Homeಮುಖಪುಟನಾವು ಸಂಸತ್ತಿನಲ್ಲಿ ಮಾತನಾಡುವುದು ಬಿಜೆಪಿಗೆ ಇಷ್ಟವಾಗುವುದಿಲ್ಲ: ಪ್ರಜಾಪ್ರಭುತ್ವದ ಟೀಕೆ ಕುರಿತು ರಾಹುಲ್ ಪ್ರತಿಕ್ರಿಯೆ

ನಾವು ಸಂಸತ್ತಿನಲ್ಲಿ ಮಾತನಾಡುವುದು ಬಿಜೆಪಿಗೆ ಇಷ್ಟವಾಗುವುದಿಲ್ಲ: ಪ್ರಜಾಪ್ರಭುತ್ವದ ಟೀಕೆ ಕುರಿತು ರಾಹುಲ್ ಪ್ರತಿಕ್ರಿಯೆ

- Advertisement -
- Advertisement -

ರಾಹುಲ್‌ ಗಾಂಧಿ ಅವರು ಲಂಡನ್‌ನಲ್ಲಿ ನೀಡಿರುವ ಹೇಳಿಕೆ ಬಗ್ಗೆ ಕಳೆದ ಮೂರ್ನಾಲ್ಕು ದಿನಗಳಿಂದ ಸಂಸತ್ತಿನಲ್ಲಿ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಗಲಾಟೆ ನಡೆಯುತ್ತಿದೆ. ವಿದೇಶದಿಂದ ಹಿಂದಿರುಗಿದ ನಂತರ ಗುರುವಾರ ಸಂಸತ್ತಿಗೆ ಆಗಮಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಅವಕಾಶ ನೀಡಿದರೆ ಸದನದಲ್ಲಿ ಮಾತನಾಡುವುದಾಗಿ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ನೀಡಿದ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಸರ್ಕಾರ ಒತ್ತಾಯಿಸುತ್ತಿದ್ದು, ರಾಹುಲ್ ಗಾಂಧಿ ಅವರು ಕ್ಷಮೆಕೇಳುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಪಕ್ಷದ ನಾಯಕರು ಹೇಳಿದ್ದಾರೆ. ಇದೇ ವಿಚಾರಕ್ಕೆ ಉಭಯ ಸದನಗಳಲ್ಲಿ ಕಲಾಪವನ್ನು ಸತತ ನಾಲ್ಕನೇ ದಿನವೂ ಮುಂದೂಡುತ್ತಾ ಬಂದಿದ್ದು, ಇಂದು ಕೂಡ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ರಾಹುಲ್ ಗಾಂಧಿ ಅವರು ಸಂಸತ್ತಿನಿಂದ ಹೊರಡುವಾಗ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದು, ”ಅವರು ನನಗೆ ಮಾತನಾಡಲು ಅವಕಾಶ ನೀಡಿದರೆ ನನ್ನ ಅನಿಸಿಕೆಯನ್ನು ನಾನು ಹೇಳುತ್ತೇನೆ” ಎಂದು ತಿಳಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯಕರಿಗೆ ಖರ್ಗೆ ಖಡಕ್ ಉತ್ತರ

”ನಾವು ಸಂಸತ್ತಿನ ಒಳಗೆ ಮಾತನಾಡುವುದು ಬಿಜೆಪಿಯವರಿಗೆ ಇಷ್ಟವಾಗುವುದಿಲ್ಲ,” ಅವರು ಅಲ್ಲಿ ಅವಕಾಶ ನೀಡದಿದ್ದರೆ, ಸಂಸತ್ತಿನ ಹೊರಗೆ ಮಾತನಾಡುವುದಾಗಿ ರಾಹುಲ್ ಹೇಳಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಏತನ್ಮಧ್ಯೆ, ಕಲಾಪವನ್ನು ಮುಂದೂಡಿದ ನಂತರ ಹಲವು ವಿರೋಧ ಪಕ್ಷಗಳ ನಾಯಕರು ಸಂಸತ್ ಭವನದ ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮನ್ವಯ ಸಭೆಯಲ್ಲಿ ಮಾನವ ಸರಪಳಿ ರಚನೆಗೆ ನಿರ್ಧರಿಸಲಾಯಿತು.

ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಸಮನ್ವಯ ಸಭೆಯಲ್ಲಿ ಡಿಎಂಕೆ, ಎನ್‌ಸಿಪಿ, ಎಸ್‌ಪಿ, ಆರ್‌ಜೆಡಿ, ಬಿಆರ್‌ಎಸ್, ಸಿಪಿಎಂ, ಸಿಪಿಐ, ಜೆಡಿಯು, ಶಿವಸೇನೆ (ಯುಬಿಟಿ), ಜೆಎಂಎಂ, ಎಂಡಿಎಂಕೆ, ಎಎಪಿ, ವಿಸಿಕೆ ಮತ್ತು ಐಯುಎಂಎಲ್ ನಾಯಕರು ಭಾಗವಹಿಸಿದ್ದರು. ಆದರೆ ತೃಣಮೂಲ ಕಾಂಗ್ರೆಸ್ ಮತ್ತೊಮ್ಮೆ ಸಭೆಯಿಂದ ದೂರ ಉಳಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...