ್ಷಗಳಲ್ಲಿ 15 ವರ್ಷ ರಾಜ್ಯ ಬರಗಾಲ ಎದುರಿಸಿದೆ. ರೈತರು ಬೆಳೆದ ಬೆಳೆ ಕೈಸೇರದೆ, ಜಾನುವಾರುಗಳಿಗೆ ಮೇವು ಒದಗಿಸಲು ಅಸಾಧ್ಯ ಎಂಬ ಪರಿಸ್ಥಿತಿ ಎದುರಾದಾಗ ಸಹಜವಾಗಿಯೇ ಅವರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಾರೆ. ಆದರೆ ಹೊಸ ಕಾಯ್ದೆ ಇದಕ್ಕೆ ಅವಕಾಶ ನೀಡದಿದ್ದಾಗ ಸಹವಾಗಿಯೇ ಸಂಘರ್ಷ ಉಂಟಾಗುತ್ತದೆ”

“ರಾಜ್ಯದಲ್ಲಿ ಒಟ್ಟು159 ಗೋಶಾಲೆಗಳು ಇವೆ, ಅಲ್ಲಿರುವ ಹಸು, ಹೋರಿಗಳಿಗೇ ಸರ್ಕಾರ ಸರಿಯಾಗಿ ಮೇವು ಒದಗಿಸುತ್ತಿಲ್ಲ. ಇನ್ನು ರೈತರು ತಮ್ಮ ಬಳಿಯಿರುವ ಹೋರಿ, ವಯಸ್ಸಾದ ಹಸುಗಳನ್ನು ಕೊಂಡುಹೋಗಿ ಗೋಶಾಲೆಗೆ ಬಿಟ್ಟರೆ ಅವುಗಳಿಗೆ ಮೇವು ಹಾಕೋರು ಯಾರು? ಇದರ ಪರಿಕಲ್ಪನೆಯಾದರೂ ಸರ್ಕಾರಕ್ಕಿದೆಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...