Homeಕರ್ನಾಟಕಲಿಂಗಾಯತರ ಕುರಿತು ಬಿಎಲ್‌ ಸಂತೋಷ್ ಹೇಳಿಕೆ ಸುಳ್ಳು: ಬಿಜೆಪಿ ಸ್ಪಷ್ಟನೆ

ಲಿಂಗಾಯತರ ಕುರಿತು ಬಿಎಲ್‌ ಸಂತೋಷ್ ಹೇಳಿಕೆ ಸುಳ್ಳು: ಬಿಜೆಪಿ ಸ್ಪಷ್ಟನೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎನ್ನುವ ಚರ್ಚೆ ಹುಟ್ಟುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್, ‘ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ ಲಿಂಗಾಯತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿತ್ತು ಇದನ್ನು ನಿರಾಕರಿಸಿರುವ ಬಿಜೆಪಿ ಪತ್ರಿಕಾಪ್ರಕಟಣೆ ಹೊರಡಿಸಿದೆ.

ರಾಜ್ಯದಲ್ಲಿ ಪ್ರಭಾವಿ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್, ಅವಧಿಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ಅದಾದನಂತೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರರ ಬಗ್ಗೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತಿಚೆಗೆ ಪಂಚಮಸಾಲಿ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಿಲ್ಲ. ಅವರು ಬಿಜೆಪಿಯನ್ನೇ ತೊರೆದು ಕಾಂಗ್ರೆಸ್ ಸೇರಿಕೊಂಡರು. ಈ ಎಲ್ಲ ಬೆಳವಣಿಗೆಯ ಮಧ್ಯೆ ಇದೀಗ ಬಿಎಲ್ ಸಂತೋಷ್ ಅವರು ಲಿಂಗಾಯತ ನಾಯಕರು ಹಾಗೂ ಆ ಸಮುದಾಯದವರ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿಯ ಪೇಪರ್ ಕಟಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸತ್ಯವಾದ ಸುದ್ದಿಯೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಗೊಂದಲಗಳಿದ್ದು, ಈ ಸುದ್ದಿಯ ಮೂಲ ಯಾವುದು ಎಂಬ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ.

ಈ ಬಗ್ಗೆ ಬಿಜೆಪಿ ನಿರಾಕರಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸುಳ್ಳು ಸುದ್ದಿ ಪೋಸ್ಟ್ ಮಾಡಲಾಗಿದೆ. ಈ ರೀತಿ ಹೇಳಿಕೆಯನ್ನು ಸಂತೋಷ್‌ ಅವರು ಎಂದಿಗೂ ಹೇಳಿರುವುದಿಲ್ಲ ಎಂದು ಅಧಿಕೃತವಾಗಿ ಧೃಢೀಕರಿಸಿದ್ದಾರೆ. ಅಪಪ್ರಚಾರಕ್ಕಾಗಿ ಸುಳ್ಳು ಸುದ್ದಿ ಹರಿಬಿಡಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

ವೈರಲ್ ಆದ ಸುದ್ದಿ ಪತ್ರಿಕೆಯಲ್ಲಿ ಏನಿದೆ?

ಬಿಜೆಪಿ ನಂಬಿಕ ಇಟ್ಟಿರುವುದು, ಹಿಂದುತ್ವದ ಆಧಾರದ ಮೇಲೆ ಹೊರತು ಯಾವುದೊ ನಾಯಕನ ಜಾತಿಯ ಮೇಲಲ್ಲ. ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬೇಕೆ ಹೊರತು ಯಾವುದೋ ವ್ಯಕ್ತಿಯ ಮೇಲಲ್ಲ. ಎಂದು ಬಿಜೆಪಿಯ ಸಂಘಟನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ರಾಜ್ಯ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು..

ರಾಜ್ಯದಲ್ಲಿ ಲಿಂಗಾಯತರ ಮತಗಳು ಕೈ ತಪ್ಪಿಹೋದರೆ ಪಕ್ಷಕ್ಕೆ ಭಾರೀ ಹೊಡತ ಎಂದು ಸಭೆಯಲ್ಲಿ ದನಿ ಎತ್ತಿದ ಕಾರ್ಯಕರ್ತರ ಮಾತಿಗೆ ಸಿಡಿಮಿಡಿಗೊಂಡು ಉತ್ತರಿಸಿ ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲ ಎಂದು ಹೇಳಿದರು.

ನಮಗೆ ಲಿಂಗಾಯತರ ಅಗತ್ಯವಿಲ್ಲ ಎಂದು ಅನೇಕ ಬಾರಿ ಹೇಳಿದ್ದೇನೆ. ಅವರ ಈಗಲೂ ಅದನ್ನೇ ಹೇಳುತ್ತೇನೆ. ಇಲ್ಲಿ ಯಾರೂ ಸಹ ಚಿರಂಜೀವಿಗಳಲ್ಲ. ಎಂದು ಪರೋಕ್ಷವಾಗಿ ಬಿ.ಎಸ್‌.ವೈ ಅವರ ಹೇಳದೆ ವ್ಯಂಗ್ಯವಾಡಿದರು.

ಬಿಜೆಪಿ ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ, ಲಿಂಗಾಯತರನ್ನು ಇನ್ನೆಷ್ಟು ದಿನ ಉತ್ತರ ಓಲೈಕೆ ಮಾಡಬೇಕು.

ಅವರ ಇಬ್ಬರು ಮಕ್ಕಳನ್ನು ಬೆಳೆಸಿದರೆ ಒಂದೇ ಸಮುದಾಯ ಬೆಳೆಯುತ್ತದೆ ಹೊರತು ಪಕ್ಷ ಬೆಳೆಯುವುದಿಲ್ಲ ಎಂದು ಕಾರ್ಯಕರ್ತರ ಮೇಲೆ ಕಿಡಿ ಕಾರಿದರು.

ಈ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಹುಬ್ಬಳ್ಳಿ, ಧಾರವಾಡ ಮೈಸೂರು, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಕಾರ್ಯಕರ್ತರು ಸಭೆಯಿಂದ ಹೊರ ನಡೆದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...