Homeಕರ್ನಾಟಕBJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆ ಕಠೋರ ಮತ್ತು ಅವೈಜ್ಞಾನಿಕ ಮಾತ್ರವಲ್ಲ, ಸಂಪೂರ್ಣ ರೈತವಿರೋಧಿಯಾಗಿದೆ. ಈ ಕಾಯ್ದೆಗೆ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದೆಯೇ ಹೊರತು ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಜಾನುವಾರುಗಳ ಬಗ್ಗೆ ಬಿಜೆಪಿ ಸರ್ಕಾರ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಜಾನುವಾರು ಸಂಬಂಧಿ ಆರ್ಥಿಕ ಮತ್ತು ಸಾಮಾಜಿಕ ಅಧ್ಯಯನವನ್ನು ತಜ್ಞರಿಂದ ನಡೆಸಿ, ಅದರ ವರದಿ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ನಂತರ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೂಪಿಸಬೇಕು” ಎಂದು ಹೇಳಿದ್ದಾರೆ.

“ಗೋವುಗಳ ಬಗ್ಗೆ ಬಿಜೆಪಿ ಅಷ್ಟೊಂದು ಭಕ್ತಿ ಮತ್ತು ಕಾಳಜಿ ಹೊಂದಿದ್ದರೆ ಗೋವಾ, ಕೇರಳ ಮತ್ತು ಈಶಾನ್ಯ ರಾಜ್ಯಗಳೂ ಸೇರಿದಂತೆ ಇಡೀ ದೇಶಕ್ಕೆ ಅನ್ವಯವಾಗುವಂತಹ ಒಂದು ಕಾನೂನನ್ನು ಜಾರಿಗೆ ತನ್ನಿ, ಇದರ ಜೊತೆಗೆ ಗೋಮಾಂಸ ರಫ್ತು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

“ಗೋಹತ್ಯೆಯನ್ನು ನಿಷೇಧಿಸುವ ಮೊದಲು ಎಲ್ಲ ಅನುತ್ಪಾದಕ ಜಾನುವಾರುಗಳನ್ನು ಸರ್ಕಾರವೇ ಖರೀದಿಸಬೇಕು, ಅವುಗಳನ್ನು ರೈತರೇ ಸಾಕಬೇಕಾದರೆ ಅದಕ್ಕೆ ತಗುಲುವ ವೆಚ್ಚವನ್ನು ಸರ್ಕಾರ ಭರಿಸಬೇಕು. ಇದಕ್ಕೆ ಸಿದ್ಧವಿದ್ದರೆ ಮುಂದಿನ ವಾರವೇ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಿ, ನಾವು ಭಾಗವಹಿಸುತ್ತೇವೆ” ಎಂದು ಅವರು ಸವಾಲೆಸೆದಿದ್ದಾರೆ.

“ಗೋಹತ್ಯೆ ನಿಷೇಧ 1964 ರಿಂದಲೇ ಇದೆ, ಹಾಲು ನೀಡದ, ಕೃಷಿಯೋಗ್ಯವಲ್ಲದ, ರೋಗಗ್ರಸ್ತ ಗೋವುಗಳನ್ನು ಕೊಲ್ಲುವುದಕ್ಕೆ ಅವಕಾಶ ನೀಡಿರುವ ಆ ಕಾಯ್ದೆ ಉಳಿದಂತೆ ಗೋಹತ್ಯೆಯನ್ನು ನಿಷೇಧಿಸಿದೆ. ರಾಜ್ಯ ಸರ್ಕಾರ ತನ್ನ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯಲು ಈ ಕಾಯ್ದೆಯನ್ನು ತರಲು ಹೊರಟಿದೆ” ಎಂದು ಅವರು ಗಮನಸೆಳೆದಿದ್ದಾರೆ.

“ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಚರ್ಚೆಗೆ ಕೂಡ ಅವಕಾಶ ನೀಡದೆ ದಿಢೀರನೆ ಮಸೂದೆ ಮಂಡಿಸಿ ಅಂಗೀಕಾರ ಪಡೆಯುವ ಪ್ರಯತ್ನ ಮಾಡಿದೆ. ಇದು ಬಿಜೆಪಿ ಪಕ್ಷದ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ. ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

“ಸಮೀಕ್ಷೆಯೊಂದರ ಪ್ರಕಾರ ದೇಶದಲ್ಲಿ ಪ್ರತಿ ವರ್ಷ 3.4 ಗಂಡು ಕರುಗಳು ಹುಟ್ಟುತ್ತವೆ ಮತ್ತು 3.5 ಕೋಟಿ ಜಾನುವಾರುಗಳು ಹೊಸದಾಗಿ ಕರು ಹಾಕುವ ವಯಸ್ಸಿಗೆ ಬರುತ್ತವೆ. ಗಂಡು ಕರುಗಳ ಸರಾಸರಿ ಆಯಸ್ಸು 10 ವರ್ಷ ಅಂದರೂ ಮುಂದಿನ 10 ವರ್ಷಗಳಲ್ಲಿ 34 ಕೋಟಿ ಗಂಡು ಕರುಗಳು ದೇಶದಲ್ಲಿರಲಿವೆ”

“ಪ್ರತೀ ವರ್ಷ 6 ಕೋಟಿ ಹಸುಗಳು ಹಾಲು ಕೊಡುವುದನ್ನು ನಿಲ್ಲಿಸಿ ಅನುತ್ಪಾದಕವಾಗುತ್ತವೆ. ಇವುಗಳಿಗೆ ದಿನಕ್ಕೆ ಸರಾಸರಿ ರೂ.100 ಖರ್ಚು ಎಂದು ಅಂದಾಜಿಸಿದರೂ ವರ್ಷಕ್ಕೆ ರೂ.36,500 ಬೇಕು. ಈ ಹಸುಗಳ ನಿರ್ವಹಣೆಗೆ 5 ಲಕ್ಷ ಎಕರೆ ಭೂಮಿ, ವಾಸಕ್ಕೆ ಶೆಡ್ಡು, ಗೋಶಾಲೆ ಇವೆಲ್ಲದರ ಒಟ್ಟು ಖರ್ಚು ರೂ.10 ಲಕ್ಷ ಕೋಟಿ ಎಂದು ಅಧ್ಯಯನ ಹೇಳುತ್ತದೆ”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

“2019 ರ ಜಾನುವಾರು ಗಣತಿ ಪ್ರಕಾರ ಹಸು, ಹೋರಿ, ಎಮ್ಮೆ ಮತ್ತು ಕೋಣಗಳು ಸೇರಿ ರಾಜ್ಯದಲ್ಲಿ ಒಟ್ಟು 84,69,004 ಜಾನುವಾರುಗಳಿವೆ. ಇವುಗಳ ಸಾಕಾಣಿಕೆಗೆ ವಾರ್ಷಿಕ 2 ಕೋಟಿ 76 ಲಕ್ಷ ಟನ್ ಮೇವಿನ ಅಗತ್ಯವಿದೆ. ಆದರೆ ನಮ್ಮಲ್ಲಿ ಲಭ್ಯವಿರುವ ಮೇವಿನ 1 ಕೋಟಿ 49 ಲಕ್ಷ ಟನ್ ಮಾತ್ರ”

“ಕಳೆದ 20 ವರ್ಷಗಳಲ್ಲಿ 15 ವರ್ಷ ರಾಜ್ಯ ಬರಗಾಲ ಎದುರಿಸಿದೆ. ರೈತರು ಬೆಳೆದ ಬೆಳೆ ಕೈಸೇರದೆ, ಜಾನುವಾರುಗಳಿಗೆ ಮೇವು ಒದಗಿಸಲು ಅಸಾಧ್ಯ ಎಂಬ ಪರಿಸ್ಥಿತಿ ಎದುರಾದಾಗ ಸಹಜವಾಗಿಯೇ ಅವರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಾರೆ. ಆದರೆ ಹೊಸ ಕಾಯ್ದೆ ಇದಕ್ಕೆ ಅವಕಾಶ ನೀಡದಿದ್ದಾಗ ಸಹವಾಗಿಯೇ ಸಂಘರ್ಷ ಉಂಟಾಗುತ್ತದೆ”

“ರಾಜ್ಯದಲ್ಲಿ ಒಟ್ಟು159 ಗೋಶಾಲೆಗಳು ಇವೆ, ಅಲ್ಲಿರುವ ಹಸು, ಹೋರಿಗಳಿಗೇ ಸರ್ಕಾರ ಸರಿಯಾಗಿ ಮೇವು ಒದಗಿಸುತ್ತಿಲ್ಲ. ಇನ್ನು ರೈತರು ತಮ್ಮ ಬಳಿಯಿರುವ ಹೋರಿ, ವಯಸ್ಸಾದ ಹಸುಗಳನ್ನು ಕೊಂಡುಹೋಗಿ ಗೋಶಾಲೆಗೆ ಬಿಟ್ಟರೆ ಅವುಗಳಿಗೆ ಮೇವು ಹಾಕೋರು ಯಾರು? ಇದರ ಪರಿಕಲ್ಪನೆಯಾದರೂ ಸರ್ಕಾರಕ್ಕಿದೆಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...