Homeಮುಖಪುಟಬಿಜೆಪಿಗೆ 10 ವರ್ಷಗಳ ಕಾಲ 'ಮಿಯಾ' ಮತಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ ಶರ್ಮಾ

ಬಿಜೆಪಿಗೆ 10 ವರ್ಷಗಳ ಕಾಲ ‘ಮಿಯಾ’ ಮತಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ ಶರ್ಮಾ

- Advertisement -
- Advertisement -

ಮುಂದಿನ 10 ವರ್ಷಗಳವರೆಗೆ ಬಾಲ್ಯವಿವಾಹದಂತಹ ಆಚರಣೆಗಳನ್ನು ಕೈಬಿಡುವವರೆಗೆ “ಮಿಯಾ” ಜನರ ಮತಗಳು ಬಿಜೆಪಿಗೆ ಅಗತ್ಯವಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಮಿಯಾ” ಎಂಬ ಪದವನ್ನು ದಕ್ಷಿಣ ಏಷ್ಯಾದಾದ್ಯಂತ ಮುಸ್ಲಿಮರು “ಸಂಭಾವಿತ” ಎಂದು ಅರ್ಥೈಸಲು ಬಳಸಿದರೆ, ಅಸ್ಸಾಂನಲ್ಲಿ ಈ ಪದವನ್ನು ಬಂಗಾಳಿ ಮೂಲದ ಮುಸ್ಲಿಮರನ್ನು ವಿವರಿಸಲು ಜನಾಂಗೀಯ ನಿಂದನೆಯಾಗಿ ನೋಡಲಾಗುತ್ತದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮಾ, ”ಚುನಾವಣೆಗಳು ಬಂದಾಗ, ನಮಗೆ ಮತ ಹಾಕಬೇಡಿ ಎಂದು ನಾನು ಅವರನ್ನು ವಿನಂತಿಸುತ್ತೇನೆ. ನೀವು ಯಾವಾಗ ಕುಟುಂಬ ಯೋಜನೆಯನ್ನು ಅನುಸರಿಸುತ್ತೀರಿ, ಬಾಲ್ಯ ವಿವಾಹವನ್ನು ನಿಲ್ಲಿಸುತ್ತೀರಿ ಮತ್ತು ಮೂಲಭೂತವಾದವನ್ನು ಹೊರಹಾಕುತ್ತೀರಿ, ಆಗ ನೀವು ನಮಗೆ ಮತ ಹಾಕಿ. ಇದು ಸಾಧ್ಯವಾಗಲು ಸುಮಾರು 10 ವರ್ಷಗಳು ಬೇಕಾಗುತ್ತದೆ. ನಾವು 10 ವರ್ಷಗಳ ನಂತರ ಅವರಲ್ಲಿ ಮತ ಕೇಳುತ್ತೇವೆ, ಈಗ ಮತ ಕೇಳುವುದಿಲ್ಲ” ಎಂದು ಹೇಳಿದ್ದಾರೆ.

”ಬಿಜೆಪಿ ಪರವಾಗಿ ಮತ ಚಲಾಯಿಸುವವರು ಎರಡು ಅಥವಾ ಮೂರಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಬಾರದು, ತಮ್ಮ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಬೇಕು, ಬಾಲ್ಯವಿವಾಹದಲ್ಲಿ ಪಾಲ್ಗೊಳ್ಳಬಾರದು ಮತ್ತು ಸೂಫಿಸಂ ಅನ್ನು ಅಳವಡಿಸಿಕೊಳ್ಳಲು ಮೂಲಭೂತವಾದವನ್ನು ಬಿಡಬಾರದು. ಈ ಷರತ್ತುಗಳನ್ನು ಅನುಸರಿಸಿದಾಗ ನಾವು ಮತ ಕೇಳಲು ‘ಚಾರ್’ಗೆ ಹೋಗುತ್ತೇನೆ” ಎಂದು ಶರ್ಮಾ ಹೇಳಿದರು.

ಶರ್ಮಾ ಸರ್ಕಾರವು ಫೆಬ್ರವರಿಯಿಂದ ಈ ಬಾಲ್ಯವಿವಾಹಗಳ ವಿರುದ್ಧದ ಕ್ರಮದ ಭಾಗವಾಗಿ 5,000 ಜನರನ್ನು ಬಂಧಿಸಿದೆ. 14 ವರ್ಷದೊಳಗಿನ ಬಾಲಕಿಯರನ್ನು ಮದುವೆಯಾದ ಪುರುಷರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಮತ್ತು 14 ರಿಂದ 18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾದವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪೊಲೀಸರು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ.

ಬಾಲ್ಯ ವಿವಾಹದ ವಿರುದ್ಧದ ಅಭಿಯಾನದ ಭಾಗವಾಗಿ ರಾಜ್ಯ ಪೊಲೀಸರು ಮುಂದಿನ 10 ದಿನಗಳಲ್ಲಿ ಇನ್ನೂ 2,000 ರಿಂದ 3,000 ಪುರುಷರನ್ನು ಬಂಧಿಸಲಿದ್ದಾರೆ ಎಂದು ಸೆಪ್ಟೆಂಬರ್ 10 ರಂದು ಶರ್ಮಾ ಹೇಳಿದ್ದರು.

”ಮಿಯಾ” ಜನರುಬಿಜೆಪಿಗೆ ಮತ ಹಾಕದೆ, ನಮ್ಮ  ಷರತ್ತುಗಳನ್ನು ಅನುಸರಿಸಿದಾಗ ನಮ್ಮನ್ನು ಬೆಂಬಲಿಸಬಹುದು ಎಂದು ಶರ್ಮಾ ಭಾನುವಾರ ಹೇಳಿದ್ದಾರೆ.

”ಬಿಜೆಪಿ ಸಾರ್ವಜನಿಕರಿಗೆ ಒಳ್ಳೆಯದನ್ನೇ ಮಾಡುತ್ತದೆ. ಹಾಗಾಗಿ ಅವರು ನಮ್ಮನ್ನು ಬೆಂಬಲಿಸುತ್ತಾರೆ, ಆದರೆ ಅವರು ನಮಗೆ ಮತ ಹಾಕುವ ಅಗತ್ಯವಿಲ್ಲ. ನಮ್ಮನ್ನು ಬೆಂಬಲಿಸುವುದರಿಂದ ಯಾವುದೇ ಹಾನಿ ಇಲ್ಲ. ಅವರು ಹಿಮಂತ ಬಿಸ್ವ ಶರ್ಮಾ, ನರೇಂದ್ರ ಮೋದಿ ಮತ್ತು ಬಿಜೆಪಿಗೆ ಜಿಂದಾಬಾದ್ ಎಂದು ಕೂಗಲಿ” ಎಂದು ಶರ್ಮಾ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಗೆ ಅವಮಾನಿಸಲು ಮುಂದಾದ ಅಣ್ಣಾಮಲೈ: ಪತ್ರಕರ್ತರಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...