Homeಕರ್ನಾಟಕಲಿಂಗಾಯತರ ಕುರಿತು ಬಿಎಲ್‌ ಸಂತೋಷ್ ಹೇಳಿಕೆ ಸುಳ್ಳು: ಬಿಜೆಪಿ ಸ್ಪಷ್ಟನೆ

ಲಿಂಗಾಯತರ ಕುರಿತು ಬಿಎಲ್‌ ಸಂತೋಷ್ ಹೇಳಿಕೆ ಸುಳ್ಳು: ಬಿಜೆಪಿ ಸ್ಪಷ್ಟನೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎನ್ನುವ ಚರ್ಚೆ ಹುಟ್ಟುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್, ‘ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ ಲಿಂಗಾಯತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿತ್ತು ಇದನ್ನು ನಿರಾಕರಿಸಿರುವ ಬಿಜೆಪಿ ಪತ್ರಿಕಾಪ್ರಕಟಣೆ ಹೊರಡಿಸಿದೆ.

ರಾಜ್ಯದಲ್ಲಿ ಪ್ರಭಾವಿ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್, ಅವಧಿಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ಅದಾದನಂತೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರರ ಬಗ್ಗೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತಿಚೆಗೆ ಪಂಚಮಸಾಲಿ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಿಲ್ಲ. ಅವರು ಬಿಜೆಪಿಯನ್ನೇ ತೊರೆದು ಕಾಂಗ್ರೆಸ್ ಸೇರಿಕೊಂಡರು. ಈ ಎಲ್ಲ ಬೆಳವಣಿಗೆಯ ಮಧ್ಯೆ ಇದೀಗ ಬಿಎಲ್ ಸಂತೋಷ್ ಅವರು ಲಿಂಗಾಯತ ನಾಯಕರು ಹಾಗೂ ಆ ಸಮುದಾಯದವರ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿಯ ಪೇಪರ್ ಕಟಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸತ್ಯವಾದ ಸುದ್ದಿಯೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಗೊಂದಲಗಳಿದ್ದು, ಈ ಸುದ್ದಿಯ ಮೂಲ ಯಾವುದು ಎಂಬ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ.

ಈ ಬಗ್ಗೆ ಬಿಜೆಪಿ ನಿರಾಕರಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸುಳ್ಳು ಸುದ್ದಿ ಪೋಸ್ಟ್ ಮಾಡಲಾಗಿದೆ. ಈ ರೀತಿ ಹೇಳಿಕೆಯನ್ನು ಸಂತೋಷ್‌ ಅವರು ಎಂದಿಗೂ ಹೇಳಿರುವುದಿಲ್ಲ ಎಂದು ಅಧಿಕೃತವಾಗಿ ಧೃಢೀಕರಿಸಿದ್ದಾರೆ. ಅಪಪ್ರಚಾರಕ್ಕಾಗಿ ಸುಳ್ಳು ಸುದ್ದಿ ಹರಿಬಿಡಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

ವೈರಲ್ ಆದ ಸುದ್ದಿ ಪತ್ರಿಕೆಯಲ್ಲಿ ಏನಿದೆ?

ಬಿಜೆಪಿ ನಂಬಿಕ ಇಟ್ಟಿರುವುದು, ಹಿಂದುತ್ವದ ಆಧಾರದ ಮೇಲೆ ಹೊರತು ಯಾವುದೊ ನಾಯಕನ ಜಾತಿಯ ಮೇಲಲ್ಲ. ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬೇಕೆ ಹೊರತು ಯಾವುದೋ ವ್ಯಕ್ತಿಯ ಮೇಲಲ್ಲ. ಎಂದು ಬಿಜೆಪಿಯ ಸಂಘಟನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ರಾಜ್ಯ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು..

ರಾಜ್ಯದಲ್ಲಿ ಲಿಂಗಾಯತರ ಮತಗಳು ಕೈ ತಪ್ಪಿಹೋದರೆ ಪಕ್ಷಕ್ಕೆ ಭಾರೀ ಹೊಡತ ಎಂದು ಸಭೆಯಲ್ಲಿ ದನಿ ಎತ್ತಿದ ಕಾರ್ಯಕರ್ತರ ಮಾತಿಗೆ ಸಿಡಿಮಿಡಿಗೊಂಡು ಉತ್ತರಿಸಿ ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲ ಎಂದು ಹೇಳಿದರು.

ನಮಗೆ ಲಿಂಗಾಯತರ ಅಗತ್ಯವಿಲ್ಲ ಎಂದು ಅನೇಕ ಬಾರಿ ಹೇಳಿದ್ದೇನೆ. ಅವರ ಈಗಲೂ ಅದನ್ನೇ ಹೇಳುತ್ತೇನೆ. ಇಲ್ಲಿ ಯಾರೂ ಸಹ ಚಿರಂಜೀವಿಗಳಲ್ಲ. ಎಂದು ಪರೋಕ್ಷವಾಗಿ ಬಿ.ಎಸ್‌.ವೈ ಅವರ ಹೇಳದೆ ವ್ಯಂಗ್ಯವಾಡಿದರು.

ಬಿಜೆಪಿ ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ, ಲಿಂಗಾಯತರನ್ನು ಇನ್ನೆಷ್ಟು ದಿನ ಉತ್ತರ ಓಲೈಕೆ ಮಾಡಬೇಕು.

ಅವರ ಇಬ್ಬರು ಮಕ್ಕಳನ್ನು ಬೆಳೆಸಿದರೆ ಒಂದೇ ಸಮುದಾಯ ಬೆಳೆಯುತ್ತದೆ ಹೊರತು ಪಕ್ಷ ಬೆಳೆಯುವುದಿಲ್ಲ ಎಂದು ಕಾರ್ಯಕರ್ತರ ಮೇಲೆ ಕಿಡಿ ಕಾರಿದರು.

ಈ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಹುಬ್ಬಳ್ಳಿ, ಧಾರವಾಡ ಮೈಸೂರು, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಕಾರ್ಯಕರ್ತರು ಸಭೆಯಿಂದ ಹೊರ ನಡೆದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...