Homeಕರ್ನಾಟಕBJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆ ಕಠೋರ ಮತ್ತು ಅವೈಜ್ಞಾನಿಕ ಮಾತ್ರವಲ್ಲ, ಸಂಪೂರ್ಣ ರೈತವಿರೋಧಿಯಾಗಿದೆ. ಈ ಕಾಯ್ದೆಗೆ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದೆಯೇ ಹೊರತು ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಜಾನುವಾರುಗಳ ಬಗ್ಗೆ ಬಿಜೆಪಿ ಸರ್ಕಾರ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಜಾನುವಾರು ಸಂಬಂಧಿ ಆರ್ಥಿಕ ಮತ್ತು ಸಾಮಾಜಿಕ ಅಧ್ಯಯನವನ್ನು ತಜ್ಞರಿಂದ ನಡೆಸಿ, ಅದರ ವರದಿ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ನಂತರ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೂಪಿಸಬೇಕು” ಎಂದು ಹೇಳಿದ್ದಾರೆ.

“ಗೋವುಗಳ ಬಗ್ಗೆ ಬಿಜೆಪಿ ಅಷ್ಟೊಂದು ಭಕ್ತಿ ಮತ್ತು ಕಾಳಜಿ ಹೊಂದಿದ್ದರೆ ಗೋವಾ, ಕೇರಳ ಮತ್ತು ಈಶಾನ್ಯ ರಾಜ್ಯಗಳೂ ಸೇರಿದಂತೆ ಇಡೀ ದೇಶಕ್ಕೆ ಅನ್ವಯವಾಗುವಂತಹ ಒಂದು ಕಾನೂನನ್ನು ಜಾರಿಗೆ ತನ್ನಿ, ಇದರ ಜೊತೆಗೆ ಗೋಮಾಂಸ ರಫ್ತು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

“ಗೋಹತ್ಯೆಯನ್ನು ನಿಷೇಧಿಸುವ ಮೊದಲು ಎಲ್ಲ ಅನುತ್ಪಾದಕ ಜಾನುವಾರುಗಳನ್ನು ಸರ್ಕಾರವೇ ಖರೀದಿಸಬೇಕು, ಅವುಗಳನ್ನು ರೈತರೇ ಸಾಕಬೇಕಾದರೆ ಅದಕ್ಕೆ ತಗುಲುವ ವೆಚ್ಚವನ್ನು ಸರ್ಕಾರ ಭರಿಸಬೇಕು. ಇದಕ್ಕೆ ಸಿದ್ಧವಿದ್ದರೆ ಮುಂದಿನ ವಾರವೇ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಿ, ನಾವು ಭಾಗವಹಿಸುತ್ತೇವೆ” ಎಂದು ಅವರು ಸವಾಲೆಸೆದಿದ್ದಾರೆ.

“ಗೋಹತ್ಯೆ ನಿಷೇಧ 1964 ರಿಂದಲೇ ಇದೆ, ಹಾಲು ನೀಡದ, ಕೃಷಿಯೋಗ್ಯವಲ್ಲದ, ರೋಗಗ್ರಸ್ತ ಗೋವುಗಳನ್ನು ಕೊಲ್ಲುವುದಕ್ಕೆ ಅವಕಾಶ ನೀಡಿರುವ ಆ ಕಾಯ್ದೆ ಉಳಿದಂತೆ ಗೋಹತ್ಯೆಯನ್ನು ನಿಷೇಧಿಸಿದೆ. ರಾಜ್ಯ ಸರ್ಕಾರ ತನ್ನ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯಲು ಈ ಕಾಯ್ದೆಯನ್ನು ತರಲು ಹೊರಟಿದೆ” ಎಂದು ಅವರು ಗಮನಸೆಳೆದಿದ್ದಾರೆ.

“ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಚರ್ಚೆಗೆ ಕೂಡ ಅವಕಾಶ ನೀಡದೆ ದಿಢೀರನೆ ಮಸೂದೆ ಮಂಡಿಸಿ ಅಂಗೀಕಾರ ಪಡೆಯುವ ಪ್ರಯತ್ನ ಮಾಡಿದೆ. ಇದು ಬಿಜೆಪಿ ಪಕ್ಷದ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ. ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

“ಸಮೀಕ್ಷೆಯೊಂದರ ಪ್ರಕಾರ ದೇಶದಲ್ಲಿ ಪ್ರತಿ ವರ್ಷ 3.4 ಗಂಡು ಕರುಗಳು ಹುಟ್ಟುತ್ತವೆ ಮತ್ತು 3.5 ಕೋಟಿ ಜಾನುವಾರುಗಳು ಹೊಸದಾಗಿ ಕರು ಹಾಕುವ ವಯಸ್ಸಿಗೆ ಬರುತ್ತವೆ. ಗಂಡು ಕರುಗಳ ಸರಾಸರಿ ಆಯಸ್ಸು 10 ವರ್ಷ ಅಂದರೂ ಮುಂದಿನ 10 ವರ್ಷಗಳಲ್ಲಿ 34 ಕೋಟಿ ಗಂಡು ಕರುಗಳು ದೇಶದಲ್ಲಿರಲಿವೆ”

“ಪ್ರತೀ ವರ್ಷ 6 ಕೋಟಿ ಹಸುಗಳು ಹಾಲು ಕೊಡುವುದನ್ನು ನಿಲ್ಲಿಸಿ ಅನುತ್ಪಾದಕವಾಗುತ್ತವೆ. ಇವುಗಳಿಗೆ ದಿನಕ್ಕೆ ಸರಾಸರಿ ರೂ.100 ಖರ್ಚು ಎಂದು ಅಂದಾಜಿಸಿದರೂ ವರ್ಷಕ್ಕೆ ರೂ.36,500 ಬೇಕು. ಈ ಹಸುಗಳ ನಿರ್ವಹಣೆಗೆ 5 ಲಕ್ಷ ಎಕರೆ ಭೂಮಿ, ವಾಸಕ್ಕೆ ಶೆಡ್ಡು, ಗೋಶಾಲೆ ಇವೆಲ್ಲದರ ಒಟ್ಟು ಖರ್ಚು ರೂ.10 ಲಕ್ಷ ಕೋಟಿ ಎಂದು ಅಧ್ಯಯನ ಹೇಳುತ್ತದೆ”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

“2019 ರ ಜಾನುವಾರು ಗಣತಿ ಪ್ರಕಾರ ಹಸು, ಹೋರಿ, ಎಮ್ಮೆ ಮತ್ತು ಕೋಣಗಳು ಸೇರಿ ರಾಜ್ಯದಲ್ಲಿ ಒಟ್ಟು 84,69,004 ಜಾನುವಾರುಗಳಿವೆ. ಇವುಗಳ ಸಾಕಾಣಿಕೆಗೆ ವಾರ್ಷಿಕ 2 ಕೋಟಿ 76 ಲಕ್ಷ ಟನ್ ಮೇವಿನ ಅಗತ್ಯವಿದೆ. ಆದರೆ ನಮ್ಮಲ್ಲಿ ಲಭ್ಯವಿರುವ ಮೇವಿನ 1 ಕೋಟಿ 49 ಲಕ್ಷ ಟನ್ ಮಾತ್ರ”

“ಕಳೆದ 20 ವರ್ಷಗಳಲ್ಲಿ 15 ವರ್ಷ ರಾಜ್ಯ ಬರಗಾಲ ಎದುರಿಸಿದೆ. ರೈತರು ಬೆಳೆದ ಬೆಳೆ ಕೈಸೇರದೆ, ಜಾನುವಾರುಗಳಿಗೆ ಮೇವು ಒದಗಿಸಲು ಅಸಾಧ್ಯ ಎಂಬ ಪರಿಸ್ಥಿತಿ ಎದುರಾದಾಗ ಸಹಜವಾಗಿಯೇ ಅವರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಾರೆ. ಆದರೆ ಹೊಸ ಕಾಯ್ದೆ ಇದಕ್ಕೆ ಅವಕಾಶ ನೀಡದಿದ್ದಾಗ ಸಹವಾಗಿಯೇ ಸಂಘರ್ಷ ಉಂಟಾಗುತ್ತದೆ”

“ರಾಜ್ಯದಲ್ಲಿ ಒಟ್ಟು159 ಗೋಶಾಲೆಗಳು ಇವೆ, ಅಲ್ಲಿರುವ ಹಸು, ಹೋರಿಗಳಿಗೇ ಸರ್ಕಾರ ಸರಿಯಾಗಿ ಮೇವು ಒದಗಿಸುತ್ತಿಲ್ಲ. ಇನ್ನು ರೈತರು ತಮ್ಮ ಬಳಿಯಿರುವ ಹೋರಿ, ವಯಸ್ಸಾದ ಹಸುಗಳನ್ನು ಕೊಂಡುಹೋಗಿ ಗೋಶಾಲೆಗೆ ಬಿಟ್ಟರೆ ಅವುಗಳಿಗೆ ಮೇವು ಹಾಕೋರು ಯಾರು? ಇದರ ಪರಿಕಲ್ಪನೆಯಾದರೂ ಸರ್ಕಾರಕ್ಕಿದೆಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...