Homeಮುಖಪುಟಬಿಜೆಪಿಗೆ 10 ವರ್ಷಗಳ ಕಾಲ 'ಮಿಯಾ' ಮತಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ ಶರ್ಮಾ

ಬಿಜೆಪಿಗೆ 10 ವರ್ಷಗಳ ಕಾಲ ‘ಮಿಯಾ’ ಮತಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ ಶರ್ಮಾ

- Advertisement -
- Advertisement -

ಮುಂದಿನ 10 ವರ್ಷಗಳವರೆಗೆ ಬಾಲ್ಯವಿವಾಹದಂತಹ ಆಚರಣೆಗಳನ್ನು ಕೈಬಿಡುವವರೆಗೆ “ಮಿಯಾ” ಜನರ ಮತಗಳು ಬಿಜೆಪಿಗೆ ಅಗತ್ಯವಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಮಿಯಾ” ಎಂಬ ಪದವನ್ನು ದಕ್ಷಿಣ ಏಷ್ಯಾದಾದ್ಯಂತ ಮುಸ್ಲಿಮರು “ಸಂಭಾವಿತ” ಎಂದು ಅರ್ಥೈಸಲು ಬಳಸಿದರೆ, ಅಸ್ಸಾಂನಲ್ಲಿ ಈ ಪದವನ್ನು ಬಂಗಾಳಿ ಮೂಲದ ಮುಸ್ಲಿಮರನ್ನು ವಿವರಿಸಲು ಜನಾಂಗೀಯ ನಿಂದನೆಯಾಗಿ ನೋಡಲಾಗುತ್ತದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮಾ, ”ಚುನಾವಣೆಗಳು ಬಂದಾಗ, ನಮಗೆ ಮತ ಹಾಕಬೇಡಿ ಎಂದು ನಾನು ಅವರನ್ನು ವಿನಂತಿಸುತ್ತೇನೆ. ನೀವು ಯಾವಾಗ ಕುಟುಂಬ ಯೋಜನೆಯನ್ನು ಅನುಸರಿಸುತ್ತೀರಿ, ಬಾಲ್ಯ ವಿವಾಹವನ್ನು ನಿಲ್ಲಿಸುತ್ತೀರಿ ಮತ್ತು ಮೂಲಭೂತವಾದವನ್ನು ಹೊರಹಾಕುತ್ತೀರಿ, ಆಗ ನೀವು ನಮಗೆ ಮತ ಹಾಕಿ. ಇದು ಸಾಧ್ಯವಾಗಲು ಸುಮಾರು 10 ವರ್ಷಗಳು ಬೇಕಾಗುತ್ತದೆ. ನಾವು 10 ವರ್ಷಗಳ ನಂತರ ಅವರಲ್ಲಿ ಮತ ಕೇಳುತ್ತೇವೆ, ಈಗ ಮತ ಕೇಳುವುದಿಲ್ಲ” ಎಂದು ಹೇಳಿದ್ದಾರೆ.

”ಬಿಜೆಪಿ ಪರವಾಗಿ ಮತ ಚಲಾಯಿಸುವವರು ಎರಡು ಅಥವಾ ಮೂರಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಬಾರದು, ತಮ್ಮ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಬೇಕು, ಬಾಲ್ಯವಿವಾಹದಲ್ಲಿ ಪಾಲ್ಗೊಳ್ಳಬಾರದು ಮತ್ತು ಸೂಫಿಸಂ ಅನ್ನು ಅಳವಡಿಸಿಕೊಳ್ಳಲು ಮೂಲಭೂತವಾದವನ್ನು ಬಿಡಬಾರದು. ಈ ಷರತ್ತುಗಳನ್ನು ಅನುಸರಿಸಿದಾಗ ನಾವು ಮತ ಕೇಳಲು ‘ಚಾರ್’ಗೆ ಹೋಗುತ್ತೇನೆ” ಎಂದು ಶರ್ಮಾ ಹೇಳಿದರು.

ಶರ್ಮಾ ಸರ್ಕಾರವು ಫೆಬ್ರವರಿಯಿಂದ ಈ ಬಾಲ್ಯವಿವಾಹಗಳ ವಿರುದ್ಧದ ಕ್ರಮದ ಭಾಗವಾಗಿ 5,000 ಜನರನ್ನು ಬಂಧಿಸಿದೆ. 14 ವರ್ಷದೊಳಗಿನ ಬಾಲಕಿಯರನ್ನು ಮದುವೆಯಾದ ಪುರುಷರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಮತ್ತು 14 ರಿಂದ 18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾದವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪೊಲೀಸರು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.

ಬಾಲ್ಯ ವಿವಾಹದ ವಿರುದ್ಧದ ಅಭಿಯಾನದ ಭಾಗವಾಗಿ ರಾಜ್ಯ ಪೊಲೀಸರು ಮುಂದಿನ 10 ದಿನಗಳಲ್ಲಿ ಇನ್ನೂ 2,000 ರಿಂದ 3,000 ಪುರುಷರನ್ನು ಬಂಧಿಸಲಿದ್ದಾರೆ ಎಂದು ಸೆಪ್ಟೆಂಬರ್ 10 ರಂದು ಶರ್ಮಾ ಹೇಳಿದ್ದರು.

”ಮಿಯಾ” ಜನರುಬಿಜೆಪಿಗೆ ಮತ ಹಾಕದೆ, ನಮ್ಮ  ಷರತ್ತುಗಳನ್ನು ಅನುಸರಿಸಿದಾಗ ನಮ್ಮನ್ನು ಬೆಂಬಲಿಸಬಹುದು ಎಂದು ಶರ್ಮಾ ಭಾನುವಾರ ಹೇಳಿದ್ದಾರೆ.

”ಬಿಜೆಪಿ ಸಾರ್ವಜನಿಕರಿಗೆ ಒಳ್ಳೆಯದನ್ನೇ ಮಾಡುತ್ತದೆ. ಹಾಗಾಗಿ ಅವರು ನಮ್ಮನ್ನು ಬೆಂಬಲಿಸುತ್ತಾರೆ, ಆದರೆ ಅವರು ನಮಗೆ ಮತ ಹಾಕುವ ಅಗತ್ಯವಿಲ್ಲ. ನಮ್ಮನ್ನು ಬೆಂಬಲಿಸುವುದರಿಂದ ಯಾವುದೇ ಹಾನಿ ಇಲ್ಲ. ಅವರು ಹಿಮಂತ ಬಿಸ್ವ ಶರ್ಮಾ, ನರೇಂದ್ರ ಮೋದಿ ಮತ್ತು ಬಿಜೆಪಿಗೆ ಜಿಂದಾಬಾದ್ ಎಂದು ಕೂಗಲಿ” ಎಂದು ಶರ್ಮಾ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಗೆ ಅವಮಾನಿಸಲು ಮುಂದಾದ ಅಣ್ಣಾಮಲೈ: ಪತ್ರಕರ್ತರಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...