Homeಕರ್ನಾಟಕBJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆ ಕಠೋರ ಮತ್ತು ಅವೈಜ್ಞಾನಿಕ ಮಾತ್ರವಲ್ಲ, ಸಂಪೂರ್ಣ ರೈತವಿರೋಧಿಯಾಗಿದೆ. ಈ ಕಾಯ್ದೆಗೆ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದೆಯೇ ಹೊರತು ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಜಾನುವಾರುಗಳ ಬಗ್ಗೆ ಬಿಜೆಪಿ ಸರ್ಕಾರ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಜಾನುವಾರು ಸಂಬಂಧಿ ಆರ್ಥಿಕ ಮತ್ತು ಸಾಮಾಜಿಕ ಅಧ್ಯಯನವನ್ನು ತಜ್ಞರಿಂದ ನಡೆಸಿ, ಅದರ ವರದಿ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ನಂತರ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೂಪಿಸಬೇಕು” ಎಂದು ಹೇಳಿದ್ದಾರೆ.

“ಗೋವುಗಳ ಬಗ್ಗೆ ಬಿಜೆಪಿ ಅಷ್ಟೊಂದು ಭಕ್ತಿ ಮತ್ತು ಕಾಳಜಿ ಹೊಂದಿದ್ದರೆ ಗೋವಾ, ಕೇರಳ ಮತ್ತು ಈಶಾನ್ಯ ರಾಜ್ಯಗಳೂ ಸೇರಿದಂತೆ ಇಡೀ ದೇಶಕ್ಕೆ ಅನ್ವಯವಾಗುವಂತಹ ಒಂದು ಕಾನೂನನ್ನು ಜಾರಿಗೆ ತನ್ನಿ, ಇದರ ಜೊತೆಗೆ ಗೋಮಾಂಸ ರಫ್ತು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

“ಗೋಹತ್ಯೆಯನ್ನು ನಿಷೇಧಿಸುವ ಮೊದಲು ಎಲ್ಲ ಅನುತ್ಪಾದಕ ಜಾನುವಾರುಗಳನ್ನು ಸರ್ಕಾರವೇ ಖರೀದಿಸಬೇಕು, ಅವುಗಳನ್ನು ರೈತರೇ ಸಾಕಬೇಕಾದರೆ ಅದಕ್ಕೆ ತಗುಲುವ ವೆಚ್ಚವನ್ನು ಸರ್ಕಾರ ಭರಿಸಬೇಕು. ಇದಕ್ಕೆ ಸಿದ್ಧವಿದ್ದರೆ ಮುಂದಿನ ವಾರವೇ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಿ, ನಾವು ಭಾಗವಹಿಸುತ್ತೇವೆ” ಎಂದು ಅವರು ಸವಾಲೆಸೆದಿದ್ದಾರೆ.

“ಗೋಹತ್ಯೆ ನಿಷೇಧ 1964 ರಿಂದಲೇ ಇದೆ, ಹಾಲು ನೀಡದ, ಕೃಷಿಯೋಗ್ಯವಲ್ಲದ, ರೋಗಗ್ರಸ್ತ ಗೋವುಗಳನ್ನು ಕೊಲ್ಲುವುದಕ್ಕೆ ಅವಕಾಶ ನೀಡಿರುವ ಆ ಕಾಯ್ದೆ ಉಳಿದಂತೆ ಗೋಹತ್ಯೆಯನ್ನು ನಿಷೇಧಿಸಿದೆ. ರಾಜ್ಯ ಸರ್ಕಾರ ತನ್ನ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯಲು ಈ ಕಾಯ್ದೆಯನ್ನು ತರಲು ಹೊರಟಿದೆ” ಎಂದು ಅವರು ಗಮನಸೆಳೆದಿದ್ದಾರೆ.

“ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಚರ್ಚೆಗೆ ಕೂಡ ಅವಕಾಶ ನೀಡದೆ ದಿಢೀರನೆ ಮಸೂದೆ ಮಂಡಿಸಿ ಅಂಗೀಕಾರ ಪಡೆಯುವ ಪ್ರಯತ್ನ ಮಾಡಿದೆ. ಇದು ಬಿಜೆಪಿ ಪಕ್ಷದ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ. ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

“ಸಮೀಕ್ಷೆಯೊಂದರ ಪ್ರಕಾರ ದೇಶದಲ್ಲಿ ಪ್ರತಿ ವರ್ಷ 3.4 ಗಂಡು ಕರುಗಳು ಹುಟ್ಟುತ್ತವೆ ಮತ್ತು 3.5 ಕೋಟಿ ಜಾನುವಾರುಗಳು ಹೊಸದಾಗಿ ಕರು ಹಾಕುವ ವಯಸ್ಸಿಗೆ ಬರುತ್ತವೆ. ಗಂಡು ಕರುಗಳ ಸರಾಸರಿ ಆಯಸ್ಸು 10 ವರ್ಷ ಅಂದರೂ ಮುಂದಿನ 10 ವರ್ಷಗಳಲ್ಲಿ 34 ಕೋಟಿ ಗಂಡು ಕರುಗಳು ದೇಶದಲ್ಲಿರಲಿವೆ”

“ಪ್ರತೀ ವರ್ಷ 6 ಕೋಟಿ ಹಸುಗಳು ಹಾಲು ಕೊಡುವುದನ್ನು ನಿಲ್ಲಿಸಿ ಅನುತ್ಪಾದಕವಾಗುತ್ತವೆ. ಇವುಗಳಿಗೆ ದಿನಕ್ಕೆ ಸರಾಸರಿ ರೂ.100 ಖರ್ಚು ಎಂದು ಅಂದಾಜಿಸಿದರೂ ವರ್ಷಕ್ಕೆ ರೂ.36,500 ಬೇಕು. ಈ ಹಸುಗಳ ನಿರ್ವಹಣೆಗೆ 5 ಲಕ್ಷ ಎಕರೆ ಭೂಮಿ, ವಾಸಕ್ಕೆ ಶೆಡ್ಡು, ಗೋಶಾಲೆ ಇವೆಲ್ಲದರ ಒಟ್ಟು ಖರ್ಚು ರೂ.10 ಲಕ್ಷ ಕೋಟಿ ಎಂದು ಅಧ್ಯಯನ ಹೇಳುತ್ತದೆ”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

“2019 ರ ಜಾನುವಾರು ಗಣತಿ ಪ್ರಕಾರ ಹಸು, ಹೋರಿ, ಎಮ್ಮೆ ಮತ್ತು ಕೋಣಗಳು ಸೇರಿ ರಾಜ್ಯದಲ್ಲಿ ಒಟ್ಟು 84,69,004 ಜಾನುವಾರುಗಳಿವೆ. ಇವುಗಳ ಸಾಕಾಣಿಕೆಗೆ ವಾರ್ಷಿಕ 2 ಕೋಟಿ 76 ಲಕ್ಷ ಟನ್ ಮೇವಿನ ಅಗತ್ಯವಿದೆ. ಆದರೆ ನಮ್ಮಲ್ಲಿ ಲಭ್ಯವಿರುವ ಮೇವಿನ 1 ಕೋಟಿ 49 ಲಕ್ಷ ಟನ್ ಮಾತ್ರ”

“ಕಳೆದ 20 ವರ್ಷಗಳಲ್ಲಿ 15 ವರ್ಷ ರಾಜ್ಯ ಬರಗಾಲ ಎದುರಿಸಿದೆ. ರೈತರು ಬೆಳೆದ ಬೆಳೆ ಕೈಸೇರದೆ, ಜಾನುವಾರುಗಳಿಗೆ ಮೇವು ಒದಗಿಸಲು ಅಸಾಧ್ಯ ಎಂಬ ಪರಿಸ್ಥಿತಿ ಎದುರಾದಾಗ ಸಹಜವಾಗಿಯೇ ಅವರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಾರೆ. ಆದರೆ ಹೊಸ ಕಾಯ್ದೆ ಇದಕ್ಕೆ ಅವಕಾಶ ನೀಡದಿದ್ದಾಗ ಸಹವಾಗಿಯೇ ಸಂಘರ್ಷ ಉಂಟಾಗುತ್ತದೆ”

“ರಾಜ್ಯದಲ್ಲಿ ಒಟ್ಟು159 ಗೋಶಾಲೆಗಳು ಇವೆ, ಅಲ್ಲಿರುವ ಹಸು, ಹೋರಿಗಳಿಗೇ ಸರ್ಕಾರ ಸರಿಯಾಗಿ ಮೇವು ಒದಗಿಸುತ್ತಿಲ್ಲ. ಇನ್ನು ರೈತರು ತಮ್ಮ ಬಳಿಯಿರುವ ಹೋರಿ, ವಯಸ್ಸಾದ ಹಸುಗಳನ್ನು ಕೊಂಡುಹೋಗಿ ಗೋಶಾಲೆಗೆ ಬಿಟ್ಟರೆ ಅವುಗಳಿಗೆ ಮೇವು ಹಾಕೋರು ಯಾರು? ಇದರ ಪರಿಕಲ್ಪನೆಯಾದರೂ ಸರ್ಕಾರಕ್ಕಿದೆಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...