Homeಕರ್ನಾಟಕBJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆ ಕಠೋರ ಮತ್ತು ಅವೈಜ್ಞಾನಿಕ ಮಾತ್ರವಲ್ಲ, ಸಂಪೂರ್ಣ ರೈತವಿರೋಧಿಯಾಗಿದೆ. ಈ ಕಾಯ್ದೆಗೆ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದೆಯೇ ಹೊರತು ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಜಾನುವಾರುಗಳ ಬಗ್ಗೆ ಬಿಜೆಪಿ ಸರ್ಕಾರ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಜಾನುವಾರು ಸಂಬಂಧಿ ಆರ್ಥಿಕ ಮತ್ತು ಸಾಮಾಜಿಕ ಅಧ್ಯಯನವನ್ನು ತಜ್ಞರಿಂದ ನಡೆಸಿ, ಅದರ ವರದಿ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ನಂತರ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೂಪಿಸಬೇಕು” ಎಂದು ಹೇಳಿದ್ದಾರೆ.

“ಗೋವುಗಳ ಬಗ್ಗೆ ಬಿಜೆಪಿ ಅಷ್ಟೊಂದು ಭಕ್ತಿ ಮತ್ತು ಕಾಳಜಿ ಹೊಂದಿದ್ದರೆ ಗೋವಾ, ಕೇರಳ ಮತ್ತು ಈಶಾನ್ಯ ರಾಜ್ಯಗಳೂ ಸೇರಿದಂತೆ ಇಡೀ ದೇಶಕ್ಕೆ ಅನ್ವಯವಾಗುವಂತಹ ಒಂದು ಕಾನೂನನ್ನು ಜಾರಿಗೆ ತನ್ನಿ, ಇದರ ಜೊತೆಗೆ ಗೋಮಾಂಸ ರಫ್ತು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

“ಗೋಹತ್ಯೆಯನ್ನು ನಿಷೇಧಿಸುವ ಮೊದಲು ಎಲ್ಲ ಅನುತ್ಪಾದಕ ಜಾನುವಾರುಗಳನ್ನು ಸರ್ಕಾರವೇ ಖರೀದಿಸಬೇಕು, ಅವುಗಳನ್ನು ರೈತರೇ ಸಾಕಬೇಕಾದರೆ ಅದಕ್ಕೆ ತಗುಲುವ ವೆಚ್ಚವನ್ನು ಸರ್ಕಾರ ಭರಿಸಬೇಕು. ಇದಕ್ಕೆ ಸಿದ್ಧವಿದ್ದರೆ ಮುಂದಿನ ವಾರವೇ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಿ, ನಾವು ಭಾಗವಹಿಸುತ್ತೇವೆ” ಎಂದು ಅವರು ಸವಾಲೆಸೆದಿದ್ದಾರೆ.

“ಗೋಹತ್ಯೆ ನಿಷೇಧ 1964 ರಿಂದಲೇ ಇದೆ, ಹಾಲು ನೀಡದ, ಕೃಷಿಯೋಗ್ಯವಲ್ಲದ, ರೋಗಗ್ರಸ್ತ ಗೋವುಗಳನ್ನು ಕೊಲ್ಲುವುದಕ್ಕೆ ಅವಕಾಶ ನೀಡಿರುವ ಆ ಕಾಯ್ದೆ ಉಳಿದಂತೆ ಗೋಹತ್ಯೆಯನ್ನು ನಿಷೇಧಿಸಿದೆ. ರಾಜ್ಯ ಸರ್ಕಾರ ತನ್ನ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯಲು ಈ ಕಾಯ್ದೆಯನ್ನು ತರಲು ಹೊರಟಿದೆ” ಎಂದು ಅವರು ಗಮನಸೆಳೆದಿದ್ದಾರೆ.

“ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಚರ್ಚೆಗೆ ಕೂಡ ಅವಕಾಶ ನೀಡದೆ ದಿಢೀರನೆ ಮಸೂದೆ ಮಂಡಿಸಿ ಅಂಗೀಕಾರ ಪಡೆಯುವ ಪ್ರಯತ್ನ ಮಾಡಿದೆ. ಇದು ಬಿಜೆಪಿ ಪಕ್ಷದ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ. ನೂತನ ಗೋಹತ್ಯೆ ನಿಷೇಧ ಕಾಯ್ದೆಯನ್ನು ತರಲು ಹೊರಟಿರುವುದು, ಗೋಸಾಗಾಣಿಕೆದಾರರ ಮೇಲೆ ಸುಳ್ಳು ಆರೋಪ ಹೊರಿಸಿ ಅವರ ಮೇಲೆ ದೌರ್ಜನ್ಯ ನಡೆಸುವವರ ರಕ್ಷಣೆಗಾಗಿಯೇ ಹೊರತು ಗೋವುಗಳ ರಕ್ಷಣೆಗೆ ಅಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

“ಸಮೀಕ್ಷೆಯೊಂದರ ಪ್ರಕಾರ ದೇಶದಲ್ಲಿ ಪ್ರತಿ ವರ್ಷ 3.4 ಗಂಡು ಕರುಗಳು ಹುಟ್ಟುತ್ತವೆ ಮತ್ತು 3.5 ಕೋಟಿ ಜಾನುವಾರುಗಳು ಹೊಸದಾಗಿ ಕರು ಹಾಕುವ ವಯಸ್ಸಿಗೆ ಬರುತ್ತವೆ. ಗಂಡು ಕರುಗಳ ಸರಾಸರಿ ಆಯಸ್ಸು 10 ವರ್ಷ ಅಂದರೂ ಮುಂದಿನ 10 ವರ್ಷಗಳಲ್ಲಿ 34 ಕೋಟಿ ಗಂಡು ಕರುಗಳು ದೇಶದಲ್ಲಿರಲಿವೆ”

“ಪ್ರತೀ ವರ್ಷ 6 ಕೋಟಿ ಹಸುಗಳು ಹಾಲು ಕೊಡುವುದನ್ನು ನಿಲ್ಲಿಸಿ ಅನುತ್ಪಾದಕವಾಗುತ್ತವೆ. ಇವುಗಳಿಗೆ ದಿನಕ್ಕೆ ಸರಾಸರಿ ರೂ.100 ಖರ್ಚು ಎಂದು ಅಂದಾಜಿಸಿದರೂ ವರ್ಷಕ್ಕೆ ರೂ.36,500 ಬೇಕು. ಈ ಹಸುಗಳ ನಿರ್ವಹಣೆಗೆ 5 ಲಕ್ಷ ಎಕರೆ ಭೂಮಿ, ವಾಸಕ್ಕೆ ಶೆಡ್ಡು, ಗೋಶಾಲೆ ಇವೆಲ್ಲದರ ಒಟ್ಟು ಖರ್ಚು ರೂ.10 ಲಕ್ಷ ಕೋಟಿ ಎಂದು ಅಧ್ಯಯನ ಹೇಳುತ್ತದೆ”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

“2019 ರ ಜಾನುವಾರು ಗಣತಿ ಪ್ರಕಾರ ಹಸು, ಹೋರಿ, ಎಮ್ಮೆ ಮತ್ತು ಕೋಣಗಳು ಸೇರಿ ರಾಜ್ಯದಲ್ಲಿ ಒಟ್ಟು 84,69,004 ಜಾನುವಾರುಗಳಿವೆ. ಇವುಗಳ ಸಾಕಾಣಿಕೆಗೆ ವಾರ್ಷಿಕ 2 ಕೋಟಿ 76 ಲಕ್ಷ ಟನ್ ಮೇವಿನ ಅಗತ್ಯವಿದೆ. ಆದರೆ ನಮ್ಮಲ್ಲಿ ಲಭ್ಯವಿರುವ ಮೇವಿನ 1 ಕೋಟಿ 49 ಲಕ್ಷ ಟನ್ ಮಾತ್ರ”

“ಕಳೆದ 20 ವರ್ಷಗಳಲ್ಲಿ 15 ವರ್ಷ ರಾಜ್ಯ ಬರಗಾಲ ಎದುರಿಸಿದೆ. ರೈತರು ಬೆಳೆದ ಬೆಳೆ ಕೈಸೇರದೆ, ಜಾನುವಾರುಗಳಿಗೆ ಮೇವು ಒದಗಿಸಲು ಅಸಾಧ್ಯ ಎಂಬ ಪರಿಸ್ಥಿತಿ ಎದುರಾದಾಗ ಸಹಜವಾಗಿಯೇ ಅವರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಾರೆ. ಆದರೆ ಹೊಸ ಕಾಯ್ದೆ ಇದಕ್ಕೆ ಅವಕಾಶ ನೀಡದಿದ್ದಾಗ ಸಹವಾಗಿಯೇ ಸಂಘರ್ಷ ಉಂಟಾಗುತ್ತದೆ”

“ರಾಜ್ಯದಲ್ಲಿ ಒಟ್ಟು159 ಗೋಶಾಲೆಗಳು ಇವೆ, ಅಲ್ಲಿರುವ ಹಸು, ಹೋರಿಗಳಿಗೇ ಸರ್ಕಾರ ಸರಿಯಾಗಿ ಮೇವು ಒದಗಿಸುತ್ತಿಲ್ಲ. ಇನ್ನು ರೈತರು ತಮ್ಮ ಬಳಿಯಿರುವ ಹೋರಿ, ವಯಸ್ಸಾದ ಹಸುಗಳನ್ನು ಕೊಂಡುಹೋಗಿ ಗೋಶಾಲೆಗೆ ಬಿಟ್ಟರೆ ಅವುಗಳಿಗೆ ಮೇವು ಹಾಕೋರು ಯಾರು? ಇದರ ಪರಿಕಲ್ಪನೆಯಾದರೂ ಸರ್ಕಾರಕ್ಕಿದೆಯೇ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...