Homeಕರ್ನಾಟಕBJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆ ಕಠೋರ ಮತ್ತು ಅವೈಜ್ಞಾನಿಕ ಮಾತ್ರವಲ್ಲ, ಸಂಪೂರ್ಣ ರೈತವಿರೋಧಿಯಾಗಿದೆ. ಈ ಕಾಯ್ದೆಗೆ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದೆಯೇ ಹೊರತು ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಜಾನುವಾರುಗಳ ಬಗ್ಗೆ ಬಿಜೆಪಿ ಸರ್ಕಾರ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಜಾನುವಾರು ಸಂಬಂಧಿ ಆರ್ಥಿಕ ಮತ್ತು ಸಾಮಾಜಿಕ ಅಧ್ಯಯನವನ್ನು ತಜ್ಞರಿಂದ ನಡೆಸಿ, ಅದರ ವರದಿ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ನಂತರ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೂಪಿಸಬೇಕು” ಎಂದು ಹೇಳಿದ್ದಾರೆ.

“ಗೋವುಗಳ ಬಗ್ಗೆ ಬಿಜೆಪಿ ಅಷ್ಟೊಂದು ಭಕ್ತಿ ಮತ್ತು ಕಾಳಜಿ ಹೊಂದಿದ್ದರೆ ಗೋವಾ, ಕೇರಳ ಮತ್ತು ಈಶಾನ್ಯ ರಾಜ್ಯಗಳೂ ಸೇರಿದಂತೆ ಇಡೀ ದೇಶಕ್ಕೆ ಅನ್ವಯವಾಗುವಂತಹ ಒಂದು ಕಾನೂನನ್ನು ಜಾರಿಗೆ ತನ್ನಿ, ಇದರ ಜೊತೆಗೆ ಗೋಮಾಂಸ ರಫ್ತು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

“ಗೋಹತ್ಯೆಯನ್ನು ನಿಷೇಧಿಸುವ ಮೊದಲು ಎಲ್ಲ ಅನುತ್ಪಾದಕ ಜಾನುವಾರುಗಳನ್ನು ಸರ್ಕಾರವೇ ಖರೀದಿಸಬೇಕು, ಅವುಗಳನ್ನು ರೈತರೇ ಸಾಕಬೇಕಾದರೆ ಅದಕ್ಕೆ ತಗುಲುವ ವೆಚ್ಚವನ್ನು ಸರ್ಕಾರ ಭರಿಸಬೇಕು. ಇದಕ್ಕೆ ಸಿದ್ಧವಿದ್ದರೆ ಮುಂದಿನ ವಾರವೇ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಿ, ನಾವು ಭಾಗವಹಿಸುತ್ತೇವೆ” ಎಂದು ಅವರು ಸವಾಲೆಸೆದಿದ್ದಾರೆ.

“ಗೋಹತ್ಯೆ ನಿಷೇಧ 1964 ರಿಂದಲೇ ಇದೆ, ಹಾಲು ನೀಡದ, ಕೃಷಿಯೋಗ್ಯವಲ್ಲದ, ರೋಗಗ್ರಸ್ತ ಗೋವುಗಳನ್ನು ಕೊಲ್ಲುವುದಕ್ಕೆ ಅವಕಾಶ ನೀಡಿರುವ ಆ ಕಾಯ್ದೆ ಉಳಿದಂತೆ ಗೋಹತ್ಯೆಯನ್ನು ನಿಷೇಧಿಸಿದೆ. ರಾಜ್ಯ ಸರ್ಕಾರ ತನ್ನ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯಲು ಈ ಕಾಯ್ದೆಯನ್ನು ತರಲು ಹೊರಟಿದೆ” ಎಂದು ಅವರು ಗಮನಸೆಳೆದಿದ್ದಾರೆ.

“ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಚರ್ಚೆಗೆ ಕೂಡ ಅವಕಾಶ ನೀಡದೆ ದಿಢೀರನೆ ಮಸೂದೆ ಮಂಡಿಸಿ ಅಂಗೀಕಾರ ಪಡೆಯುವ ಪ್ರಯತ್ನ ಮಾಡಿದೆ. ಇದು ಬಿಜೆಪಿ ಪಕ್ಷದ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ. ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

“ಸಮೀಕ್ಷೆಯೊಂದರ ಪ್ರಕಾರ ದೇಶದಲ್ಲಿ ಪ್ರತಿ ವರ್ಷ 3.4 ಗಂಡು ಕರುಗಳು ಹುಟ್ಟುತ್ತವೆ ಮತ್ತು 3.5 ಕೋಟಿ ಜಾನುವಾರುಗಳು ಹೊಸದಾಗಿ ಕರು ಹಾಕುವ ವಯಸ್ಸಿಗೆ ಬರುತ್ತವೆ. ಗಂಡು ಕರುಗಳ ಸರಾಸರಿ ಆಯಸ್ಸು 10 ವರ್ಷ ಅಂದರೂ ಮುಂದಿನ 10 ವರ್ಷಗಳಲ್ಲಿ 34 ಕೋಟಿ ಗಂಡು ಕರುಗಳು ದೇಶದಲ್ಲಿರಲಿವೆ”

“ಪ್ರತೀ ವರ್ಷ 6 ಕೋಟಿ ಹಸುಗಳು ಹಾಲು ಕೊಡುವುದನ್ನು ನಿಲ್ಲಿಸಿ ಅನುತ್ಪಾದಕವಾಗುತ್ತವೆ. ಇವುಗಳಿಗೆ ದಿನಕ್ಕೆ ಸರಾಸರಿ ರೂ.100 ಖರ್ಚು ಎಂದು ಅಂದಾಜಿಸಿದರೂ ವರ್ಷಕ್ಕೆ ರೂ.36,500 ಬೇಕು. ಈ ಹಸುಗಳ ನಿರ್ವಹಣೆಗೆ 5 ಲಕ್ಷ ಎಕರೆ ಭೂಮಿ, ವಾಸಕ್ಕೆ ಶೆಡ್ಡು, ಗೋಶಾಲೆ ಇವೆಲ್ಲದರ ಒಟ್ಟು ಖರ್ಚು ರೂ.10 ಲಕ್ಷ ಕೋಟಿ ಎಂದು ಅಧ್ಯಯನ ಹೇಳುತ್ತದೆ”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

“2019 ರ ಜಾನುವಾರು ಗಣತಿ ಪ್ರಕಾರ ಹಸು, ಹೋರಿ, ಎಮ್ಮೆ ಮತ್ತು ಕೋಣಗಳು ಸೇರಿ ರಾಜ್ಯದಲ್ಲಿ ಒಟ್ಟು 84,69,004 ಜಾನುವಾರುಗಳಿವೆ. ಇವುಗಳ ಸಾಕಾಣಿಕೆಗೆ ವಾರ್ಷಿಕ 2 ಕೋಟಿ 76 ಲಕ್ಷ ಟನ್ ಮೇವಿನ ಅಗತ್ಯವಿದೆ. ಆದರೆ ನಮ್ಮಲ್ಲಿ ಲಭ್ಯವಿರುವ ಮೇವಿನ 1 ಕೋಟಿ 49 ಲಕ್ಷ ಟನ್ ಮಾತ್ರ”

“ಕಳೆದ 20 ವರ್ಷಗಳಲ್ಲಿ 15 ವರ್ಷ ರಾಜ್ಯ ಬರಗಾಲ ಎದುರಿಸಿದೆ. ರೈತರು ಬೆಳೆದ ಬೆಳೆ ಕೈಸೇರದೆ, ಜಾನುವಾರುಗಳಿಗೆ ಮೇವು ಒದಗಿಸಲು ಅಸಾಧ್ಯ ಎಂಬ ಪರಿಸ್ಥಿತಿ ಎದುರಾದಾಗ ಸಹಜವಾಗಿಯೇ ಅವರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಾರೆ. ಆದರೆ ಹೊಸ ಕಾಯ್ದೆ ಇದಕ್ಕೆ ಅವಕಾಶ ನೀಡದಿದ್ದಾಗ ಸಹವಾಗಿಯೇ ಸಂಘರ್ಷ ಉಂಟಾಗುತ್ತದೆ”

“ರಾಜ್ಯದಲ್ಲಿ ಒಟ್ಟು159 ಗೋಶಾಲೆಗಳು ಇವೆ, ಅಲ್ಲಿರುವ ಹಸು, ಹೋರಿಗಳಿಗೇ ಸರ್ಕಾರ ಸರಿಯಾಗಿ ಮೇವು ಒದಗಿಸುತ್ತಿಲ್ಲ. ಇನ್ನು ರೈತರು ತಮ್ಮ ಬಳಿಯಿರುವ ಹೋರಿ, ವಯಸ್ಸಾದ ಹಸುಗಳನ್ನು ಕೊಂಡುಹೋಗಿ ಗೋಶಾಲೆಗೆ ಬಿಟ್ಟರೆ ಅವುಗಳಿಗೆ ಮೇವು ಹಾಕೋರು ಯಾರು? ಇದರ ಪರಿಕಲ್ಪನೆಯಾದರೂ ಸರ್ಕಾರಕ್ಕಿದೆಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...