Homeಮುಖಪುಟಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ನೀವು ನನ್ನನ್ನು ತಲೆಕೆಳಗಾಗಿ ಗಲ್ಲಿಗೇರಿಸಿದರೂ ಸರಿಯೇ, ನಾನು ನನ್ನ ಜನರಿಗೆ ದ್ರೋಹ ಬಗೆಯುವುದಿಲ್ಲ - ಅಂಬೇಡ್ಕರ್ ಹೇಳಿಕೆ ಉಲ್ಲೇಖಿಸಿ ಬಿಜೆಪಿ ಟಿಕೆಟ್ ನಿರಾಕರಿಸಿದ ಮಣಿಕಂದನ್

- Advertisement -
- Advertisement -

ಪಂಚರಾಜ್ಯ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ, ಕೇರಳದಲ್ಲಿ ಬಿಜೆಪಿ ಪಕ್ಷವು, ಪಕ್ಷದ ಕಾರ್ಯಕರ್ತನೂ ಅಲ್ಲದ ವ್ಯಕ್ತಿಗೆ ಟಿಕೆಟ್ ಘೋಷಿಸಿದೆ. ಆ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ.

ಇನ್ನು ಮೂರು ವಾರಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಭಾರತೀಯ ಜನತಾ ಪಕ್ಷಕ್ಕೆ ಸ್ಪಷ್ಟನೆ ಸಿಕ್ಕಿಲ್ಲ ಎನ್ನಲಾಗುತ್ತಿದೆ. 115 ಕ್ಷೇತ್ರಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿರುವ ನಾಯಕರು ಎರಡು, ಮೂರು ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಎಡವಿದ್ದಾರೆ.

ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಮನಂತವಾಡಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದ ಅಭ್ಯರ್ಥಿ ಸಿ. ಮಣಿಕಂದನ್, ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಂಬೇಡ್ಕರ್ ಹೇಳಿಕೆಯನ್ನು ಉಲ್ಲೇಖಿಸಿರುವ ಅವರು “ನೀವು ನನ್ನನ್ನು ತಲೆಕೆಳಗಾಗಿ ಗಲ್ಲಿಗೇರಿಸಿದರೂ ಸರಿಯೇ, ನಾನು ನನ್ನ ಜನರಿಗೆ ದ್ರೋಹ ಬಗೆಯುವುದಿಲ್ಲ” ಹೇಳಿ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.

ಇದನ್ನೂ ಓದಿ: ಟಿಕೆಟ್‌ ನಿರಾಕರಣೆ: ತಲೆ ಬೋಳಿಸಿಕೊಂಡ ಕೇರಳ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ!

ಏಪ್ರಿಲ್ 6 ರ ಚುನಾವಣೆಗೆ ಮನಂತವಾಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಆದಿವಾಸಿ ಪಣಿಯಾ ಸಮುದಾಯದ ಮೊದಲ ಪದವೀಧರರಾದ ಮಣಿಕಂದನ್ ಆಘಾತಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದಾಗ, ಅದು ಮನಂತವಾಡಿ ಅಭ್ಯರ್ಥಿಯಾಗಿ ಮಣಿಕುಟ್ಟನ್ (ಮಣಿಕಂದನ್ ಅವರ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಕಂಡುಬರುವ ಹೆಸರು) ಎಂಬ ಹೆಸರು ಕೂಡ ಇತ್ತು. ಅದು ಬೇರೆ ಮಣಿಕಂದನ್ ಇರಬೇಕು ಎಂದುಕೊಂಡಿದ್ದರು.

ವಾಸ್ತವವಾಗಿ ಅದು ತಮ್ಮದೆ ಹೆಸರು, ತಾನೇ ಇಲ್ಲಿನ ಬಿಜೆಪಿ ಅಭ್ಯರ್ಥಿ ಎಂದು ತಿಳಿದಾಗ, ಮಣಿಕಂದನ್ ಅವರು ಚುನಾವಣಾ ಸ್ಪರ್ಧೆಯಲ್ಲಿ ತಾನಿಲ್ಲ ಎಂದು ತಕ್ಷಣ ಸ್ಪಷ್ಟಪಡಿಸಿದ್ದಾರೆ. ಅವರ ಸ್ನೇಹಿತರು ಮತ್ತು ಕುಟುಂಬದವರು ಚುನಾವಣೆಯಿಂದ ಹೊರಗುಳಿಯುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೇರಳದ ಮಾಜಿ ಸಂಸದ ಪಿ.ಸಿ. ಚಾಕೊ

ಆದಿವಾಸಿ ಪಣಿಯಾ ಸಮುದಾಯದ ಮೊದಲ ಪದವೀಧರರಾದ ಮಣಿಕಂದನ್ ವಾಸ್ತವವಾಗಿ ಬಿಜೆಪಿ ಕಾರ್ಯಕರ್ತನೂ ಅಲ್ಲ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಯೋಜನೆಯನ್ನು ಹೊಂದಿರಲಿಲ್ಲ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಮನಂತವಾಡಿ ಕ್ಷೇತ್ರವನ್ನು ಬುಡಕಟ್ಟು ಸಮುದಾಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಇದರಿಂದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಸ್ಥಳೀಯ ನಾಯಕರನ್ನು ಕಣಕ್ಕಿಳಿಸಲು ಆರಂಭದಲ್ಲಿ ಕಿರು-ಪಟ್ಟಿ ಮಾಡಲಾಗಿತ್ತು. ಹಾಗಾಗಿ ಮಣಿಕಂದನ್ ಹೆಸರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಮನಂತವಾಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಿ.ಕೆ ಜಯಲಕ್ಷ್ಮಿ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಈಗ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ, ಪಕ್ಷದ ಕಾರ್ಯಕರ್ತನೂ ಅಲ್ಲದ ಮಣಿಕಂದನ್ ನಿರ್ಗಮಿಸುವುದರೊಂದಿಗೆ, ವಯನಾಡಿನ ಮೂರು ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿಗೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಯೇ ಇಲ್ಲ.


ಇದನ್ನೂ ಓದಿ: ಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...